ಧರ್ಮಸ್ಥಳ ವೀರೇಂದ್ರ ಹೆಗ್ಗಡೆ 
ರಾಜ್ಯ

ಧರ್ಮಸ್ಥಳ ಕೇಸ್: ಸಂಚುಕೋರರ ಕುತಂತ್ರ ಬಹಿರಂಗ; ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

ಎಸ್‌ಐಟಿ ರಚಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಎಸ್ಐಟಿ ರಚನೆಯಾಗಿರದಿದ್ದರೆ, ಸತ್ಯ ಹೊರಬರುತ್ತಿರಲಿಲ್ಲ. ಮೊದಲ ದಿನವೇ ಎಸ್‌ಐಟಿ ರಚನೆಯನ್ನು ನಾವು ಸ್ವಾಗತಿಸಿದ್ದೆವು.

ಮಂಗಳೂರು: ಧರ್ಮಸ್ಥಳಕ್ಕೆ ಭಕ್ತರು ಭೇಟಿ ನೀಡುವುದನ್ನು ತಡೆಯುವ ಸಂಚುಕೋರರ ಉದ್ದೇಶ ಎಸ್ಐಟಿಯಿಂದ ಬಹಿರಂಗವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭಾನುವಾರ ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ಚಂಡಿಕಾ ಹೋಮ ನಡೆಸಿದ ನಂತರ ಬೆಳ್ತಂಗಡಿ ತಾಲ್ಲೂಕಿನ 81 ಗ್ರಾಮಸ್ಥರು ಆಯೋಜಿಸಿದ್ದ ಸತ್ಯ ದರ್ಶನ ಸಮಾವೇಶದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಸ್‌ಐಟಿ ರಚಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಎಸ್ಐಟಿ ರಚನೆಯಾಗಿರದಿದ್ದರೆ, ಸತ್ಯ ಹೊರಬರುತ್ತಿರಲಿಲ್ಲ. ಮೊದಲ ದಿನವೇ ಎಸ್‌ಐಟಿ ರಚನೆಯನ್ನು ನಾವು ಸ್ವಾಗತಿಸಿದ್ದೆವು. ಇದೀಗ ಸಂಚುಕೋರರು ಯಾರು ಎಂಬುದು ಬಹಿರಂಗವಾಗಿದೆ ಎಂದು ಹೇಳಿದರು.

ಧರ್ಮಸ್ಥಳಕ್ಕೆ ಭಕ್ತರು ಭೇಟಿ ನೀಡುವುದನ್ನು ನಿಲ್ಲಿಸಿ, ಕ್ಷೇತ್ರವನ್ನು ನಾಶಪಡಿಸುವುದು ಅವರ (ಪಿತೂರಿಗಾರರ) ಉದ್ದೇಶವಾಗಿತ್ತು. ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಯಿಂದ ಮಾತ್ರ ಸಾಧ್ಯ. ಚಿನ್ನವನ್ನು ಬೆಂಕಿಗೆ ಹಾಕಿದರೆ ಅದು ಇನ್ನಷ್ಟು ಕಂಗೊಳಿಸುವಂತೆ, ಧರ್ಮಸ್ಥಳವೂ ಈ ಸವಾಲಿನ ನಡುವೆ ಇನ್ನಷ್ಟು ಬೆಳಗುತ್ತಿದೆ. ಇದೀಗ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಾರು ಜನರು ಬಂದು ಬೆಂಬಲ ತೋರಿಸಿದ್ದಾರೆ. ನಮ್ಮ ತಾಲೂಕಿನಿಂದ ಜನರು ಬರಲಿಲ್ಲ ಎಂಬ ಮಾತು ಮೊದಲು ಇದ್ದರೂ, ಇಂದು ಬೆಳ್ತಂಗಡಿ ತಾಲೂಕಿನ ಜನರು ಸಹ ಆಗಮಿಸಿ ಕೃತಜ್ಞತೆ ತೋರಿದ್ದಾರೆ ಎಂದು ತಿಳಿಸಿದರು.

ಶೀಘ್ರದಲ್ಲೇ, ಧರ್ಮಸ್ಥಳದಿಂದ ಹಲವಾರು ಸಮಾಜ ಪರ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುವುದು. ಭಕ್ತರ ಬೆಂಬಲ ನಮ್ಮ ಬಾಂಧವ್ಯವನ್ನು ಬಲಪಡಿಸಿದೆ ಎಂದು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ': ಕೇರಳ BJP ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ; ಅಮಿತ್ ಶಾಗೆ ಪತ್ರ ಬರೆದ ಕಾಂಗ್ರೆಸ್, ಕ್ರಮಕ್ಕೆ ಆಗ್ರಹ

Asia Cup 2025: ಸೋಲು ಬೆನ್ನಲ್ಲೇ ಟ್ರೋಫಿಯೊಂದಿಗೆ ಮೈದಾನ ತೊರೆದ ಪಾಕ್ ಸಚಿವ; ICCಗೆ ದೂರು ನೀಡಲು BCCI ಮುಂದು..!

Asia Cup 2025: ಭಾರತ vs ಪಾಕಿಸ್ತಾನ ಫೈನಲ್ ಟ್ರೋಫಿ ವಿವಾದ; ಮೊಹ್ಸಿನ್ ನಖ್ವಿ ಪ್ರತಿಕ್ರಿಯೆ, ಮೋದಿ ಟ್ವೀಟ್‌ಗೆ ಕಿಡಿ

Asia Cup 2025: ಪಾಕ್ ಸಚಿವನಿಂದ ಟ್ರೋಫಿ ಸ್ವೀಕರಿಸಲು ಭಾರತ ನಕಾರ; ತಡರಾತ್ರಿ ದುಬೈನಲ್ಲಿ ಹೈಡ್ರಾಮಾ, ಕ್ರಿಕೆಟ್ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆ..!

ಭಾರತದಿಂದ ಔಷಧ ಆಮದಿಗೆ ಶೇ.100 ರಷ್ಟು ಸುಂಕ: US ಅಹಂಕಾರಕ್ಕೆ ಪೆಟ್ಟು; ಭಾರತಕ್ಕೆ ಶೂನ್ಯ ಸುಂಕದೊಂದಿಗೆ ಬಾಗಿಲು ತೆರೆದ ಚೀನಾ!

SCROLL FOR NEXT