ಸಂಗ್ರಹ ಚಿತ್ರ 
ರಾಜ್ಯ

ನಮ್ಮ ಮೆಟ್ರೋ ಕೆಂಪು ಮಾರ್ಗ: ವೆಚ್ಚ ಮರುಮೌಲ್ಯಮಾಪನಕ್ಕೆ ಕೇಂದ್ರ ಸರ್ಕಾರ ಸೂಚನೆ; 4 ತಿಂಗಳು ಕಳೆದರೂ ಪ್ರತಿಕ್ರಿಯಿಸದ BMRCL!

ಹೆಬ್ಬಾಳದಿಂದ ಸರ್ಜಾಪುರ ಸಂಪರ್ಕಿಸಲು ಈ ಯೋಜನೆ ಪ್ರಮಖವಾಗಿದೆ. ಯೋಜನೆಗೆ ಪ್ರತೀ ಕಿ.ಮೀ.776 ಕೋಟಿ ರೂ. ಎಂದು ಅಂದಾಜಿಸಲಾಗಿದ್ದು. ಇತು ಅತ್ಯಂತ ದುಬಾರಿ ವೆಚ್ಚವಾಗಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಹೆಬ್ಬಾಳದಿಂದ ಸರ್ಜಾಪುರವರೆಗಿನ 37 ಕಿ.ಮೀ ನಮ್ಮ ಮೆಟ್ರೋ ಕೆಂಪು ಮಾರ್ಗ ನಿರ್ಮಾಣ ವೆಚ್ಚವನ್ನು ಮರು ಮೌಲ್ಯಮಾಪನ ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಸೂಚನೆ ನೀಡಿ 4 ತಿಂಗಳುಗಳು ಕಳೆದರೂ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹೆಬ್ಬಾಳದಿಂದ ಸರ್ಜಾಪುರ ಸಂಪರ್ಕಿಸಲು ಈ ಯೋಜನೆ ಪ್ರಮಖವಾಗಿದೆ. ಯೋಜನೆಗೆ ಪ್ರತೀ ಕಿ.ಮೀ.776 ಕೋಟಿ ರೂ. ಎಂದು ಅಂದಾಜಿಸಲಾಗಿದ್ದು. ಇತು ಅತ್ಯಂತ ದುಬಾರಿ ವೆಚ್ಚವಾಗಿದೆ ಎಂದು ಹೇಳಲಾಗುತ್ತಿದೆ.

28,405 ಕೋಟಿ ರೂ. ವೆಚ್ಚವೆಂದು ಅಂದಾಜು ಮಾಡಲಾದ ಈ ಯೋಜನೆಗೆ ಡಿಸೆಂಬರ್ 2024 ರಲ್ಲಿ ರಾಜ್ಯ ಸರ್ಕಾರವು ಅನುಮೋದನೆ ನೀಡಿತ್ತು. ಇದೀಗ ಕೇಂದ್ರ ಸರ್ಕಾರದ ಅಂತಿಮ ಅನುಮೋದನೆಗಾಗಿ ಕಾಯುತ್ತಿದೆ.

ಈ ನಡುವೆ ಬಿಎಂಆರ್‌ಸಿಎಲ್‌ ವಿಳಂಬ ನೀತಿ ಕುರಿತು ಕಳವಳಗಳು ಹೆಚ್ಚಾಗಿದೆ. ಈ ವಿಳಂವು ಕೆಂಪು ಮಾರ್ಗಕ್ಕಷ್ಟೇ ಸೀಮಿತವಾಗಿಲ್ಲ, ಮೆಟ್ರೋ ಹಂತ 3ದ ನಾಗರೀಕ ಕಾಮಗಾರಿಗಳಿಗೆ ಟೆಂಡರ್‌ಗಳ ಮೇಲೂ ಪರಿಣಾಮ ಬೀರಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಅವರು ಕಳವಳ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರವು ಮೆಟ್ರೋ ಹಂತ-3ನ್ನು 100 ದಿನಗಳಲ್ಲಿ ಅನುಮೋದನೆ ನೀಡಿತ್ತು. ಆದರೆ, ನಾಗರೀಕ ಕಾಮಗಾರಿಗೆ ಗುತ್ತಿಗೆ ಕರೆಯುವಲ್ಲಿ ಬಿಎಂಆರ್‌ಸಿಎಲ್ ವಿಫಲವಾಗಿದೆ. ಈ ವಿಳಂಬ ನೀತಿಯು ವೆಚ್ಚವನ್ನು ಮತ್ತಷ್ಟು ಹೆಚ್ಚಿಸಲಿದೆ. ಇದು ಪ್ರಯಾಣಿಕರಿಗೆ ಹೊರೆಯಾಗಲಿದೆ. ಹೀಗಾಗಿ, ಬಿಎಂಆರ್‌ಸಿಎಲ್ ಕೂಡಲೇ ಕಾರ್ಯ ಪ್ರವೃತ್ತವಾಗಬೇಕೆಂದು ಆಗ್ರಹಿಸಿದ್ದಾರೆ.

ರತೀಯ ವಿಜ್ಞಾನ ಸಂಸ್ಥೆಯ ಸುಸ್ಥಿರ ಸಾರಿಗೆ ಪ್ರಯೋಗಾಲಯದ ಸಂಚಾಲಕ ಪ್ರೊ. ಆಶಿಶ್ ವರ್ಮಾ ಅವರು ಮಾತನಾಡಿ, ಇದು ಬಿಎಂಆರ್‌ಸಿಎಲ್'ನ ಕಳಪೆ ಆದ್ಯತೆಯನ್ನು ತೋರಿಸುತ್ತದೆ. ರಸ್ತೆ ನಿರ್ಮಾಣ ಕಾರ್ಯಗಳು ತ್ವರಿತವಾಗಿ ಆಗುತ್ತಿದೆ ಎಂದರೆ, ಮೆಟ್ರೋ ಕಾರ್ಯವೇಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ.

ಮೇ 23 ರಂದು, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳು ಮತ್ತು ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್ ಅವರು, ಬೆಂಗಳೂರಿನ ಪ್ರಸ್ತಾವಿತ ಹೆಬ್ಬಾಳ-ಸರ್ಜಾಪುರ ಮೆಟ್ರೋ ಕಾರಿಡಾರ್‌ನ ವೆಚ್ಚದ ಅಂದಾಜನ್ನು ತಜ್ಞ ಸಂಸ್ಥೆಯಿಂದ ಪರಿಶೀಲಿಸಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಸಂಸತ್ ನಲ್ಲಿ ಕೋಲಾಹಲ, ಕಲಾಪ ಮುಂದೂಡಿಕೆ

ಔಟಾಗಿ ಹೋಗುತ್ತಿದ್ದ Pak ಆಟಗಾರನ ಕಡೆ ಕೋಪದಿಂದ ನುಗ್ಗಿದ ಸೂರ್ಯವಂಶಿ, ಕೂಡಲೇ ಮಧ್ಯಪ್ರವೇಶಿಸಿದ ವಿಹಾನ್, Video!

ಜನವರಿಯಲ್ಲಿ ಭಾರತದ ಉತ್ಪಾದನಾ ವಲಯದ ಚಟುವಟಿಕೆಗಳಲ್ಲಿ ಸ್ವಲ್ಪ ಚೇತರಿಕೆ

CCL: 12 ವರ್ಷಗಳ ಬಳಿಕ 3ನೇ ಬಾರಿಗೆ 'ಕರ್ನಾಟಕ' ಚಾಂಪಿಯನ್, ಕಿಚ್ಚಾ ಸುದೀಪ್ ಗೆ ಬಿಗ್ ಗಿಫ್ಟ್! ಸಿಕ್ಕ ಬಹುಮಾನವೆಷ್ಟು?

BLA ಯಲ್ಲಿ ಸುಶಿಕ್ಷಿತ ಹೆಣ್ಣು ಮಕ್ಕಳು! ಪಾಕ್ ವಿರುದ್ಧ ರಾತ್ರಿಯಿಡೀ ಹೋರಾಡಿ ಪ್ರಾಣತೆತ್ತ ಫಿದಾಯೀನ್': ಅಂತಿಮ ಕ್ಷಣದ Video!

SCROLL FOR NEXT