ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ 
ರಾಜ್ಯ

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಬೆಳೆ ನಷ್ಟ; ಪರಿಹಾರಕ್ಕೆ ಲಂಚ ಕೇಳಿದ ಅರಣ್ಯ ಅಧಿಕಾರಿ; ವಿಡಿಯೋ ವೈರಲ್

ಅರಣ್ಯ ಇಲಾಖೆ ಕಾರ್ಯವಿಧಾನದ ಪ್ರಕಾರ, ಅಧಿಕಾರಿಗಳು ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಮೌಲ್ಯಮಾಪನ ವರದಿಯನ್ನು ಸಿದ್ಧಪಡಿಸಬೇಕು. ಅದರ ಆಧಾರದ ಮೇಲೆ ಸರ್ಕಾರ ಪರಿಹಾರ ಬಿಡುಗಡೆ ಮಾಡುತ್ತದೆ.

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಅಡಿಕೆ ಮತ್ತು ಬಾಳೆ ಬೆಳೆಗಳನ್ನು ಕಳೆದುಕೊಂಡ ರೈತನಿಂದಲೇ ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಲಂಚ ಕೇಳುತ್ತಿರುವ ವಿಡಿಯೋವೊಂದು ಬಹಿರಂಗಗೊಂಡಿದ್ದು, ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ, ಬೆಳೆ ಹಾನಿಯನ್ನು ಅಂದಾಜು ಮಾಡುವಾಗ ಅಧಿಕಾರಿ ರೈತನಿಂದ 'ವೆಚ್ಚಗಳಿಗೆ ಹಣ' ಪಾವತಿಸುವಂತೆ ಕೇಳುತ್ತಿರುವುದು ಕಂಡುಬಂದಿದ್ದು, ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ.

ಅರಣ್ಯ ಇಲಾಖೆ ಕಾರ್ಯವಿಧಾನದ ಪ್ರಕಾರ, ಅಧಿಕಾರಿಗಳು ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಮೌಲ್ಯಮಾಪನ ವರದಿಯನ್ನು ಸಿದ್ಧಪಡಿಸಬೇಕು. ಅದರ ಆಧಾರದ ಮೇಲೆ ಸರ್ಕಾರ ಪರಿಹಾರವನ್ನು ಬಿಡುಗಡೆ ಮಾಡುತ್ತದೆ.

ಚಿಕ್ಕಮಗಳೂರು ತಾಲ್ಲೂಕಿನ ಕನತಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಅಲ್ಲಿ ರೈತ ಆನೆ ದಾಳಿಯಲ್ಲಿ 65 ಅಡಿಕೆ ಮರಗಳನ್ನು ಕಳೆದುಕೊಂಡಿದ್ದಾನೆ ಎನ್ನಲಾಗಿದೆ.

'ನೀವು ಖರ್ಚಿಗೆ ಹಣ ನೀಡಿದರೆ, ನಾನು ಹಾನಿಗೊಳಗಾದ ಮರಗಳ ಸಂಖ್ಯೆಯನ್ನು ಹೆಚ್ಚಿಸುತ್ತೇನೆ ಮತ್ತು ನಿಮಗೆ ಸರ್ಕಾರದಿಂದ ಹೆಚ್ಚಿನ ಪರಿಹಾರ ಸಿಗುತ್ತದೆ. ನೀವು ಪಾವತಿಸದಿದ್ದರೆ, ನಾನು ಕೇವಲ 65 ಮರಗಳನ್ನು ಮಾತ್ರವೇ ದಾಖಲಿಸುತ್ತೇನೆ' ಎಂದು ಅವರು ಹೇಳುತ್ತಿರುವುದು ಕೇಳಿಬರುತ್ತಿದೆ.

ಚಿಕ್ಕಮಗಳೂರು ಅರಣ್ಯ ವಿಭಾಗದ ಕನತಿ ಬೀಟ್‌ನಲ್ಲಿ ನಿಯೋಜಿತರಾಗಿರುವ ಉಪ ವಲಯ ಅರಣ್ಯಾಅಧಿಕಾರಿ (ಡಿಆರ್‌ಎಫ್‌ಒ) ವೀರಭದ್ರ ನಾಯಕ್ ಎಂದು ಅಧಿಕಾರಿಯನ್ನು ಗುರುತಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಆಪ್ತ ಮೂಲಗಳು ತಿಳಿಸಿವೆ.

ರೈತ ಹಣ ನೀಡಲು ನಿರಾಕರಿಸಿದಾಗ, ಅಧಿಕಾರಿ ಸ್ವಲ್ಪ ಸಮಯ ಕಾಯ್ದು ನಂತರ ವರದಿಯಲ್ಲಿ 65 ಮರಗಳು ಎಂದು ದಾಖಲಿಸಿದ್ದಾರೆ ಎಂದು ವಿಡಿಯೋದಲ್ಲಿ ತಿಳಿಸಲಾಗಿದೆ.

ಈ ವಿಡಿಯೋವನ್ನು 'X' ನಲ್ಲಿ ಬಳಕೆದಾರರೊಬ್ಬರು ಹಂಚಿಕೊಂಡಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಇಲಾಖೆಯ ಅಧಿಕೃತ ಖಾತೆಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಬೆಳೆ ನಷ್ಟದಿಂದಾಗಿ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ರೈತನಿಂದ ಲಂಚ ಕೇಳಿದ ಆರೋಪದ ಮೇಲೆ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೆಟಿಜನ್‌ಗಳು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ ಚೌಧರಿ