ನಾಪತ್ತೆಯಾಗಿದ್ದ ಶರಣ್ಯ ಪತ್ತೆ 
ರಾಜ್ಯ

ಮಡಿಕೇರಿ: ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ 4 ದಿನಗಳ ಬಳಿಕ ಪತ್ತೆ!

ಕೊಡಗಿನ ತಡೆಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳಂ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ನಾಲ್ಕು ದಿನಗಳ ಬಳಿಕ ಪತ್ತೆಯಾಗಿದ್ದಾರೆ.

ಮಡಿಕೇರಿ: ಕೊಡಗಿನ ತಡೆಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳಂ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ನಾಲ್ಕು ದಿನಗಳ ಬಳಿಕ ಪತ್ತೆಯಾಗಿದ್ದಾರೆ. ಮಹಿಳೆ ನಾಪತ್ತೆ ವಿಷಯ ಅರಣ್ಯ ಇಲಾಖೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಹೀಗಾಗಿ ಹಗಲಿರುಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಸ್ಥಳೀಯರೊಂದಿಗೆ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಸತತ ಹುಡುಕಾಟ ನಡೆಸಿದ್ದು ಇಂದು ಪತ್ತೆಯಾಗಿದ್ದಾರೆ.

ಶರಣ್ಯ ಗುರುವಾರ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ಹೋಗಿದ್ದು ರಸ್ತೆ ಸಿಗದೇ ಪಾಳು ಬಿದ್ದ ಬಂಗಲೆಯೊದರಲ್ಲಿ ಉಳಿದುಕೊಂಡಿದ್ದರು. ಇನ್ನು ಶೋಧ ಕಾರ್ಯಾಚರಣೆ ಕೈಗೊಂಡಿದ್ದ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್, ಶ್ವಾನ ದಳವನ್ನು ಬಳಸಿದ್ದರೂ ಪತ್ತೆಯಾಗದ ಕಾರಣ ಆತಂಕ ಮೂಡಿತ್ತು. ಇದೀಗ ಶರಣ್ಯ ಪತ್ತೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್