ರಷ್ಯಾ ಮಹಿಳೆ 
ರಾಜ್ಯ

Gokarna Cave: ಗುಹೆಯಲ್ಲಿ ವಾಸವಾಗಿದ್ದ ತಾಯಿ-ಮಕ್ಕಳನ್ನು ರಷ್ಯಾಗೆ ಕಳಿಸಿ; ಕೇಂದ್ರಕ್ಕೆ ಹೈಕೋರ್ಟ್

ಮಹಿಳೆಯ ಪತಿ ರಷ್ಯಾ ನಿವಾಸಿ ಡೋರ್‌ಶ್ಲೋಮೋ ಗೋಲ್ಡ್‌ಸ್ಟೈನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರ ಪೀಠ ಕೇಂದ್ರಕ್ಕೆ ಈ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.

ಬೆಂಗಳೂರು: ಗೋಕರ್ಣದ ರಾಮತೀರ್ಥ ಬೆಟ್ಟದ ಗುಹೆಯೊಂದರಲ್ಲಿ ವಾಸವಿದ್ದ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ರಷ್ಯಾಗೆ ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಮಹಿಳೆಯ ಪತಿ ರಷ್ಯಾ ನಿವಾಸಿ ಡೋರ್‌ಶ್ಲೋಮೋ ಗೋಲ್ಡ್‌ಸ್ಟೈನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರ ಪೀಠ ಕೇಂದ್ರಕ್ಕೆ ಈ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.

ಗುಹೆಯಲ್ಲಿ ತಂಗಿದ್ದ ಮಹಿಳೆ ಮತ್ತು ಆಕೆಯ ಪುತ್ರಿಯರು ರಷ್ಯಾದಿಂದ ಭಾರತಕ್ಕೆ ಬಂದು ವೀಸಾ ಅವಧಿ ಮೀರಿ ನೆಲೆಸಿದ್ದಾರೆ. ಹಾಗಾಗಿ ಪ್ರಕರಣ ಕುರಿತು ರಷ್ಯಾ ಸರ್ಕಾರಕ್ಕೆ ಎಲ್ಲಾ ವಿವರ ಒದಗಿಸಬೇಕು. ಜತೆಗೆ, ಮಹಿಳೆ ಸಹ ತನ್ನ ಮಕ್ಕಳ ಜೊತೆ ರಷ್ಯಾಗೆ ಹಿಂತಿರುಗಲು ಅನುಮತಿ ನೀಡಬೇಕೆಂದು ಮಹಿಳೆಯ ಪತಿ ಕೋರಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರು, ರಷ್ಯಾ ಮಹಿಳೆ, ಆಕೆಯ ಇಬ್ಬರು ಪುತ್ರಿಯರು ಸ್ವದೇಶಕ್ಕೆ ವಾಪಸಾಗಲು ಅಗತ್ಯ ಪ್ರಯಾಣ ದಾಖಲೆ ಒದಗಿಸುವಂತೆ ಸೂಚನೆ ನೀಡಿದೆ.

ಮತ್ತೊಂದೆಡೆ ಅವರನ್ನು ಕರೆತರಲು ರಷ್ಯಾ ಸರ್ಕಾರ ಕೂಡ ಅಧಿಕಾರಿಗಳಿಗೆ ಸೂಚಿಸಿದೆ. ಆದ್ದರಿಂದ ತಾಯಿ, ಮಕ್ಕಳನ್ನು ಶೀಘ್ರ ರಷ್ಯಾಗೆ ವಾಪಸ್ ಕಳಿಸಬೇಕು. ಅದಕ್ಕೆ ಅಗತ್ಯವಿರುವ ಎಲ್ಲ ದಾಖಲೆ ಒದಗಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪೀಠ ಸೂಚಿಸಿದೆ.

ನೀನಾ ಕುಟ್ನಿಯಾ ಅವರು ತಮ್ಮ ಇಬ್ಬರು ಮಕ್ಕಳೊಂದಿಗೆ ಗೋಕರ್ಣದ ರಾಮತೀರ್ಥ ಬೆಟ್ಟದ ಗುಹೆಯೊಂದರಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದರು. ಜುಲೈ 9, 2025 ರಂದು, ಭೂಕುಸಿತದ ನಂತರ ತಪಾಸಣೆ ನಡೆಸುತ್ತಿದ್ದ ಗೋಕರ್ಣ ಪೊಲೀಸರ ತಂಡವು, ಗುಹೆಯ ಬಳಿ ಬಟ್ಟೆಗಳನ್ನು ಒಣಗಿ ಹಾಕಿದ್ದನ್ನು ಗಮನಿಸಿ ಒಳಗೆ ಪರಿಶೀಲಿಸಿದಾಗ, ನೀನಾ ಮತ್ತು ಅವರ ಮಕ್ಕಳು ಪತ್ತೆಯಾಗಿದ್ದರು.

ಈ ನಡುವೆ ನೀನಾ ಅವರ ಸಂಗಾತಿಯಾದ ಇಸ್ರೇಲಿ ಉದ್ಯಮಿ ಡ್ರೋರ್ ಗೋಲ್ಡ್‌ಸ್ಟೈನ್. ತಮ್ಮ ಇಬ್ಬರು ಮಕ್ಕಳ ಸಂರಕ್ಷಣೆಯ ಹಕ್ಕಿಗಾಗಿ ಕಾನೂನು ಹೋರಾಟ ಆರಂಭಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!