ಕೃಷ್ಣ ಬೈರೇಗೌಡ 
ರಾಜ್ಯ

ಪಾರದರ್ಶಕತೆ, ದಕ್ಷತೆ ಹೆಚ್ಚಿಸಲು ರಾಜ್ಯದಲ್ಲಿ ಏಕೀಕೃತ ಭೂಸ್ವಾಧೀನ ವ್ಯವಸ್ಥೆಗೆ ಚಾಲನೆ

ಕರ್ನಾಟಕ ಏಕೀಕೃತ ಭೂಸ್ವಾಧೀನ ವ್ಯವಸ್ಥೆಯು ಭೂಸ್ವಾಧೀನ ಪ್ರಕ್ರಿಯೆಯನ್ನು ಸಮನ್ವಯಗೊಳಿಸಲು ಮತ್ತು ಪ್ರಸ್ತುತ ನಡೆಯುತ್ತಿರುವ ಮತ್ತು ಹಿಂದಿನ ಪ್ರಸ್ತಾವನೆಗಳಿಗೆ ಸಂಬಂಧಿಸಿದ ಮೊಕದ್ದಮೆಗಳನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾದ ರಾಜ್ಯವ್ಯಾಪಿ ಡಿಜಿಟಲ್ ವೇದಿಕೆಯಾಗಿದೆ.

ಬೆಂಗಳೂರು: ರಾಜ್ಯಾದ್ಯಂತ ಭೂಸ್ವಾಧೀನ ಪ್ರಸ್ತಾವನೆಗಳಿಗೆ ಪಾರದರ್ಶಕತೆ, ದಕ್ಷತೆ ಮತ್ತು ನ್ಯಾಯಸಮ್ಮತತೆಯನ್ನು ಜಾರಿಗೆತರುವ ಗುರಿ ಹೊಂದಿರುವ ಏಕೀಕೃತ ಭೂಸ್ವಾಧೀನ ವ್ಯವಸ್ಥೆ(ಯುಎಲ್ಎಂಎಸ್) ‘ಡೇಟಾ ಮಾಡ್ಯೂಲ್ ಅನ್ನು ರಾಜ್ಯ ಸರ್ಕಾರ ಸೋಮವಾರ ಆರಂಭಿಸಿದೆ.

ಕರ್ನಾಟಕ ಏಕೀಕೃತ ಭೂಸ್ವಾಧೀನ ವ್ಯವಸ್ಥೆಯು ಭೂಸ್ವಾಧೀನ ಪ್ರಕ್ರಿಯೆಯನ್ನು ಸಮನ್ವಯಗೊಳಿಸಲು ಮತ್ತು ಪ್ರಸ್ತುತ ನಡೆಯುತ್ತಿರುವ ಮತ್ತು ಹಿಂದಿನ ಪ್ರಸ್ತಾವನೆಗಳಿಗೆ ಸಂಬಂಧಿಸಿದ ಮೊಕದ್ದಮೆಗಳನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾದ ರಾಜ್ಯವ್ಯಾಪಿ ಡಿಜಿಟಲ್ ವೇದಿಕೆಯಾಗಿದೆ ಎಂದು ಸರ್ಕಾರ ತಿಳಿಸಿದೆ.

"ಈ ಮಾಡ್ಯೂಲ್ ಅನ್ನು ಇ-ಆಡಳಿತ ಇಲಾಖೆಯ ಅಡಿಯಲ್ಲಿ ಸ್ಮಾರ್ಟ್ ಗವರ್ನನ್ಸ್ ಸೆಂಟರ್‌ನ ಯುಎಲ್ಎಂಎಸ್ ಪ್ರಾಜೆಕ್ಟ್ ಅಭಿವೃದ್ಧಿಪಡಿಸಿದೆ" ಎಂದು ಕಂದಾಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಲಾಖೆಯ ಪ್ರಕಾರ, ಈ ಮಾಡ್ಯೂಲ್ ಎಲ್ಲಾ ಭೂಸ್ವಾಧೀನ ಸಂಸ್ಥೆಗಳು ಮತ್ತು ಇಲಾಖೆಗಳು ಪ್ರಕ್ರಿಯೆಯ ಉದ್ದಕ್ಕೂ ಭೂಸ್ವಾಧೀನದ ಸಂಪೂರ್ಣ ವಿವರಗಳನ್ನು ನಮೂದಿಸಲು ಅನುವು ಮಾಡಿಕೊಡುತ್ತದೆ.

ಇವುಗಳಲ್ಲಿ ಕಂದಾಯ ಇಲಾಖೆ, ನೀರಾವರಿ ಇಲಾಖೆ, ನಗರಾಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಗಳು, ಹಾಗೆಯೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಹೆದ್ದಾರಿ ಸುಧಾರಣಾ ಯೋಜನೆ ಸೇರಿವೆ.

ಇದು ಮೆಟ್ರೋ, ಕೆ-ರೈಡ್, ಕರ್ನಾಟಕ ವಸತಿ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯನ್ನು ಸಹ ಒಳಗೊಳ್ಳುತ್ತದೆ.

“ಯುಎಲ್ಎಂಎಸ್ ಉದ್ಘಾಟಿಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, "ಈ ಮಾಡ್ಯೂಲ್ ಭೂಮಾಲೀಕರು ಮತ್ತು ಬಾಧಿತ ಕುಟುಂಬಗಳಿಗೆ ಸ್ವಾಧೀನ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ" ಎಂದು ಹೇಳಿದರು.

ವಿವಿಧ ತಂತ್ರಜ್ಞಾನಗಳ ಏಕೀಕರಣದೊಂದಿಗೆ ಮತ್ತಷ್ಟು ಮಾಡ್ಯೂಲ್‌ಗಳನ್ನು ಹಂತ ಹಂತವಾಗಿ ಪ್ರಾರಂಭಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

SCROLL FOR NEXT