ಬಸ್ ಗಾಗಿ ಕಾದಿದ್ದವರ ಮೇಲೆ ಹರಿದ ಬಸ್ 
ರಾಜ್ಯ

ಹಾವೇರಿಯಲ್ಲಿ ಭೀಕರ ಅಪಘಾತ: ಬಸ್ ಗಾಗಿ ಕಾದಿದ್ದವರ ಮೇಲೆ Bus ರೂಪದಲ್ಲೇ ಬಂದ ಜವರಾಯ! ಮಗು ಸಾವು! Video

ಮುಂಜಾನೆ ಈ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದೆ.

ಹಾವೇರಿ: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಗಾಗಿ ಕಾದಿದ್ದವರ ಮೇಲೆಯೇ ಸರ್ಕಾರಿ ಬಸ್ ಹರಿದಿದೆ.

ಇಂದು (ಏಪ್ರಿಲ್ 1) ಮುಂಜಾನೆ ಈ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದೆ.

ಪರಿಣಾಮ ಈ ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಂತೆಯೇ 2 ವರ್ಷದ ಪುಟ್ಟ ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ.

ಪ್ಲಾಟ್ ಫಾರ್ಮ್ ನಲ್ಲಿ ನಿಲ್ಲಬೇಕಿದ್ದ ಬಸ್ ಏಕಾಏಕಿ ಪ್ಲಾಟ್ ಫಾರ್ಮ್ ದಾಟಿ ಅಲ್ಲಿ ನಿಂತಿದ್ದ ಪ್ರಯಾಣಿಕರ ಮೇಲೆ ಹರಿದಿದೆ.

ಈ ಅಪಘಾತದಲ್ಲಿ ಕೇವಲ ಮಗು ಮಾತ್ರವಲ್ಲದೆ, ಬಂಕಾಪುರ ಪಟ್ಟಣದ ನಿವಾಸಿಗಳಾದ ವಾಸುದೇವ (44), ಹರ್ಷಾ (6) ಹಾಗೂ ಕಾವ್ಯಾಂಜಲಿ (39) ಎಂಬುವವರಿಗೂ ಗಂಭೀರ ಗಾಯಗಳಾಗಿವೆ.

ಇವರೆಲ್ಲರೂ ಸದ್ಯ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿದ್ದ 2 ವರ್ಷದ ಪುಟ್ಟ ಮಗು ಹಜರತ್ ಅಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಅಪಘಾತದ ಭೀಕರತೆಯನ್ನು ಸಾರಿ ಹೇಳುತ್ತಿವೆ. ಸಾರ್ವಜನಿಕರು ಚಾಲಕನ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಗಿದ್ದೇನು?

ಇಂದು ಬೆಳಿಗ್ಗೆ ಸುಮಾರು 7 ಗಂಟೆಯ ಸುಮಾರಿಗೆ ಹಾವೇರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಎಂದಿನಂತೆ ಪ್ರಯಾಣಿಕರ ಓಡಾಟವಿತ್ತು. ಸವಣೂರು ಪ್ಲಾಟ್‌ಫಾರ್ಮ್ ಬಳಿ ಪ್ರಯಾಣಿಕರು ತಾವು ಹೋಗಬೇಕಾದ ಬಸ್‌ಗಳಿಗಾಗಿ ಕಾಯುತ್ತಿದ್ದರು.

ಈ ವೇಳೆ ಸವಣೂರು ಕಡೆಗೆ ತೆರಳಬೇಕಿದ್ದ ಬಸ್ ನಿಲ್ದಾಣಕ್ಕೆ ಬಂದಿದೆ. ಬಸ್ ಬರುತ್ತಿದ್ದಂತೆ ಪ್ರಯಾಣಿಕರು ಬಸ್‌ನ ಮುಂಭಾಗದಲ್ಲಿದ್ದ ಬೋರ್ಡ್ ನೋಡಲು ಮುಂದಕ್ಕೆ ಬಂದಿದ್ದಾರೆ.

ಈ ವೇಳೆ ಚಾಲಕ ಬಸ್ಸನ್ನು ನಿಯಂತ್ರಿಸಲಾಗದೆ, ಅತಿಯಾದ ವೇಗದಿಂದ ಪ್ಲಾಟ್‌ಫಾರ್ಮ್ ಮೇಲಿದ್ದ ಜನರ ಮೇಲೆಯೇ ನುಗ್ಗಿಸಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾಗತಿಕ ಅನಿಶ್ಚಿತತೆ ನಡುವೆ ಸಾಮೂಹಿಕ layoff ಶಾಕ್: Oracle ಕಂಪೆನಿಯಿಂದ ಸಾವಿರಾರು ಮಂದಿ ವಜಾ, ಭಾರತಕ್ಕೂ ತಟ್ಟಿದ ಬಿಸಿ

Census 2027: ದೇಶದಲ್ಲಿ ರಾಷ್ಟ್ರೀಯ ಜನಗಣತಿ ಆರಂಭ: ಇದು ಯಾಕೆ ಮುಖ್ಯ ಗೊತ್ತಾ?

ಹತ್ಯೆ ಬೆದರಿಕೆ ನಡುವೆ ಜನರೊಂದಿಗೆ ಬಹಿರಂಗವಾಗಿ ಕಾಣಿಸಿದ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ಅರಾಘ್ಚಿ! Video

'ಬೂಟ್‌ ನೆಕ್ಕುವವರಿಗೆ ಮಾತ್ರ ನಿಮ್ಮಲ್ಲಿ ಅವಕಾಶವೇ? ನನ್ನ ರಾಜಕೀಯ ತ್ಯಾಗಕ್ಕೆ ಬೆಲೆಯಿಲ್ಲವೇ; ಬೆನ್ನುಮೂಳೆ ಇಲ್ಲದ ವ್ಯಕ್ತಿಯನ್ನು ಛೂ ಬಿಟ್ಟಿದ್ದೀರಾ'!

ದುಬಾರಿ ದುನಿಯಾ: ಪ್ರೀಮಿಯಂ ಪೆಟ್ರೋಲ್ ದರ, ಜೆಟ್ ಇಂಧನ ಬೆಲೆ ಏರಿಕೆ; ದೇಶೀಯ ಏರ್ ಲೈನ್ಸ್ ಗಳ ರಕ್ಷಣೆಗೆ ಕೇಂದ್ರ ಸರ್ಕಾರ ಕ್ರಮ

SCROLL FOR NEXT