ಸಿಲಿಂಡರ್ ಸ್ಫೋಟ 
ರಾಜ್ಯ

ಹೊಸಪೇಟೆ: ಅಡುಗೆ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ 8 ಮಂದಿಗೆ ಗಾಯ

ಹೊಸಪೇಟೆ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆಯಾಗಿದೆ. ಮನೆಯಲ್ಲಿ ಸುಮಾರು 10 ಮಂದಿ ಇದ್ದರು. ಬೆಳಿಗ್ಗೆ ಅಡುಗೆ ಅನಿಲ ಸೋರಿಕೆಯ ವಾಸನೆ ಬರುತ್ತಿತ್ತು

ಹೊಸಪೇಟೆ : ತಾಲ್ಲೂಕಿನ ಗಾದಿಗನೂರಿನಲ್ಲಿ ಶನಿವಾರ ಬೆಳಿಗ್ಗೆ 5.15ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತೋರಣಗಲ್‌ನ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕವಿತಾ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಹೊಸಪೇಟೆ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆಯಾಗಿದೆ. ಮನೆಯಲ್ಲಿ ಸುಮಾರು 10 ಮಂದಿ ಇದ್ದರು. ಬೆಳಿಗ್ಗೆ ಅಡುಗೆ ಅನಿಲ ಸೋರಿಕೆಯ ವಾಸನೆ ಬರುತ್ತಿತ್ತು ಎಂದು ಹೇಳಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಯೇ ಕುಸಿದಿದೆ.

ಬೆಳಿಗ್ಗೆ ಸ್ಟವ್‌ ಹಚ್ಚಲು ಕವಿತಾ ಯತ್ನಿಸಿದಾಗ ಏಕಾ ಏಕಿ ಬೆಂಕಿ ಹತ್ತಿಕೊಂಡಿತು. ಸ್ಫೋಟದಿಂದ ಮನೆ ಶೇ 50ರಷ್ಟು ಧ್ವಂಸವಾಗಿದೆ. ಕವಿತಾ ಅವರಲ್ಲದೆ, ಹಾಲಪ್ಪ, ಮೈಲಾರಪ್ಪ, ಗಂಗಮ್ಮ, ಮಲ್ಲಮ್ಮ, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಹೊಸಪೇಟೆಯಿಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Op Sindoor ವೇಳೆ ಕದನ ವಿರಾಮಕ್ಕೆ ಅಂಗಲಾಚಿದ್ದಿರಿ: ನಿಮ್ಮ ಪರಮಾಣು ಬ್ಲ್ಯಾಕ್‌ಮೇಲ್‌ಗೆ ಹೆದರೋಲ್ಲ; ವಿಶ್ವಸಂಸ್ಥೆಯಲ್ಲಿ ಪಾಕ್'ಗೆ ಭಾರತ ಛೀಮಾರಿ

AICC ರವಾನಿಸಿದ್ದ ಪಟ್ಟಿ ಮಾರ್ಪಾಡು ಮಾಡಿದ ಸಿಎಂ: 7 ಹೆಸರು ಕೈಬಿಟ್ಟ ಸಿದ್ದರಾಮಯ್ಯ!

Asia Cup 2025: ಹ್ಯಾಟ್ರಿಕ್ ಅರ್ಧಶತಕ, ಗರಿಷ್ಠ ರನ್... Virat Kohli, ರಿಜ್ವಾನ್ ರೆಕಾರ್ಡ್ ಸೇರಿ ಹಲವು ದಾಖಲೆಗಳ ಮುರಿದ Abhishek Sharma

Asia Cup 2025: ಸೂಪರ್ ಓವರ್ ಹೈಡ್ರಾಮಾ, Dasun Shanaka ರನೌಟ್ ವಿವಾದ, ಔಟ್ ಆಗಿದ್ದರೂ ನಾಟೌಟ್ ಕೊಟ್ಟಿದ್ದೇಕೆ? ಇಲ್ಲಿದೆ ಉತ್ತರ

ಧರ್ಮಸ್ಥಳ ಪ್ರಕರಣ: ತಪ್ಪು ಮಾಡದಿದ್ದರೂ, ನಮ್ಮ ಮೇಲೆ ಯಾಕಿಷ್ಟು ದ್ವೇಷ-ಆರೋಪ; ಡಾ. ವೀರೇಂದ್ರ ಹೆಗ್ಗಡೆ

SCROLL FOR NEXT