ಕಾವೇರಿ ಆರತಿಗೆ ಶಿವಕುಮಾರ್ ಚಾಲನೆ 
ರಾಜ್ಯ

ಇಡೀ ನಾಡನ್ನು ಬೆಳಗಲಿದೆ ಕಾವೇರಿ ಆರತಿ ಜ್ಯೋತಿ; ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಇತಿಹಾಸ ಸೃಷ್ಠಿ: ಡಿ.ಕೆ ಶಿವಕುಮಾರ್

ಕಾವೇರಿ ಆರತಿಯನ್ನು ಬರೀ ಧಾರ್ಮಿಕ ಕಾರ್ಯಕ್ರಮವಾಗಿ ರೂಪಿಸಿಲ್ಲ. ನಮ್ಮೆಲ್ಲರನ್ನು ಕಾಪಾಡುವ ಕಾವೇರಿ ತಾಯಿಗೆ ಗೌರವ ಸಲ್ಲಿಸುವ, ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮವಾಗಿ ರೂಪಿಸಿದ್ದೇವೆ. ಇದನ್ನು ಯಾವುದೇ ತೊಂದರೆ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ.

ಶ್ರೀರಂಗಪಟ್ಟಣ: ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ಎಸ್‌) ಬೃಂದಾವನ ಉದ್ಯಾನದ ಆವರಣದಲ್ಲಿ ನಡೆದ ಐತಿಹಾಸಿಕ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಶುಕ್ರವಾರ ಸಂಜೆ ಚಾಲನೆ ನೀಡಿದರು.

10 ಸಾವಿರಕ್ಕೂ ಹೆಚ್ಚು ನೆರೆದಿದ್ದ ಭಕ್ತರ ಸಮ್ಮುಖದಲ್ಲಿ ಮೊದಲಿಗೆ ದಕ್ಷಿಣ ಭಾರತ ಶೈಲಿಯಲ್ಲಿ ಸ್ಥಳೀಯ ಪುರೋಹಿತರ ತಂಡ ಆರತಿ ಬೆಳಗಿತು. ಆನಂತರ ವಾರಣಾಸಿಯಿಂದ ಬಂದಿದ್ದ 13 ಜನ ಪುರೋಹಿತರ ತಂಡ ಆರತಿ ಬೆಳಗಿತು. ನಾಡಿನ ಜೀವನದಿ, ನಮ್ಮೆಲ್ಲರ ತಾಯಿ ಕಾವೇರಿಗೆ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆರತಿ ಬೆಳಗುವ ಈ ದಿವ್ಯ ಕ್ಷಣವು ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ನಡೆಯುವ ಗಂಗಾ ಆರತಿಯನ್ನೇ ಮೀರಿಸುವಂತೆ ಭಾವಿಸಿತು.

"ಕಾವೇರಿ ಆರತಿಯನ್ನು ಬರೀ ಧಾರ್ಮಿಕ ಕಾರ್ಯಕ್ರಮವಾಗಿ ರೂಪಿಸಿಲ್ಲ. ನಮ್ಮೆಲ್ಲರನ್ನು ಕಾಪಾಡುವ ಕಾವೇರಿ ತಾಯಿಗೆ ಗೌರವ ಸಲ್ಲಿಸುವ, ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮವಾಗಿ ರೂಪಿಸಿದ್ದೇವೆ. ಇದನ್ನು ಯಾವುದೇ ತೊಂದರೆ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ " ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

"ಹೆತ್ತತಾಯಿಗೆ ಗೌರವ ನೀಡುತ್ತಿರುವಂತೆ ತುತ್ತು ನೀಡುವ ತಾಯಿಗೆ ಶುಭ ಲಗ್ನ, ಶುಭ ಗಳಿಗೆಯಲ್ಲಿ ನಮನ ಸಲ್ಲಿಸುತ್ತಿದ್ದೇವೆ. ದೇಹದಲ್ಲಿ ರಕ್ತ ಹರಿದರೆ ಶಕ್ತಿ, ಈ ರಕ್ತಕ್ಕೆ ಶಕ್ತಿ ನೀಡುವುದು ಕಾವೇರಿ ತಾಯಿ ನೀರು. ಈ ತಾಯಿಗೆ ಪೂಜೆ ಮಾಡುವುದೇ ಮನಸ್ಸಿಗೆ ನೆಮ್ಮದಿ, ಕಣ್ಣಿಗೆ ಹಬ್ಬ. ಕನ್ನಡಿಗರ ಭಾಗ್ಯ ದೇವತೆ, ರೈತರ ಜೀವದಾತೆ ಕಾವೇರಿ ಮಾತೆ" ಎಂದು ಬಣ್ಣಿಸಿದರು.

ಸೂರ್ಯ, ಚಂದ್ರ, ಗಾಳಿಯಿಲ್ಲದೇ ನಾವುಗಳು ಬದುಕಲು ಸಾಧ್ಯವಿಲ್ಲ. ಪಂಚಭೂತಗಳಿಗೆ ಪ್ರತಿದಿನ ನಾವು ಪೂಜೆ ಮಾಡುತ್ತೇವೆ. ಅದೇ ರೀತಿ ರಾಜ್ಯದ ಹಳೇ ಮೈಸೂರು ಭಾಗದ ಜೀವನದಿಯಾಗಿ ಮೂರುವರೆ ಕೋಟಿ ಜನರು ಸೇರಿದಂತೆ ಪಕ್ಕದ ತಮಿಳುನಾಡು,‌ ಪಾಂಡಿಚೇರಿಯ ಜನರಿಗೆ ಜೀವನಾಧಾರವಾದ ಕಾವೇರಿಗೆ ನಾವು ಪೂಜೆ ಸಲ್ಲಿಸುತ್ತಿದ್ದೇವೆ.‌ ಇಂದು ಬೆಳಗಿರುವ ಜ್ಯೋತಿ ಇಡೀ ರಾಜ್ಯವನ್ನು ಶಾಶ್ವತವಾಗಿ ಬೆಳಗುತ್ತದೆ ಎಂದರು.

"ಕೊಡಗಿನಲ್ಲಿ ಹುಟ್ಟಿದ ಈ ನದಿ ಕನ್ನಂಬಾಡಿಯಲ್ಲಿ ನೆಲೆ ನಿಂತಿದ್ದಾಳೆ. ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆಯಾಗಿದೆ. ಕಾವೇರಿ ಆರತಿ ಕಾರ್ಯಕ್ರಮ ಎಷ್ಟು ದೊಡ್ಡ ಮಟ್ಟದ ಕಾರ್ಯಕ್ರಮವಾಗಿ ಬೆಳೆಯುತ್ತದೆ ಎಂಬುದನ್ನು ನಾನು ಈಗ ಹೇಳಲು ಹೋಗುವುದಿಲ್ಲ" ಎಂದರು.

"ನಾವು ಯಾರೂ ಸಹ ಶಾಶ್ವತರಲ್ಲ.‌ ಆದರೆ ನಾವು ಮಾಡುವ ಕೆಲಸಗಳು ಶಾಶ್ವತ. ಕೃಷ್ಣರಾಜ ಒಡೆಯರ್ ಅವರನ್ನು, ವಿಶ್ವೇಶ್ವರಯ್ಯ ಅವರನ್ನು ಸದಾ ನೆನಪಿನಲ್ಲಿಟ್ಟುಕೊಂಡಿದ್ದೇವೆ. ಏಕೆಂದರೆ ನಾವು ಬದುಕುವುದೇ ಸ್ವಲ್ಪಕಾಲ ಆದರೆ ಕೆಲಸಗಳು ಸದಾಕಾಲ ಉಳಿಯಬೇಕು. ಪ್ರಯತ್ನ ವಿಫಲವಾಗಬಹುದು ಆದರೆ ಪ್ರಾರ್ಥನೆ ವಿಫಲವಾಗಲು ಸಾಧ್ಯವಿಲ್ಲ. ಅದೇ ರೀತಿ ನಮ್ಮನ್ನು ಕಾವೇರಿ ತಾಯಿ ಎಂದೂ ಕೈ ಬಿಡುವುದಿಲ್ಲ. 92 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ತುಂಬಿ ಇತಿಹಾಸ ನಿರ್ಮಾಣವಾಗಿದೆ" ಎಂದರು.

"ಕಾವೇರಿ ಆರತಿಯನ್ನು ಹತ್ತು ಸಾವಿರ ಜನರು ಕುಳಿತು ವೀಕ್ಷಣೆ ಮಾಡುವಂತಹ ಸ್ಟೇಡಿಯಂ ಮಾದರಿ ಮಂಟಪ ನಿರ್ಮಾಣ ಮಾಡಿ ವಾರಕ್ಕೆ ಮೂರು ದಿನ ಆರತಿ ನಡೆಸುವುದು ನಮ್ಮ ಆಲೋಚನೆಯಾಗಿತ್ತು. ಕಾರಣಾಂತರಗಳಿಂದ ಇದು ಸಾಧ್ಯವಾಗಿಲ್ಲ. ಸಚಿವರಾದ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ವಾರಣಾಸಿ, ಹರಿದ್ವಾರಗಳಲ್ಲಿ ನಡೆಯುವ ಗಂಗಾ ಆರತಿಯನ್ನು ಅಧ್ಯಯನ ಮಾಡಲು ತಂಡವನ್ನು ಕಳುಹಿಸಲಾಗಿತ್ತು. ಇವರು ವರದಿ ನೀಡಿದ್ದಾರೆ. ಆದಷ್ಟು ಬೇಗ ಇದು ನೆರವೇರುವಂತೆ ಆಗಲಿ" ಎಂದರು.

"ಮೇಕೆದಾಟು ಯೋಜನೆಗೆ ನಾವೆಲ್ಲರೂ ಹೆಜ್ಜೆ ಹಾಕಿದ್ದೇವೆ ಆದಷ್ಟು ಬೇಗ ಫಲ ದೊರಕುವಂತೆ ಕಾವೇರಿ ತಾಯಿ ಹಾಗೂ ಚಾಮುಂಡಿ ತಾಯಿ ಆಶೀರ್ವಾದ ಮಾಡುತ್ತಾರೆ. ರಾಜ್ಯದ ಜನರೂ ಸಹ ಪ್ರಾರ್ಥನೆ ಮಾಡಬೇಕೆಂದು ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವು ರೂಪಿಸಿರುವ ಯೋಜನೆಯನ್ನು ಮುಂದುವರೆಸುತ್ತೇವೆ. ನಮಗೆ ತಾಯಿ ಚಾಮುಂಡಿ ಸಂಪೂರ್ಣವಾದ ಶಕ್ತಿ ನೀಡುತ್ತಾಳೆ ಎನ್ನುವ ಭರವಸೆಯಿದೆ ಎಂದು ಹೇಳಿದರು.

"ಅಧಿಕಾರಿಗಳಾದ ರಾಮ್ ಪ್ರಸಾತ್ ಮನೋಹರ್ ಅವರು ಬಳ್ಳಾರಿಯಲ್ಲಿದ್ದಾಗ ತುಂಗಾ ಆರತಿಯನ್ನು ಚೆನ್ನಾಗಿ ರೂಪಿಸಿದ್ದರು. ಆದ ಕಾರಣಕ್ಕೆ ಅವರಿಗೆ ಕಾವೇರಿ ಆರತಿ ಜವಾಬ್ದಾರಿ ನೀಡಲಾಗಿದೆ" ಎಂದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT