ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿಯಲ್ಲಿ ಕುಂಭದ್ರೋಣ ಮಳೆ: ಹಲವು ಸೇತುವೆ ಜಲಾವೃತ; ಶಾಲೆಗಳಿಗೆ 2 ದಿನ ರಜೆ ಘೋಷಣೆ

ಜಿಲ್ಲಾಧಿಕಾರಿಗಳ ಆದೇಶದಂತೆ ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಕಲಬುರಗಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿರುತ್ತದೆ.

ಕಲಬುರಗಿ: ತಾಲ್ಲೂಕಿನಲ್ಲಿ ಭಾರಿ ಮಳೆಯಿಂದ ಎಲ್ಲೆಡೆ ಪ್ರವಾಹ ಉಂಟಾಗಿದೆ. ಇದರಿಂದ ಹಲವು ಸೇತುವೆಗಳು ಜಲಾವೃತಗೊಂಡಿವೆ. ಇದರಿಂದ ಹಲವು ಗ್ರಾಮಗಳ ಸಂಪರ್ಕ‌ ಕಡಿದುಕೊಂಡಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.

ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಹಿನ್ನೆಲೆ ದಸರಾ ರಜೆ ನಡುವೆಯೂ ಕೆಲವು ಆಡಳಿತ ಮಂಡಳಿಯವರು ಶಾಲೆ ನಡೆಸುತ್ತಿದ್ದು, ಮಕ್ಕಳ ಹಿತದೃಷ್ಟಿಯಿಂದ ಸದರಿ ಶಾಲೆಗಳಿಗೆ ಸೆಪ್ಟೆಂಬರ್ 27 ಮತ್ತು 28 ರಂದು ರಜೆ ಘೋಷಿಸಿ ಡಿ.ಡಿ.ಪಿ.ಐ ಸೂರ್ಯಕಾಂತ ಮದಾನೆ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಕಲಬುರಗಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿರುತ್ತದೆ. ಪ್ರಯುಕ್ತ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಶಾಲೆಗಳಿಗೆ ಈಗಾಗಲೇ ದಸರಾ ರಜೆ ಇದ್ದು ಜಿಲ್ಲೆಯ ಕೆಲವು ಶಾಲೆಗಳ ಆಡಳಿತ ಮಂಡಳಿಯವರು ದಸರಾ ರಜೆಯಿಂದ ವಿನಾಯತಿ ಪಡೆದುಕೊಂಡು ಶಾಲೆಗಳನ್ನು ನಡೆಸುತ್ತಿದ್ದಾರೆ.

ಸದರಿ ಶಾಲೆಗಳಿಗೆ ಮುಂಜಾಗೃತ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ದಿನಾಂಕ: 27-09-2025 ಮತ್ತು 28-09-2025ರಂದು ಎರಡು ದಿನಗಳ ಕಾಲ ರಜೆ ಘೋಷಿಸಿ ಆದೇಶಿಸಿದೆ.

ಚಂದ್ರಂಪಳ್ಳಿ ಜಲಾಶಯಕ್ಕೆ 7,500 ಕ್ಯೂಸೆಕಗೂ ಅಧಿಕ ಒಳ ಹರಿವಿದ್ದು ಮೂರು ಗೇಟುಗಳನ್ನು ತಲಾ 10 ಅಡಿ ತೆರೆದು ನೀರು ಬಿಡಲಾಗಿದೆ. ಇದರಿಂದ ಚಂದ್ರಂಪಳ್ಳಿ ಕೂಡು ಸೇತುವೆ ಸಂಪೂರ್ಣ ಮುಳುಗಿದೆ. ಗ್ರಾಮ ಸಂಪರ್ಕ‌ ಕಡಿದುಕೊಂಡಿದ್ದು ಗ್ರಾಮಸ್ಥರು ಜಾಗೃತರಾಗಿರಲು ಯೋಜನಾಧಿಕಾರಿ ಚೇತನ ಕಳಸ್ಕರ ಮನವಿ‌ ಮಾಡಿದ್ದಾರೆ.‌

ತಾಲ್ಲೂಕಿನಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಜೋರು‌ ಮಳೆ ಸುರಿಯುತ್ತಿದ್ದು‌ ಕುಂಭ ದ್ರೋಣ ಮಳೆಗೆ ಜನರು ತಲ್ಲಣಗೊಂಡಿದ್ದಾರೆ. ಚಂದಾಪುರ, ಗಾರಂಪಳ್ಳಿ, ಅಣವಾರ, ಕಲ್ಲೂರು, ಕನಕಪುರ ಸೇರಿದಂತೆ ವಿವಿಧೆಡೆ ಮನೆಗಳಿಗೆ‌ ನೀರು ನುಗ್ಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi blast: ಸ್ಫೋಟಕ್ಕೂ ಮುನ್ನ 'ಆತ್ಮಾಹುತಿ ಬಾಂಬ್ ದಾಳಿ' ಬಗ್ಗೆ ಮಾತಾಡಿದ ಡಾ. ಉಮರ್; ಉಗ್ರ ಹೇಳಿದ್ದೇನು?

Delhi Red Fort blast: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ..!

ಸೌದಿ ಬಸ್‌ ದುರಂತ: ಬೆಂಕಿಯಲ್ಲಿ ಬೆಂದು ಹೋದವು ಒಂದೇ ಕುಟುಂಬದ ಮೂರು ತಲೆಮಾರಿನ 18 ಜೀವಗಳು !

SIR ಕೆಲಸ ಬಹಿಷ್ಕರಿಸಿದ ತಮಿಳುನಾಡು ಕಂದಾಯ ಇಲಾಖೆ ನೌಕರರು!

ಪಶ್ಚಿಮ ಬಂಗಾಳ: SIR ಸಮಯದಲ್ಲಿ ನಕಲಿ, ಮೃತ ಮತದಾರರನ್ನು ಪತ್ತೆಹಚ್ಚಲು ECಯಿಂದ AI ಬಳಕೆ!

SCROLL FOR NEXT