ಸಾಂದರ್ಭಿಕ ಚಿತ್ರ 
ರಾಜ್ಯ

ಅ. 3 ರಿಂದ ಬೆಂಗಳೂರಿನಲ್ಲಿ ಜಾತಿವಾರು ಸಮೀಕ್ಷೆ: ಮಹೇಶ್ವರ ರಾವ್

ಸುಮಾರು 22,000 ಸರ್ಕಾರಿ ನೌಕರರು ಸಮೀಕ್ಷೆ ನಡೆಸಲಿದ್ದಾರೆ. ನಗರದ ಪ್ರತಿ ಮನೆಗೆ ಭೇಟಿ ನೀಡಿ, ಮನೆ ಮುಖ್ಯಸ್ಥರಿಂದ ಮಾಹಿತಿಯನ್ನು ಸಂಗ್ರಹಿಸಿ ಸಮೀಕ್ಷೆ ನಡೆಸಲಿದ್ದಾರೆ.

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಬರುವ ಶುಕ್ರವಾರ ಅಕ್ಟೋಬರ್ 3ರಿಂದ ಆರಂಭವಾಗಲಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ತಿಳಿಸಿದ್ದಾರೆ.

ಸುಮಾರು 22,000 ಸರ್ಕಾರಿ ನೌಕರರು ಸಮೀಕ್ಷೆ ನಡೆಸಲಿದ್ದಾರೆ. ನಗರದ ಪ್ರತಿ ಮನೆಗೆ ಭೇಟಿ ನೀಡಿ, ಮನೆ ಮುಖ್ಯಸ್ಥರಿಂದ ಮಾಹಿತಿಯನ್ನು ಸಂಗ್ರಹಿಸಿ ಸಮೀಕ್ಷೆ ನಡೆಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಆಶಾ ಕಾರ್ಯಕರ್ತರು ಸಹ ಸಮೀಕ್ಷಾ ತಂಡದ ಭಾಗವಾಗಿರುತ್ತಾರೆ.

ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳದ ಅಥವಾ ಕರ್ತವ್ಯದ ಸಮಯದಲ್ಲಿ ಹಾಜರಾಗದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರು ನಗರದ 30 ಕೇಂದ್ರಗಳಲ್ಲಿ ನಿನ್ನೆ ಸೋಮವಾರ ಗಣತಿದಾರರಿಗೆ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು.

"ಸಮೀಕ್ಷಾ ತಂಡದ ತರಬೇತಿ ಕಾರ್ಯಕ್ರಮವು ಅಕ್ಟೋಬರ್ 3 ರ ಮೊದಲು ಪೂರ್ಣಗೊಳ್ಳಲಿದೆ, ತಂಡಗಳು ವಾರ್ಡ್ ಮತ್ತು ವಿಭಾಗ ಮಟ್ಟದಲ್ಲಿ ಹರಡಿ ಸಮೀಕ್ಷೆಯನ್ನು ನಡೆಸುತ್ತವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಬೃಹತ್ ಕಾರ್ಯದ ಭಾಗವಾಗಿ, ಮೇಲ್ವಿಚಾರಕರ ನಿರ್ದೇಶನದ ಮೇರೆಗೆ ಕ್ಷೇತ್ರ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ಮನೆಗಳ ಪ್ರವೇಶದ್ವಾರದಲ್ಲಿ ಜಿಪಿಎಸ್ ಟ್ಯಾಗ್ ಮಾಡಲಾದ ವಿಶಿಷ್ಟ ಮನೆಯ ಗುರುತಿನ ಚೀಟಿಗಳನ್ನು ಅಂಟಿಸಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಸಮೀಕ್ಷೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಯಾವುದೇ ನಕಲು ಅಥವಾ ದೋಷಗಳಿಲ್ಲ ಎಂದು ಖಚಿತಪಡಿಸಿಕೊಳ್ಳಲು ಯಾದೃಚ್ಛಿಕ ತಪಾಸಣೆ ನಡೆಸಲು ನಿರ್ದೇಶಿಸಲಾಗಿದೆ.

ಬೆಂಗಳೂರು ನಗರ ಉಪ ಆಯುಕ್ತ ಜಿ. ಜಗದೀಶ ಅವರು ಸಮೀಕ್ಷೆಯಲ್ಲಿ ಭಾಗವಹಿಸದಿದ್ದರೆ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗುವುದು ಎಂಬ ವದಂತಿಗಳು ಹರಡುತ್ತಿವೆ. ಸಮೀಕ್ಷೆಯ ಸಮಯದಲ್ಲಿ ಯಾವುದೇ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಜಾ ಸಂಘರ್ಷ ಕೊನೆಗೆ ಡೊನಾಲ್ಡ್ ಟ್ರಂಪ್ 20 ಅಂಶಗಳ ಯೋಜನೆ: ಪ್ರಧಾನಿ ಮೋದಿ ಸ್ವಾಗತ

ಪುರುಷರ Asia Cup ಹೈಡ್ರಾಮಾ: ಮಹಿಳಾ ವಿಶ್ವಕಪ್ ನಲ್ಲಿ ಏನಾಗುತ್ತದೆ,ಅ.5ರ ಪಂದ್ಯ ಮೇಲೆ ಎಲ್ಲರ ಚಿತ್ತ

ನೆತನ್ಯಾಹು-ಟ್ರಂಪ್ ಗಾಜಾ ಶಾಂತಿ ಒಪ್ಪಂದ ಘೋಷಣೆ: ಹಂತ ಹಂತವಾಗಿ ಹಿಂದೆ ಸರಿಯಲಿರುವ ಇಸ್ರೇಲ್

ಕಲ್ಯಾಣ ಕರ್ನಾಟಕದಲ್ಲಿ ಭಾರೀ ಪ್ರವಾಹ: ಹಾನಿ ಬಗ್ಗೆ ಕುರಿತು ಇಂದು ಸಿಎಂ ವೈಮಾನಿಕ ಸಮೀಕ್ಷೆ

ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!

SCROLL FOR NEXT