ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ 
ರಾಜ್ಯ

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಬೆಳೆ ನಷ್ಟ; ಪರಿಹಾರಕ್ಕೆ ಲಂಚ ಕೇಳಿದ ಅರಣ್ಯ ಅಧಿಕಾರಿ; ವಿಡಿಯೋ ವೈರಲ್

ಅರಣ್ಯ ಇಲಾಖೆ ಕಾರ್ಯವಿಧಾನದ ಪ್ರಕಾರ, ಅಧಿಕಾರಿಗಳು ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಮೌಲ್ಯಮಾಪನ ವರದಿಯನ್ನು ಸಿದ್ಧಪಡಿಸಬೇಕು. ಅದರ ಆಧಾರದ ಮೇಲೆ ಸರ್ಕಾರ ಪರಿಹಾರ ಬಿಡುಗಡೆ ಮಾಡುತ್ತದೆ.

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಅಡಿಕೆ ಮತ್ತು ಬಾಳೆ ಬೆಳೆಗಳನ್ನು ಕಳೆದುಕೊಂಡ ರೈತನಿಂದಲೇ ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಲಂಚ ಕೇಳುತ್ತಿರುವ ವಿಡಿಯೋವೊಂದು ಬಹಿರಂಗಗೊಂಡಿದ್ದು, ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ, ಬೆಳೆ ಹಾನಿಯನ್ನು ಅಂದಾಜು ಮಾಡುವಾಗ ಅಧಿಕಾರಿ ರೈತನಿಂದ 'ವೆಚ್ಚಗಳಿಗೆ ಹಣ' ಪಾವತಿಸುವಂತೆ ಕೇಳುತ್ತಿರುವುದು ಕಂಡುಬಂದಿದ್ದು, ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ.

ಅರಣ್ಯ ಇಲಾಖೆ ಕಾರ್ಯವಿಧಾನದ ಪ್ರಕಾರ, ಅಧಿಕಾರಿಗಳು ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಮೌಲ್ಯಮಾಪನ ವರದಿಯನ್ನು ಸಿದ್ಧಪಡಿಸಬೇಕು. ಅದರ ಆಧಾರದ ಮೇಲೆ ಸರ್ಕಾರ ಪರಿಹಾರವನ್ನು ಬಿಡುಗಡೆ ಮಾಡುತ್ತದೆ.

ಚಿಕ್ಕಮಗಳೂರು ತಾಲ್ಲೂಕಿನ ಕನತಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಅಲ್ಲಿ ರೈತ ಆನೆ ದಾಳಿಯಲ್ಲಿ 65 ಅಡಿಕೆ ಮರಗಳನ್ನು ಕಳೆದುಕೊಂಡಿದ್ದಾನೆ ಎನ್ನಲಾಗಿದೆ.

'ನೀವು ಖರ್ಚಿಗೆ ಹಣ ನೀಡಿದರೆ, ನಾನು ಹಾನಿಗೊಳಗಾದ ಮರಗಳ ಸಂಖ್ಯೆಯನ್ನು ಹೆಚ್ಚಿಸುತ್ತೇನೆ ಮತ್ತು ನಿಮಗೆ ಸರ್ಕಾರದಿಂದ ಹೆಚ್ಚಿನ ಪರಿಹಾರ ಸಿಗುತ್ತದೆ. ನೀವು ಪಾವತಿಸದಿದ್ದರೆ, ನಾನು ಕೇವಲ 65 ಮರಗಳನ್ನು ಮಾತ್ರವೇ ದಾಖಲಿಸುತ್ತೇನೆ' ಎಂದು ಅವರು ಹೇಳುತ್ತಿರುವುದು ಕೇಳಿಬರುತ್ತಿದೆ.

ಚಿಕ್ಕಮಗಳೂರು ಅರಣ್ಯ ವಿಭಾಗದ ಕನತಿ ಬೀಟ್‌ನಲ್ಲಿ ನಿಯೋಜಿತರಾಗಿರುವ ಉಪ ವಲಯ ಅರಣ್ಯಾಅಧಿಕಾರಿ (ಡಿಆರ್‌ಎಫ್‌ಒ) ವೀರಭದ್ರ ನಾಯಕ್ ಎಂದು ಅಧಿಕಾರಿಯನ್ನು ಗುರುತಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಆಪ್ತ ಮೂಲಗಳು ತಿಳಿಸಿವೆ.

ರೈತ ಹಣ ನೀಡಲು ನಿರಾಕರಿಸಿದಾಗ, ಅಧಿಕಾರಿ ಸ್ವಲ್ಪ ಸಮಯ ಕಾಯ್ದು ನಂತರ ವರದಿಯಲ್ಲಿ 65 ಮರಗಳು ಎಂದು ದಾಖಲಿಸಿದ್ದಾರೆ ಎಂದು ವಿಡಿಯೋದಲ್ಲಿ ತಿಳಿಸಲಾಗಿದೆ.

ಈ ವಿಡಿಯೋವನ್ನು 'X' ನಲ್ಲಿ ಬಳಕೆದಾರರೊಬ್ಬರು ಹಂಚಿಕೊಂಡಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಇಲಾಖೆಯ ಅಧಿಕೃತ ಖಾತೆಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಬೆಳೆ ನಷ್ಟದಿಂದಾಗಿ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ರೈತನಿಂದ ಲಂಚ ಕೇಳಿದ ಆರೋಪದ ಮೇಲೆ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೆಟಿಜನ್‌ಗಳು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel