ನಟ ದರ್ಶನ್ 
ರಾಜ್ಯ

ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನಿರಾಕರಣೆ: ಅಕ್ಟೋಬರ್ 9ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್

ಚಾದರ, ಬೆಡ್ ಷೀಟ್, ಚೊಂಬು, ತಟ್ಟೆ ಕೊಡಲಾಗಿದೆ. ಪಲ್ಲಂಗ ಕೇಳಿದರೆ ಕೊಡಲು ಅವಕಾಶವಿಲ್ಲ ಎಂದು ಜೈಲು ಅಧಿಕಾರಿಗಳ ಪರವಾಗಿ ಪ್ರಸನ್ನ ಕುಮಾರ್ ವಾದಿಸಿದರು.

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿರುವ ನಟ ದರ್ಶನ್ ಅವರು ಜೈಲಿನಲ್ಲಿ ತಮಗೆ ಕನಿಷ್ಠ ಸೌಲಭ್ಯ ನಿರಾಕರಿಸಲಾಗಿದೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಂಗಳವಾರ ಅಕ್ಟೋಬರ್ 9ಕ್ಕೆ ತೀರ್ಪು ಕಾಯ್ದಿರಿಸಿದೆ.

ವಿಚಾರಣೆ ವೇಳೆ ಜೈಲು ಅಧಿಕಾರಿಗಳು 57ನೇ ಸೆಷನ್ಸ್ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಎರಡು ಕಡೆಯ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆದೇಶ ಕಾಯ್ದಿರಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ ನಟ ದರ್ಶನ್ ಅವರ ಪರ ವಕೀಲ ಸುನಿಲ್ ಅವರು, ನಟನನ್ನು ಬೇರೆ ಸೆಲ್‌ಗೆ ಸ್ಥಳಾಂತರಿಸುವಂತೆ ಒತ್ತಾಯಿಸಿದರು.

ತಮ್ಮ ಕಕ್ಷಿದಾರರ ಮೇಲೆ ಅತಿಯಾದ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ ಎಂದು ಸಹ ಅವರು ವಾದಿಸಿದರು. "ಹಲವು ವಿಐಪಿಗಳನ್ನು ಜೈಲಿನಲ್ಲಿ ಇರಿಸಲಾಗಿದೆ. ಅವರೆಲ್ಲರಿಗೂ ಒಂದೇ ರೀತಿಯ ಭದ್ರತೆ ನೀಡಲಾಗಿದೆಯೇ? ದರ್ಶನ್‌ಗೆ ಮಾತ್ರ ಇಷ್ಟೊಂದು ಭದ್ರತೆ ಏಕೆ?" ಎಂದು ಸುನಿಲ್ ಪ್ರಶ್ನಿಸಿದರು.

ಜೈಲು ಕೈಪಿಡಿಯಲ್ಲಿ ಕೇವಲ 14 ದಿನಗಳು ಎಂದು ಉಲ್ಲೇಖಿಸಿರುವಾಗ ತಮ್ಮ ಕಕ್ಷಿದಾರರನ್ನು 45 ದಿನಗಳವರೆಗೆ ಕ್ವಾರಂಟೈನ್ ಸೆಲ್‌ನಲ್ಲಿ ಏಕೆ ಇರಿಸಲಾಗಿದೆ ಎಂದು ಅವರು ಪ್ರಶ್ನಿಸಿದರು.

ಇದಕ್ಕೆ ವಿರೋಧಿಸಿದ ವಿಶೇಷ ಸರ್ಕಾರಿ ಅಭಿಯೋಜಕ(SPP) ಪ್ರಸನ್ನ ಕುಮಾರ್ ಅವರು, ಆರೋಪಿ ಪರ ವಕೀಲರು ನಿರ್ದಿಷ್ಟವಾಗಿ ತಮಗೆ ಏನು ಬೇಕು ಎಂದು ಹೇಳಬೇಕೆಂದು ಒತ್ತಾಯಿಸಿದರು.

ಜೈಲು ಕೈಪಿಡಿಯಂತೆ ಕ್ರಮ ಕೈಗೊಳ್ಳಲಾಗಿದೆ. ಟೆಲಿಫೋನ್, ವಿಡಿಯೋ ಕಾನ್ಫರೆನ್ಸ್ ಗೆ ವ್ಯವಸ್ಥೆ ಮಾಡಲಾಗಿದೆ. ಚಾದರ, ಬೆಡ್ ಷೀಟ್, ಚೊಂಬು ತಟ್ಟೆ ಕೊಡಲಾಗಿದೆ. ಪಲ್ಲಂಗ ಕೇಳಿದರೆ ಕೊಡಲು ಅವಕಾಶವಿಲ್ಲ ಎಂದು ಜೈಲು ಅಧಿಕಾರಿಗಳ ಪರವಾಗಿ ಪ್ರಸನ್ನ ಕುಮಾರ್ ವಾದಿಸಿದರು.

"ಸುಮ್ಮನೆ ಆರೋಪ ಮಾಡಬೇಡಿ, ಆದೇಶ ಏನು ಪಾಲನೆಯಾಗಿಲ್ಲ ಹೇಳಿ. ನಿಮಗೆ ಏನು ಬೇಕು ಎಂದು ಕೇಳಿ. ನಮಗೆ ಇದಕ್ಕೆ ಸಮಯವಿಲ್ಲ; ಬೇರೆ ಕೆಲಸ ಬಾಕಿ ಇದೆ" ಎಂದು ನ್ಯಾಯಾಧೀಶರು ಹೇಳಿದರು.

ಎರಡೂ ಕಡೆಯ ವಾದ, ಪ್ರತಿವಾದ ಆಲಿಸಿದ ನಂತರ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT