ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

ಕೊಲೆಯಾದ ಯುವಕನನ್ನು 22 ವರ್ಷದ ವಿಜಯ್ ಎಂದು ಗುರುತಿಸಲಾಗಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಇಬ್ಬರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಶನಿವಾರ ನಡೆದಿದೆ.

ಕೊಲೆಯಾದ ಯುವಕನನ್ನು 22 ವರ್ಷದ ವಿಜಯ್ ಎಂದು ಗುರುತಿಸಲಾಗಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಇಬ್ಬರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಆರೋಪಿಗಳಾದ ಕಿರಣ್ ಮತ್ತು ವಿನೋದ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ನಿನ್ನೆ ರಾತ್ರಿ ವಿಜಯ್ ಬೈಕ್​​ಗೆ ವಿನೋದ್ ಬೈಕ್ ಟಚ್ ಆಗಿದೆ. ಇದೇ ವಿಚಾರವಾಗಿ ಗಲಾಟೆ ಕೂಡ ನಡೆದಿತ್ತು. ವಿಷಯವನ್ನು ಅಲ್ಲಿಗೆ ಬಿಡದೆ ಇಂದು ಬೆಳಗ್ಗೆ ವಿಜಯ್ ನನ್ನು ಹುಡುಕಿಕೊಂಡು ಆರೋಪಿಗಳಾದ ಕಿರಣ್ ಮತ್ತು ವಿನೋದ್ ಹೋಗಿದ್ದರು. ಮನೆ ಬಳಿ ತೆರಳಿದ್ದಾಗ ವಿಜಯ್ ಸಿಗದಿದ್ದರಿಂದ ಫೋನ್ ಮಾಡಿ ಆತನನ್ನು ಮತ್ತೆ ಬಾರ್ ಬಳಿಗೆ ಕರೆಸಿಕೊಂಡಿದ್ದರು. ವಿಜಯ್​​ ಸ್ಥಳಕ್ಕೆ ಬರುತ್ತಿದ್ದಂತೆ ಗಲಾಟೆ ಶುರುಮಾಡಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ವಿಜಯ್ ಹೊಟ್ಟೆಗೆ ಚಾಕು ಇರಿಯಲಾಗಿದ್ದು, ತೀವ್ರ ರಕ್ತಸ್ರಾವವಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಜೆ.ಸಿ.ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

ಇನ್ನು ಪ್ರಕರಣ ಸಂಬಂಧ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದ್ದು, ಬೈಕ್​​ ಟಚ್​​ ಆದ ವಿಚಾರ ಕೊಲೆಗೆ ಕೇವಲ ಪ್ರಚೋದನೆ ಮಾತ್ರ. ಹುಡುಗಿ ವಿಚಾರಕ್ಕೆ ಸಂಬಂಧಿಸಿ ಆರೋಪಿ ಕಿರಣ್​​ ಮತ್ತು ವಿಜಯ್​​ ನಡುವೆ ಹಿಂದಿನಿಂದಲೂ ದ್ವೇಷವಿತ್ತು. ವಿಜಯ್​​ಗೆ ಅದಾಗಲೇ ಮದುವೆಯಾಗಿದ್ದರೂ ಮಾಜಿ ಪ್ರೇಯಸಿಗೆ ಕಾಟ ನೀಡುತ್ತಿದ್ದ. ಆಕೆ ಈಗ ಕಿರಣ್​​ ಲವರ್​​ ಆಗಿದ್ದು, ಇದೇ ಕಾರಣಕ್ಕೆ ವಿಜಯ್​​ ಮೇಲೆ ಕಿರಣ್​​ಗೆ ಕೋಪ ಇತ್ತು. ಹೀಗಾಗಿ ವಿಜಯ್​​ನ ಕೊಲೆ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!