ಸಾಂದರ್ಭಿಕ ಚಿತ್ರ  
ರಾಜ್ಯ

ಮಂಡ್ಯ: ಸಿಗರೇಟ್ ವಿಚಾರಕ್ಕೆ ಜಗಳ ಯುವಕನ ಕೊಲೆಯಲ್ಲಿ ಅಂತ್ಯ; ಪಿತ್ರಾರ್ಜಿತ ಆಸ್ತಿ ವಿಚಾರಕ್ಕೆ ಜಗಳದಲ್ಲಿ ಹಲವರಿಗೆ ಗಾಯ

ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಸಮೀಪ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಪರಿಣಾಮವಾಗಿ ಮರಳಿಗ ಗ್ರಾಮದ ಯಶವಂತ್ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮಂಡ್ಯ: ಕ್ಷುಲ್ಲಕ ಕಾರಣಗಳು ಜಗಳ ನಡೆದು ತಾರಕಕ್ಕೇರಿ ಯುವಕನ ಸಾವಿನಲ್ಲಿ ಅಂತ್ಯಗೊಂಡಿದೆ. ಮದ್ದೂರು ಮತ್ತು ಕೆ.ಆರ್.ಪೇಟೆಯಲ್ಲಿ ಮಾರಾಮಾರಿ ನಡೆದಿದ್ದು, ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಘಟನೆಗಳಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಸಮೀಪ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಪರಿಣಾಮವಾಗಿ ಮರಳಿಗ ಗ್ರಾಮದ ಯಶವಂತ್ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗೊರವನಹಳ್ಳಿ ಗ್ರಾಮದ ದರ್ಶನ್ ಮತ್ತು ಸಚಿನ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೆಲ ದಿನಗಳ ಹಿಂದೆ ಬಾರ್‌ನಲ್ಲಿ ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ಯುವಕರ ನಡುವೆ ಗಲಾಟೆ ನಡೆದಿತ್ತು. ಇದೇ ವಿಷಯಕ್ಕೆ ಕಳೆದ ರಾತ್ರಿ ರಾಜಿ ಮಾತುಕತೆ ನಡೆಯುವ ವೇಳೆ ಮತ್ತೆ ಜಗಳವಾಗಿದೆ. ಈ ಸಂದರ್ಭದಲ್ಲಿ ಯುವಕರು ದೊಣ್ಣೆಗಳಿಂದ ಪರಸ್ಪರ ದಾಳಿ ನಡೆಸಿಕೊಂಡಿದ್ದು, ಪರಿಣಾಮವಾಗಿ ಯಶವಂತ್ ಮೃತಪಟ್ಟಿದ್ದಾನೆ. ಮದ್ದೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಜೆ ಶೋಭಾರಾಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಸ್ತಿ ವಿಚಾರಕ್ಕೆ ಜಗಳ

ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದಲ್ಲಿ ಪಿತ್ರಾರ್ಜಿತ ಆಸ್ತಿ ಸಂಬಂಧ ರಸ್ತೆ ಬಿಡುವ ವಿಚಾರವಾಗಿ ದಾಯಾದಿಗಳ ನಡುವೆ ಉಂಟಾದ ಜಗಳ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ಸಂಬಂಧಿಕರು ಮಾರಕಾಸ್ತ್ರಗಳಿಂದ ಪರಸ್ಪರ ದಾಳಿ ನಡೆಸಿಕೊಂಡಿದ್ದಾರೆ. ಪರಿಣಾಮವಾಗಿ ಸೋಮೇಗೌಡ, ವಸಂತ್ ಮತ್ತು ನಿಶಾಂತ್ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಕುರ್ಚಿ ಕದನಕ್ಕೆ ಕೊನೆಗೂ climax? ಸಿಎಂ ಡಿಸಿಎಂ ಗೆ ಹೈಕಮಾಂಡ್ ಬುಲಾವ್; ರಾಜ್ಯ ರಾಜಕೀಯದಲ್ಲಿ ಸಂಚಲನ!

I Love India, I Love Modi: ಭಾರತ ನನ್ನನ್ನ 100% ನಂಬಬಹುದು- ಡೊನಾಲ್ಡ್ ಟ್ರಂಪ್

ಕದನ ವಿರಾಮ, ಹಾರ್ಮುಜ್ ಜಲಸಂಧಿ ತೆರೆಯಲು ಒಪ್ಪಂದಕ್ಕೆ ಇರಾನ್-ಯುಎಸ್ ಹತ್ತಿರ: 'ಆತುರ ಬೇಡ'- ಟ್ರಂಪ್ ಹೊಸ ವರಸೆ!

SCROLL FOR NEXT