ಸಿದ್ದರಾಮಯ್ಯ - ಎಲ್‌‌ಕೆ ಅತೀಕ್‌ 
ರಾಜ್ಯ

ಬೆಂಗಳೂರಿನ ರಸ್ತೆಗಳು 'ಅಸುರಕ್ಷಿತ'; ಸಿದ್ದರಾಮಯ್ಯ ಸರ್ಕಾರದ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌‌.ಕೆ ಅತೀಕ್‌!

ನಗರದಾದ್ಯಂತ ರಸ್ತೆ ಸ್ಥಿತಿಯ ಬಗ್ಗೆ ಆಕ್ರೋಶಗಳು ವ್ಯಕ್ತವಾದ ನಂತರ ಸರ್ಕಾರವು ಗುಂಡಿಗಳನ್ನು ಮುಚ್ಚಲು ಪ್ರಾರಂಭಿಸಿತು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಸ್ತೆಗಳ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೆಂದೇ ಗುರುತಿಸಿಕೊಂಡಿದ್ದ ಸರ್ಕಾರದ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ಕೆ ಅತೀಕ್, ಬೆಂಗಳೂರಿನ 'ಅಸುರಕ್ಷಿತ' ಮತ್ತು 'ಉಬ್ಬುಗಳು' ಇರುವ ರಸ್ತೆಗಳ ಕಳಪೆ ಸ್ಥಿತಿಯ ಬಗ್ಗೆ ಟೀಕಿಸಿದ್ದಾರೆ.

ಈ ಕುರಿತು 'ಎಕ್ಸ್' ನಲ್ಲಿನ ಪೋಸ್ಟ್‌ನಲ್ಲಿ ಅತೀಕ್, 'ನಗರದ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ತಡರಾತ್ರಿ ಬೈಕ್ ಸವಾರಿ ಮಾಡುತ್ತಿದ್ದಾಗ, ಕಳಪೆ ಪ್ಯಾಚ್ ವರ್ಕ್‌ನಿಂದಾಗಿ ದ್ವಿಚಕ್ರ ವಾಹನ ಸವಾರರಿಗೆ ಅಸುರಕ್ಷಿತವಾಗಿರುವ ರಸ್ತೆಗಳು ಕಂಡುಬಂದವು' ಎಂದಿದ್ದಾರೆ.

'ಗುಣಮಟ್ಟದ ಉಪಕರಣಗಳೊಂದಿಗೆ ಸಣ್ಣಪುಟ್ಟ ದುರಸ್ತಿಗಳು' ರಸ್ತೆಗಳನ್ನು ಸುಗಮ ಮತ್ತು ಜನರಿಗೆ ಸುರಕ್ಷಿತವಾಗಿಸಬಹುದು. ರಸ್ತೆಗಳನ್ನು ಸರಿಪಡಿಸಲು ನಗರವು ತ್ವರಿತ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬಹುದು' ಎಂದು ಅವರು ಸಲಹೆ ನೀಡಿದ್ದಾರೆ.

'ವೈಯಕ್ತಿಕ ಕಾರಣಗಳನ್ನು' ಉಲ್ಲೇಖಿಸಿ ಜೂನ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಅತೀಕ್ ರಾಜೀನಾಮೆ ನೀಡಿದ್ದರು. ಆದರೆ ಬೆಂಗಳೂರು ವ್ಯಾಪಾರ ಕಾರಿಡಾರ್‌ನ ಅಧ್ಯಕ್ಷ ಸ್ಥಾನವನ್ನು ಮತ್ತು ಪೆರಿಫೆರಲ್ ರಿಂಗ್ ರಸ್ತೆಯ ಕೆಲಸವನ್ನು ಮುಂದುವರೆಸಿದರು.

ಬೆಂಗಳೂರಿನಲ್ಲಿ ಮೂಲಸೌಕರ್ಯಗಳು ಕಳಪೆಯಾಗಿವೆ, ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ ಮತ್ತು ಸಂಚಾರ ದಟ್ಟಣೆ ಹೆಚ್ಚಾಗಿದೆ. ವಿಶೇಷವಾಗಿ ಮಳೆಗಾಲದಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ತಿಂಗಳ ಆರಂಭದಲ್ಲಿ, ಗೂಗಲ್‌ನ ಬೆಂಗಳೂರು ಕಚೇರಿಯ ಹೊರಗಿನ ರಸ್ತೆ ಮತ್ತು ಪಾದಚಾರಿ ಮಾರ್ಗದ ಶಿಥಿಲ ಸ್ಥಿತಿಯನ್ನು ತೋರಿಸಿರುವ ವಿಡಿಯೋ ವೈರಲ್ ಆಗಿತ್ತು. ವಿಡಿಯೋದಲ್ಲಿ ನಿವಾಸಿಗಳು ಸರ್ವಿಸ್ ರಸ್ತೆಗಳಲ್ಲಿ ಬೃಹತ್ ಕುಳಿಗಳು, ಅತಿಕ್ರಮಣಗೊಂಡ ಪಾದಚಾರಿ ಮಾರ್ಗಗಳು ಮತ್ತು ಸುರಕ್ಷಿತವಾಗಿ ನಡೆಯಲು ಸ್ಥಳದ ಕೊರತೆಯನ್ನು ತೋರಿಸಿದ್ದರು.

ನಗರದಾದ್ಯಂತ ರಸ್ತೆ ಸ್ಥಿತಿಯ ಬಗ್ಗೆ ಆಕ್ರೋಶಗಳು ವ್ಯಕ್ತವಾದ ನಂತರ ಸರ್ಕಾರವು ಗುಂಡಿಗಳನ್ನು ಮುಚ್ಚಲು ಪ್ರಾರಂಭಿಸಿತು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಸ್ತೆಗಳ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಪರಿಸ್ಥಿತಿಯನ್ನು ಅವಲೋಕಿಸಿದ ಸಿದ್ದರಾಮಯ್ಯ ಅವರು, ಒಂದು ತಿಂಗಳೊಳಗೆ ನಗರದ ಎಲ್ಲ ರಸ್ತೆಗಳನ್ನು ದುರಸ್ತಿ ಮಾಡುವಂತೆ ನಾಗರಿಕ ಸಂಸ್ಥೆಯ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ಗಡುವು ಪೂರೈಸದಿದ್ದರೆ ಮುಖ್ಯ ಎಂಜಿನಿಯರ್‌ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದ ಅವರು, ಕೆಲಸದ ಗುಣಮಟ್ಟದ ಬಗ್ಗೆ ರಾಜಿ ಮಾಡಿಕೊಳ್ಳದಂತೆ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!

ಆಫೀಸ್ ರೋಮ್ಯಾನ್ಸ್ ಎಫೆಕ್ಟ್: 150 ಕೋಟಿ ರೂ. ಸಂಬಳದ ಉದ್ಯೋಗ ಕಳೆದುಕೊಂಡ ಲಾಯ್ಡ್ಸ್ ಮಾಜಿ ಸಿಇಒ John Neal!

ಅಯ್ಯಪ್ಪ ಸ್ವಾಮಿ ಕಠಿಣ ವ್ರತ: ಶಬರಿಮಲೆ ಉಪವಾಸ ಹೇಗೆ ಪ್ರಾರಂಭಿಸಬೇಕು? 41 ದಿನಗಳವರೆಗೆ ಬ್ರಹ್ಮಚರ್ಯ ಏಕೆ ಪಾಲಿಸಬೇಕು?

ಬಳ್ಳಾರಿಯಲ್ಲಿ 36 ಜೀನ್ಸ್ ಘಟಕಗಳು ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ, 22 ಕೋಟಿ ರೂ. ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ

SCROLL FOR NEXT