ಸಂಗ್ರಹ ಚಿತ್ರ 
ರಾಜ್ಯ

ಆಯುಧ ಪೂಜೆ: ಸ್ವಚ್ಛತಾ ಕಾರ್ಯಗಳಲ್ಲಿ ಕಾವೇರಿ ನೀರನ್ನು ಮಿತವಾಗಿ ಬಳಸಿ; BWSSB ಮನವಿ

ಕುಡಿಯುವ ನೀರಿನ ಮೂಲಗಳು ಸೀಮಿತವಾಗಿರುವುದರಿಂದ ಹಬ್ಬದ ಸಂಭ್ರಮವನ್ನು ಜವಾಬ್ದಾರಿಯಿಂದ ಆಚರಿಸಬೇಕು, ನೀರಿನ ಸಂರಕ್ಷಣೆಯ ಮನೋಭಾವ ಬೆಳೆಸಿಕೊಳ್ಳಬೇಕು.

ಬೆಂಗಳೂರು: ಆಯುಧ ಪೂಜೆ ಹಬ್ಬದ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಕಾವೇರಿ ನೀರನ್ನು ಮಿತವಾಗಿ ಮತ್ತು ಜವಾಬ್ದಾರಿಯಿಂದ ಬಳಸವಂತೆ ಸಾರ್ವಜನಿಕರಿಗೆ ಬೆಂಗಳೂರು ನೀರಾವರಿ ಮತ್ತು ಒಳಚರಂಡಿ ಮಂಡಳಿ ಸೋಮವಾರ ಮನವಿ ಮಾಡಿದೆ.

ಈ ಸಂಬಂಧ ಬಿಡಬ್ಲ್ಯೂಎಸ್ಎಸ್'ಬಿ ಪ್ರಕಟಣೆ ಹೊರಡಿಸಿದ್ದು, ಆಯುಧ ಪೂಜೆ ಹಬ್ಬದ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಕಾವೇರಿ ನೀರನ್ನು ಮಿತವಾಗಿ ಮತ್ತು ಜವಾಬ್ದಾರಿಯಿಂದ ಬಳಸವಂತೆ ಹಾಗೂ ಅಗತ್ಯವಿಲ್ಲದ ವ್ಯರ್ಥವನ್ನು ತಪ್ಪಿಸುವಂತೆ ಮನವಿ ಮಾಡಿದೆ.

ಆಯುಧ ಪೂಜೆಯ ಸಂದರ್ಭದಲ್ಲಿ ಮನೆಮನೆಗಳಲ್ಲಿ ಮತ್ತು ಅಂಗಡಿಗಳಲ್ಲಿ ಹಲವಾರು ಸ್ವಚ್ಛತಾ ಚಟುವಟಿಕೆಗಳು ನಡೆಯುತ್ತವೆ. ನೀರನ್ನು ಬಳಕೆ ಮಾಡುವುದರಲ್ಲಿ ತಪ್ಪಿಲ್ಲ, ಆದರೆ ಅದು ಮಿತವಾಗಿಯೂ ಹೊಣೆಗಾರಿಕೆಯಿಂದಲೂ ಇರಬೇಕು. ಕಾವೇರಿ ನೀರು ಪವಿತ್ರವೂ ಅಮೂಲ್ಯವೂ ಆಗಿದ್ದು, ಅದನ್ನು ಸರಿಯಾದ ಉದ್ದೇಶಕ್ಕೆ ಮಾತ್ರ ಬಳಸಬೇಕು. ಅನಗತ್ಯ ವ್ಯರ್ಥವನ್ನು ತಡೆಯಬೇಕು.

ಕುಡಿಯುವ ನೀರಿನ ಮೂಲಗಳು ಸೀಮಿತವಾಗಿರುವುದರಿಂದ ಹಬ್ಬದ ಸಂಭ್ರಮವನ್ನು ಜವಾಬ್ದಾರಿಯಿಂದ ಆಚರಿಸಬೇಕು, ನೀರಿನ ಸಂರಕ್ಷಣೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

'ಬೆಂಗಳೂರು ಟೆಕ್ ಸಮ್ಮಿಟ್ 2025'ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Delhi blast: ಸ್ಫೋಟಕ್ಕೂ ಮುನ್ನ 'ಆತ್ಮಾಹುತಿ ಬಾಂಬ್ ದಾಳಿ' ಬಗ್ಗೆ ಮಾತಾಡಿದ ಡಾ. ಉಮರ್; ವಿಡಿಯೋದಲ್ಲಿ ಉಗ್ರ ಹೇಳಿದ್ದೇನು?

ನೌಕರಿ, ಹಣಕಾಸು ದಾಂಪತ್ಯ - ಹೀಗಿದೆ ಈ ವಾರದ ಭವಿಷ್ಯ

ಆಂಧ್ರ ಪ್ರದೇಶ: ಮೋಸ್ಟ್ ವಾಂಟೆಂಡ್ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ಸೇರಿ ಆರು ಮಂದಿ ಎನ್‌ಕೌಂಟರ್‌ಗೆ ಬಲಿ

SCROLL FOR NEXT