ನಿಖಿತಾ 
ರಾಜ್ಯ

ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಚಿತ್ರದುರ್ಗ ವಿದ್ಯಾರ್ಥಿನಿ ನೇಣಿಗೆ ಶರಣು!

ಆತ್ಮಹತ್ಯೆಗೂ ಮುನ್ನ ಲಿಖಿತಾ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ಡಾ. ರಾಜು, ಅವರ ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗ: ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಹಿನ್ನೆಲೆಯಲ್ಲಿ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ.

ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನ ಮನೆಯಲ್ಲಿ ಲಿಖಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಧ್ಯಾಪಕ ಡಾ. ರಾಜು ಅವರೊಂದಿಗೆ ಸಂಬಂಧವಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿ, ತನ್ನ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದರಿಂದ ನೊಂದಿದ್ದ ವಿದ್ಯಾರ್ಥಿನಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೂ ಮುನ್ನ ಲಿಖಿತಾ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ಡಾ. ರಾಜು, ಅವರ ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಇವರ ಕಿರುಕುಳ ಮತ್ತು ಅಪಪ್ರಚಾರವೇ ನನ್ನ ಸಾವಿಗೆ ಕಾರಣ ಎಂದು ಅವರು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!