ಬಿಜೆಪಿ ಕೋರ್ ಕಮಿಟಿ ಸಭೆ 
ರಾಜ್ಯ

ರಸ್ತೆಗುಂಡಿ ಸಮಸ್ಯೆ ಬಗ್ಗೆ ಸರ್ಕಾರಕ್ಕೆ ಮುಜುಗರ ತರಲು ಬಿಜೆಪಿ ಅಭಿಯಾನ: ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

ಬಿಜೆಪಿ ಆಡಳಿತದ ಅವಧಿಯಲ್ಲಿ, ನಾವು ಎನ್‌ಡಿಆರ್‌ಎಫ್ ಮಾನದಂಡಗಳನ್ನು ವಿನಾಯಿತಿ ನೀಡಿ ರಾಜ್ಯ ಬಜೆಟ್‌ನಿಂದ ಹಣವನ್ನು ಮೀಸಲಿಡುವ ಮೂಲಕ ರೈತರಿಗೆ ಸಹಾಯ ಮಾಡಲು ಧಾವಿಸಿದೆವು.

ಬೆಂಗಳೂರು: ಎರಡೂವರೆ ತಿಂಗಳ ಬಳಿಕ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟದ ಕುರಿತು ಚರ್ಚೆ ನಡೆಸಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಹಾನಿ‌ ಉಂಟಾಗಿರುವ ಕಾರಣ ಬಿಜೆಪಿ ತಂಡ ಸ್ಥಳಕ್ಕೆ ಭೇಟಿ ನೀಡಲಿದ್ದು, ರಸ್ತೆ ಗುಂಡಿ ಮುಚ್ಚುವ ಹೋರಾಟವನ್ನು ಅಭಿಯಾನದ ರೀತಿ ಮುಂದುವರಿಸಲು ಬಿಜೆಪಿ ರಾಜ್ಯ ಕೋರ್ ಕಮಿಟಿ ನಿರ್ಧರಿಸಿದೆ.

ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಪಕ್ಷದ ನಾಯಕರು ಭಾರೀ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವ ಬಗ್ಗೆ ಸಮಿತಿ ಚರ್ಚಿಸಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ವೈಫಲ್ಯ. ರೈತರು, ದಲಿತರು ಮತ್ತು ಶೋಷಿತ ವರ್ಗವನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ನಮ್ಮ ಭವಿಷ್ಯದ ಹೋರಾಟದ ನೀಲನಕ್ಷೆಯನ್ನು ಚರ್ಚಿಸಲಾಯಿತು ಎಂದು ರಾಜೀವ್ ಹೇಳಿದರು.

ಈ ಮಳೆಗಾಲದಲ್ಲಿ 16 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ ಮತ್ತು ಸರ್ಕಾರವು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ರಾಜೀವ್ ಹೇಳಿದರು. “ಬಿಜೆಪಿ ಆಡಳಿತದ ಅವಧಿಯಲ್ಲಿ, ನಾವು ಎನ್‌ಡಿಆರ್‌ಎಫ್ ಮಾನದಂಡಗಳನ್ನು ವಿನಾಯಿತಿ ನೀಡಿ ರಾಜ್ಯ ಬಜೆಟ್‌ನಿಂದ ಹಣವನ್ನು ಮೀಸಲಿಡುವ ಮೂಲಕ ರೈತರಿಗೆ ಸಹಾಯ ಮಾಡಲು ಧಾವಿಸಿದೆವು. ಪ್ರಸ್ತುತ ಸರ್ಕಾರವು ರೈತರಿಗೆ ಸಹಾಯ ಮಾಡಲು ತನ್ನ ಬಜೆಟ್‌ನಿಂದ ಒಂದು ಪೈಸೆಯನ್ನೂ ಬಿಡುಗಡೆ ಮಾಡಿಲ್ಲ” ಎಂದು ಅವರು ಹೇಳಿದರು.

ಭಾರೀ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲು ಸಮಿತಿ ಸದಸ್ಯರ ನೇತೃತ್ವದಲ್ಲಿ ತಂಡಗಳನ್ನು ರಚಿಸುವ ಬಗ್ಗೆ ಚರ್ಚಿಸಲಾಗಿದೆ. ಜಿಎಸ್ಟಿ ಸ್ಲ್ಯಾಬ್‌ನಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ಇದು ಪ್ರತಿಯೊಬ್ಬ ಗ್ರಾಹಕರನ್ನು ತಲುಪಬೇಕು. ಹಳೆಯ ಎಂಆರ್‌ಪಿಯಲ್ಲಿ ಗ್ರಾಹಕರು ಮೋಸ ಹೋಗುತ್ತಿದ್ದರೂ ಸರ್ಕಾರ ಅದನ್ನು ನಿರ್ಲಕ್ಷಿಸಿದೆ ಹೀಗಾಗಿ ಜಿಎಸ್ ಟಿ ಇಳಿಕೆ ಪ್ರಯೋಜನಗಳು ಗ್ರಾಹಕರನ್ನು ತಲುಪುವಂತೆ ಬಿಜೆಪಿ ತನ್ನ ಎಲ್ಲಾ ಪ್ರತಿನಿಧಿಗಳನ್ನು ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ನಿರ್ಧರಿಸಿದೆ" ಎಂದು ರಾಜೀವ್ ಹೇಳಿದರು.

ಮಾಜಿ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವಥ ನಾರಾಯಣ್ ಅವರು ಸ್ಮಾರ್ಟ್ ಎಲೆಕ್ಟ್ರಿಕ್ ಮೀಟರ್ ಯೋಜನೆಯಲ್ಲಿ ಇಂಧನ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿವರಗಳನ್ನು ಸಮಿತಿಗೆ ತಿಳಿಸಿದರು. ಪಕ್ಷವು ಅದರ ವಿರುದ್ಧ ಪ್ರತಿಭಟನೆ ನಡೆಸುವಂತೆ ಸೂಚಿಸಿದರು. ಈ ಹಗರಣವು 1,000 ಕೋಟಿ ರೂ.ಗಳಿಗಿಂತ ಹೆಚ್ಚು ಮೌಲ್ಯದ್ದಾಗಿದೆ... ಇದರ ವಿರುದ್ಧ ಬಲವಾದ ಹೋರಾಟ ನಡೆಸಬೇಕಾಗಿದೆ" ಎಂದು ಅವರು ಹೇಳಿದರು.

ಧಾರವಾಡದಲ್ಲಿ ಇತ್ತೀಚೆಗೆ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸಿ ಯುವಕರು ನಡೆಸಿದ ಪ್ರತಿಭಟನೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು ಯುವಕರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ರಾಜೀವ್ ಹೇಳಿದರು.

ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚುವ ವಿಷಯದ ಕುರಿತು ಭಾನುವಾರದಿಂದ ಪಕ್ಷದ ಕಾರ್ಯಕರ್ತರನ್ನು ಒಳಗೊಳ್ಳುವ ಮೂಲಕ "ಸರ್ಕಾರವನ್ನು ಮುಜುಗರಕ್ಕೀಡುಮಾಡಲು ಮತ್ತು ಸಮಸ್ಯೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು" ಹೋರಾಟವನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಜಾತಿ ಸಮೀಕ್ಷೆಯನ್ನು ನಡೆಸುವಾಗ ಸಿದ್ಧತೆಯ ಕೊರತೆಯ ಬಗ್ಗೆ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. "ನಾವು ಜನಗಣತಿಯನ್ನು ವಿರೋಧಿಸುವುದಿಲ್ಲ; ಆದಾಗ್ಯೂ, ಪೂರ್ವ ಸಿದ್ಧತೆ ಮಾಡಬೇಕಿತ್ತು" ಎಂದು ಬಿಜೆಪಿ ನಾಯಕರು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Karur Stampede: ಸಾವಿನ ಸಂಖ್ಯೆ 39ಕ್ಕೇರಿಕೆ, TVK ಮುಖ್ಯಸ್ಥ ನಟ Vijay ಬಂಧನಕ್ಕೆ ಆಗ್ರಹ, FIR ದಾಖಲು

Karur stampede: 'ರಾಜಕೀಯ ಟೀಕೆ ಮಾಡಲ್ಲ, ಆಯೋಗದ ವರದಿ ಆಧರಿಸಿ ಮುಲಾಜಿಲ್ಲದೇ ಕ್ರಮ': CM MK Stalin

Asia Cup 2025: 'Haris Rauf ದಂಡವನ್ನು ನಾನೇ ಕಟ್ಟುತ್ತೇನೆ': ಪಾಕ್ ವೇಗಿಯ ದುರ್ವರ್ತನೆ ಸಮರ್ಥಿಸಿದ PCB ಅಧ್ಯಕ್ಷ Mohsin Naqvi!

Karur Stampede: 'ಕಾಲ್ತುಳಿತ ಸಂಭವಿಸುತ್ತಲೇ ಕಾಲ್ಕಿತ್ತ Actor Vijay! ಸಂತ್ರಸ್ಥರ ಕುಟುಂಬಗಳಿಗೆ ಯಾರು ಹೊಣೆ?'

17 ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ : ಸ್ವಯಂ ಘೋಷಿತ ದೇವ ಮಾನವ ಚೈತನ್ಯಾನಂದ ಸರಸ್ವತಿ ಬಂಧನ

SCROLL FOR NEXT