ವಿಜಯಾನಂದ್ ಕಾಶೆಪ್ಪನವರ್ 
ರಾಜ್ಯ

ಜಯಮೃತ್ಯುಂಜಯ ಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಅವರು ಸ್ವಾಮೀಜಿಗಳಾಗಿ ಉಳಿದಿಲ್ಲ; ಕಾಶಪ್ಪನವರ್ ಕಿಡಿ

ಬಸವ ಜಯಮೃತ್ಯುಂಜಯ ಶ್ರೀ ಈಗ ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಗಳಲ್ಲಿ ಅವರು ಸ್ವಾಮೀಜಿಗಳಾಗಿಲ್ಲ ಇಂಥಹ ಕಾರಣಕ್ಕೆ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿತ್ತು ಎಂದು ಕಾಶಪ್ಪನವರ್ ಹೇಳಿದ್ದಾರೆ.

ಬಾಗಲಕೋಟೆ: ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಹೋರಾಟದ ನೇತೃತ್ವವಹಿಸಿಕೊಂಡಿದ್ದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆ ದೂರು ನೀಡಿದ್ದು, ಸ್ವತಃ ಸ್ವಾಮೀಜಿ ನನ್ನ ಖಾಸಗಿ ವಿಡಿಯೋ ಮಾಡಿ ಲೈಂಗಿಕವಾಗಿ ಸಹಕರಿಸುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಬೆಂಕಿಯಿಲ್ಲದೇ ಹೊಗೆಯಾಡುವುದಿಲ್ಲ. ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ದರೇ ಯಾಕೆ ಸ್ಟೇ ತರುತ್ತಿದ್ದರು ಎಂದು ಕಿಡಿ ಕಾರಿದ್ದಾರೆ.

ಬಸವ ಜಯಮೃತ್ಯುಂಜಯ ಶ್ರೀ ಈಗ ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಗಳಲ್ಲಿ ಅವರು ಸ್ವಾಮೀಜಿಗಳಾಗಿಲ್ಲ ಇಂಥಹ ಕಾರಣಕ್ಕೆ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿತ್ತು ಎಂದು ಕಾಶಪ್ಪನವರ್ ಹೇಳಿದ್ದಾರೆ.

ಬದಲಾಗಲಿ ಎಂದು ಸ್ವಾಮೀಜಿಗಳಿಗೆ ನೋಟಿಸ್ ಕೂಡ ನೀಡಿದ್ದೆವು. ಆದರೆ ನೋಟಿಸ್ ನೀಡಿದರೂ ಬದಲಾಗದ ಹಿನ್ನೆಲೆಯಲ್ಲಿ ಅವರನ್ನು ಉಚ್ಛಾಟನೆ ಮಾಡಲಾಯಿತು. ಕಾಲ ಎಲ್ಲದಕ್ಕೂ ಉತ್ತರ ನೀಡುತ್ತಿದೆ ಎಂದು ಕಾಶಪ್ಪನವರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾನು ಸೇರಿದಂತೆ 14 ಮಿಲಿಯನ್ ಇರಾನಿಯನ್ನರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧ- ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್!

Iran ಸರ್ವಾಧಿಕಾರಿ ಈಗ 'ಜೀವಂತ ಶವ', 'ಪ್ರಜ್ಞಾಹೀನ'.. ಯುದ್ಧವೂ ಗೊತ್ತಿಲ್ಲ.. ಕದನ ವಿರಾಮದ ಅರಿವೂ ಇಲ್ಲ: ವರದಿ

'ಹೇಳಿ ಇಲ್ಲದಿದ್ದರೆ ಜೈಲಿಗೆ ಹೋಗಿ': F-15 ಜೆಟ್‌ ಸೂಕ್ಷ್ಮ ಮಾಹಿತಿ 'ಸೋರಿಕೆದಾರನ' ಪತ್ತೆಗೆ ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ, ಮಾಧ್ಯಮಗಳಿಗೆ ಬೆದರಿಕೆ!

Drink And Drive Case: ಆಸ್ಟ್ರೇಲಿಯಾದ ಲೆಜೆಂಡ್ ಡೇವಿಡ್ ವಾರ್ನರ್ ಬಂಧನ! ಕರಾಚಿ ಕಿಂಗ್ಸ್ ಗೆ ಹೊಡೆತ!

ಇಸ್ರೇಲ್ ರಾಯಭಾರ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ದಾಳಿಕೋರ ಸಾವು, ಮತ್ತಿಬ್ಬರನ್ನು ಸೆರೆ ಹಿಡಿದ ಪೊಲೀಸರು!

SCROLL FOR NEXT