ಸಂಗ್ರಹ ಚಿತ್ರ 
ರಾಜ್ಯ

ಕೌಟುಂಬಿಕ ಕಲಹಕ್ಕೆ ಅಮಾಯಕ ನಾಯಿ ಬಲಿ: ಸಾಕು ನಾಯಿಗೆ ಗುಂಡಿಟ್ಟು ಹತ್ಯೆ, ದೇವನಹಳ್ಳಿಯಲ್ಲಿ ಕ್ರೂರ ಕೃತ್ಯ..!

ನನ್ನ ನಾಯಿ ಯಾವುದೇ ಬೆಳೆ ನಾಶ ಮಾಡಿಲ್ಲ. ಬೀದಿ ನಾಯಿಗಳು ಹೊಲಕ್ಕೆ ನುಗ್ಗಿ ಹಾನಿ ಮಾಡಿವೆ. ಜಗಳ ಮಾಡಲು ಕಾರಣ ಹುಡುಕಿಕೊಂಡು ಬಂದು ಅಮಾಯಕ ನಾಯಿಯನ್ನು ಗುರಿಯಾಗಿಸಿಕೊಂಡಿದ್ದಾರೆ.

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ನಿರಪರಾಧಿ ನಾಯಿಯೊಂದು ಬಲಿಯಾದ ದಾರುಣ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.

ಬೆಳೆ ಹಾನಿ ನೆಪ ಮಾಡಿಕೊಂಡು ಮಲ ಸಹೋದರ ಸಾಕು ನಾಯಿಗೆ ಗುಂಡಿಟ್ಟು ಕೊಂದಿರುವ ಆರೋಪ ಕೇಳಿಬಂದಿದ್ದು, ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ನಾಲ್ಲೂರು ಗ್ರಾಮದ ನಿವಾಸಿ ಎನ್. ವೆಂಕಟೇಶ್ ಅವರು ತಮ್ಮ ಮಲ ಸಹೋದರ ನಾರಾಯಣಸ್ವಾಮಿ ಮತ್ತು ಅವರ ಪತ್ನಿ ನಾಗಮ್ಮ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಗಳವಾರ ರಾತ್ರಿ ಸುಮಾರು 9.15ರ ವೇಳೆಗೆ ಈ ಘಟನೆ ನಡೆದಿದ್ದು, ಆರೋಪಿಗಳು ಗುಂಡಿಟ್ಟು ನಾನು ಸಾಕಿದ್ದ ನಾಯಿಯನ್ನು ಹತ್ಯೆ ಮಾಡಿದ್ದಾರೆಂದು ತಿಳಿಸಿದ್ದಾರೆ.

ನನ್ನ ನಾಯಿ ಯಾವುದೇ ಬೆಳೆ ನಾಶ ಮಾಡಿಲ್ಲ. ಬೀದಿ ನಾಯಿಗಳು ಹೊಲಕ್ಕೆ ನುಗ್ಗಿ ಹಾನಿ ಮಾಡಿವೆ. ಜಗಳ ಮಾಡಲು ಕಾರಣ ಹುಡುಕಿಕೊಂಡು ಬಂದು ಅಮಾಯಕ ನಾಯಿಯನ್ನು ಗುರಿಯಾಗಿಸಿಕೊಂಡಿದ್ದಾರೆಂದು ಹೇಳಿದ್ದಾರೆ.

ಅಲ್ಲದೆ, ಘಟನೆಗೂ ಮುನ್ನ ಆರೋಪಿಗಳು ತಮ್ಮ ಕುಟುಂಬದವರಿಗೆಮೇಲೆ ಗನ್ ತೋರಿಸಿ ಜೀವ ಬೆದರಿಕೆ ಹಾಕಿದ್ದರು ಎಂದೂ ಆರೋಪಿಸಿದ್ದಾರೆ.

ಏತನ್ಮಧ್ಯೆ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮಾಹಿತಿಯ ಪ್ರಕಾರ, ಕುಟುಂಬದೊಳಗಿನ ಆಸ್ತಿ ವಿವಾದವೇ ಘಟನೆ ಕಾರಣ ಎನ್ನಲಾಗುತತಿದೆ. ವೆಂಕಟೇಶ್ ಅವರ ತಂದೆಗೆ ಇಬ್ಬರು ಪತ್ನಿಯರು ಇದ್ದು, ನಾರಾಯಣಸ್ವಾಮಿ ಎರಡನೇ ಹೆಂಡತಿಯ ಮಗ. ಆಸ್ತಿ ಹಂಚಿಕೆ ವಿಚಾರವಾಗಿ ಸಹೋದರರ ನಡುವೆ ದೀರ್ಘಕಾಲದಿಂದ ವೈಮನಸ್ಸು ಇತ್ತು ಎನ್ನಲಾಗಿದೆ.

ಈ ಸಂಬಂಧ ಚನ್ನರಾಯಪಟ್ಟಣ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಭಾರತೀಯ ಕಾಯ್ದೆ ಸೇರಿದಂತೆ ಹಲವು ವಿಧಿಗಳಡಿ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಜೊತೆಗೆ, ಆರೋಪಿಗಳಿಗೆ ಗನ್ ಬಳಸಲು ಮಾನ್ಯ ಪರವಾನಗಿ ಇದೆಯೇ ಎಂಬುದನ್ನೂ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

ಪೆಟ್ರೋಲ್ ದರ ಏರಿಕೆ, ದೇಶಾದ್ಯಂತ ವ್ಯಾಪಕ ಪ್ರತಿಭಟನೆ; ಬೆಚ್ಚಿಬಿದ್ದ Pak ಸರ್ಕಾರ, ಲೀಟರ್ ಗೆ 80 ರೂ ಗಳಷ್ಟು ಬೆಲೆ ಕಡಿತ!

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

IPL 2026: Shreyas Iyer ಗೆ ಮತ್ತೆ ದಂಡ.. ನಾಯಕ ಮಾತ್ರವಲ್ಲ ಇಡೀ ಪಂಜಾಬ್ ತಂಡಕ್ಕೆ ಬರೆ ಹಾಕಿದ ಮ್ಯಾಚ್ ರೆಫರಿ!

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

SCROLL FOR NEXT