ಈಶ್ವರ್ ಖಂಡ್ರೆ, ಶರಣ್ಯಾ 
ರಾಜ್ಯ

ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳ ಯುವತಿ ನಾಪತ್ತೆ: ಪತ್ತೆಗೆ ನಾಲ್ಕು ಹೆಚ್ಚುವರಿ ತಂಡ ನಿಯೋಜನೆ, ಡ್ರೋನ್ ಶೋಧ- ಈಶ್ವರ ಖಂಡ್ರೆ

ಚಾರಣಕ್ಕಾಗಿ ಕೇರಳದಿಂದ ಆಗಮಿಸಿದ್ದ ಯುವತಿ ಕಕ್ಕಬ್ಬೆ ಗ್ರಾಮದಲ್ಲಿ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದರು. ಕಳೆದ ಗುರುವಾರ ಗೈಡ್ ಹಾಗೂ ಇತರ 15 ಚಾರಣಿಗರೊಂದಿಗೆ ಕೊಡಗಿನ ಎತ್ತರದ ಗಿರಿಶ್ರೇಣಿ ತಡಿಯಂಡವಮೋಳ್ ಬೆಟ್ಟಕ್ಕೆ ತೆರಳಿದ್ದರು.

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ ಚಾರಣಕ್ಕೆ ಬಂದಿದ್ದ ಕೇರಳದ 34 ವರ್ಷದ ಯುವತಿ ಜಿ.ಎಸ್. ಶರಣ್ಯಾ ಪತ್ತೆಗೆ ಹೆಚ್ಚುವರಿ ಸಿಬ್ಬಂದಿಯ ನಾಲ್ಕು ತಂಡಗಳನ್ನು ನಿಯೋಜಿಸಲು ಹಾಗೂ ಡ್ರೋನ್ ಕ್ಯಾಮರಾ ಬಳಸುವಂತೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಯುವತಿ ನಾಪತ್ತೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಧ ಕಾರ್ಯ ತೀವ್ರಗೊಳಿಸುವಂತೆ ಸೂಚನೆ ನೀಡಿದ್ದಾರೆ ಎಂದರು.

ಚಾರಣಕ್ಕಾಗಿ ಕೇರಳದಿಂದ ಆಗಮಿಸಿದ್ದ ಯುವತಿ ಕಕ್ಕಬ್ಬೆ ಗ್ರಾಮದಲ್ಲಿ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದರು. ಕಳೆದ ಗುರುವಾರ ಗೈಡ್ ಹಾಗೂ ಇತರ 15 ಚಾರಣಿಗರೊಂದಿಗೆ ಕೊಡಗಿನ ಎತ್ತರದ ಗಿರಿಶ್ರೇಣಿ ತಡಿಯಂಡವಮೋಳ್ ಬೆಟ್ಟಕ್ಕೆ ತೆರಳಿದ್ದರು.

ಗುರುವಾರ ಕೊನೆಯದಾಗಿ ದೂರವಾಣಿ ಮೂಲಕ ಹೋಂ ಸ್ಟೇ ಸಂಪರ್ಕಿಸಿರುವ ಯುವತಿ, ತಾನು ದಾರಿತಪ್ಪಿದ್ದಾಗಿ ತಿಳಿಸಿದ್ದಾರೆ ಎಂಬ ಮಾಹಿತಿ ಇದೆ.

ವಿಷಯ ತಿಳಿದ ಕೂಡಲೇ ಪೊಲೀಸರು, ನಕ್ಸಲ್ ನಿಗ್ರಹ ದಳ ಹಾಗೂ ಶ್ವಾನದಳ ಹಾಗೂ ಅರಣ್ಯ ಸಿಬ್ಬಂದಿ ಸೇರಿದಂತೆ 50 ಜನರ ಐದು ತಂಡಗಳು ಶೋಧ ಕಾರ್ಯ ನಡೆಸುತ್ತಿವೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ