ಸಹಾಯಕ ಶಿಕ್ಷಕಿ ಶಾಂತಮ್ಮ ಅವರಿಗೆ ರಾಮನಗರ ಡಿಸಿ ಯಶವಂತ್ ವಿ ಗುರುಕರ್ ನಗದು ಬಹುಮಾನ ವಿತರಿಸಿದರು. 
ರಾಜ್ಯ

ಒಂದೇ ವಾರದಲ್ಲಿ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕಿ: 1,001 ರೂ ನಗದು ಬಹುಮಾನ ನೀಡಿ ಜಿಲ್ಲಾಧಿಕಾರಿ ಅಭಿನಂದನೆ

ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ, ಚನ್ನಂಕೇಗೌಡನದೊಡ್ಡಿ ಮತ್ತು ಗೋವಿಂದೇಗೌಡನದೊಡ್ಡಿ ಗ್ರಾಮಗಳಲ್ಲಿ 86 ಮನೆಗಳ ಸಮೀಕ್ಷೆಗೆ ಶಾಂತಮ್ಮ ಅವರನ್ನು ನಿಯೋಜಿಸಲಾಗಿತ್ತು.

ರಾಮನಗರ: ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ. 22ರಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಮಗೆ ವಹಿಸಿದ ಕರ್ತವ್ಯವನ್ನು ಕೇವಲ 7 ದಿನದಲ್ಲಿ ಪೂರ್ಣಗೊಳಿಸಿದ ಶಿಕ್ಷಕಿಗೆ 1,001 ರೂ. ನಗದು ಬಹುಮಾನ ನೀಡಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಅಭಿನಂದಿಸಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ಅಂಬಾಡಹಳ್ಳಿಯು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ (ಯುಜಿಎಚ್‌ಪಿಎಸ್) ಸಹ ಶಿಕ್ಷಕಿ ಶಾಂತಮ್ಮ ಅವರಿಗೆ ಜಿಲ್ಲಾಧಿಕಾರಿ ಅಭಿನಂದಿಸಿದ್ದಾರೆ.

ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ, ಚನ್ನಂಕೇಗೌಡನದೊಡ್ಡಿ ಮತ್ತು ಗೋವಿಂದೇಗೌಡನದೊಡ್ಡಿ ಗ್ರಾಮಗಳಲ್ಲಿ 86 ಮನೆಗಳ ಸಮೀಕ್ಷೆಗೆ ಶಾಂತಮ್ಮ ಅವರನ್ನು ನಿಯೋಜಿಸಲಾಗಿತ್ತು.

ಸಮೀಕ್ಷೆ ಪೂರ್ಣಗೊಳ್ಳಲು 15 ದಿನಗಳು ಇದ್ದರೂ, ಶಾಂತಮ್ಮ ಅವರಿಗೆ ನಿಯೋಜಿಸಲಾದ ಎಲ್ಲಾ ಮನೆಗಳ ಮಾಹಿತಿಯನ್ನು ಕೇವಲ ಏಳು ದಿನಗಳಲ್ಲಿ ಸಂಗ್ರಹಿಸಿದ್ದಾರೆ.

ಶಿಕ್ಷಕಿಯ ಕಾರ್ಯವೈಖರಿಗೆ ಜಿಲ್ಲಾಧಿಕಾರಿ ಸಂತಸ ವ್ಯಕ್ತಪಡಿಸಿದ್ದು, ಸಮೀಕ್ಷೆಯಲ್ಲಿ ನೀವು ತೋರಿಸಿದ ಆಸಕ್ತಿ, ಉತ್ಸಾಹ ಮತ್ತು ಪ್ರಾಮಾಣಿಕ ಪ್ರಯತ್ನಗಳು ಸಮೀಕ್ಷೆ ಕಾರ್ಯದ ತ್ವರಿತ ಪ್ರಗತಿಗೆ ಸಹಾಯ ಮಾಡಿದೆ. ಸಮೀಕ್ಷೆ ಕಾರ್ಯಕ್ಕಾಗಿ ನಿಮ್ಮ ಸಹಕಾರ ಮತ್ತು ಉತ್ಸಾಹವನ್ನು ಜಿಲ್ಲಾಡಳಿತ ಶ್ಲಾಘಿಸುತ್ತದೆ. ನಿಮ್ಮ ಉತ್ತಮ ಕೆಲಸವನ್ನು ಮುಂದುವರಿಸಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?

12 ರೋಲ್ಸ್ ರಾಯ್ಸ್‌ ಸೇರಿ ಹಲವು ಐಷಾರಾಮಿ ಕಾರು, ಸಾವಿರಾರು ಕೋಟಿ ಒಡೆಯ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಸುನೇತ್ರ ಪವಾರ್ ನಾಳೆ ಪ್ರಮಾಣ ವಚನ ಸ್ವೀಕಾರ: ಭುಜಬಲ್

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!

News headlines 30-01-2026 | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ದಾಳಿ: 4 ಲಕ್ಷ ಲಂಚ ಪಡೆಯುತ್ತಿದ್ದ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ; ಬಂಧನದ ಬಳಿಕ ಹೈಡ್ರಾಮ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ

SCROLL FOR NEXT