ಜ್ಯೋತಿ ಕಪಾಳೆ ಹಿರೇಮಠ  
ರಾಜ್ಯ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಸರ್ಕಾರಿ ಶಾಲಾ ಶಿಕ್ಷಕಿ ಹತ್ಯೆ!

ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿರುವ ಜ್ಯೋತಿ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ಕಲಬುರಗಿ: ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಹಂತಕರು ಶವವನ್ನು ಸುಟ್ಟುಹಾಕಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ.

ಜ್ಯೋತಿ ಕಪಾಳೆ ಹಿರೇಮಠ (57) ಕೊಲೆಯಾದ ಸರ್ಕಾರಿ ಶಾಲಾ ಶಿಕ್ಷಕಿ. ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿರುವ ಜ್ಯೋತಿ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ಬೀದರ್‌ನಲ್ಲೇ ಮನೆ ಮಾಡಿ ಶಾಲೆಗೆ ಹೋಗಿಬರುತ್ತಿದ್ದ ಜ್ಯೋತಿ ವಾರಕ್ಕೊಂದು ಬಾರಿ ಕಲಬುರಗಿಗೆ ಬಂದು ವಾಪಸ್ ತೆರಳುತ್ತಿದ್ದರು. ಕಲಬುರಗಿಯಿಂದ ಬೀದರ್ ತೇರಳುವಾಗ ಮಾರ್ಗ ಮಧ್ಯದ ಕಮಲಾಪುರದ ಕಲ್ಮೂಡನಲ್ಲಿ ಜ್ಯೋತಿಯನ್ನು ಕೊಲೆಗೈದ ದುಷ್ಕರ್ಮಿಗಳು ರಸ್ತೆ ಪಕ್ಕದಲ್ಲಿ ಐದು ಲೀಟರ್ ಪೆಟ್ರೋಲ್ ಹಾಕಿ ಶವವನ್ನು ಸುಟ್ಟು ಹಾಕಿದ್ದಾರೆ.

ಆರಂಭದಲ್ಲಿ, ಕಲ್ಮೋಡ್‌ನ ಮನೋಹರ್ ಚಕ್ರಕರ್ ಅವರ ದೂರಿನ ಆಧಾರದ ಮೇಲೆ ಅಪರಿಚಿತ ಮಹಿಳೆಯ ಕೊಲೆ ಎಂದು ದಾಖಲಿಸಲಾಗಿತ್ತು. ನಂತರ ಅವರ ಗುರುತು ಪತ್ತೆಯಾಗಿದೆ.

ಆರೋಪಿಗಳಿಗಾಗಿ ಹುಡುಕಾಟ ಆರಂಭವಾಗಿದೆ ಮತ್ತು ಅವರನ್ನು ಬಂಧಿಸಿದ ನಂತರ, ಅಪರಾಧದ ಹಿಂದಿನ ಉದ್ದೇಶ ತಿಳಿಯುತ್ತದೆ ಎಂದು ಕಲಬುರಗಿ ಎಸ್ಪಿ ಪಿ ಅಡ್ಡೂರು ಶ್ರೀನಿವಾಸಲು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ, ಹಾರ್ಮುಜ್ ಜಲಸಂಧಿ ತೆರೆಯಲು ಒಪ್ಪಂದಕ್ಕೆ ಇರಾನ್-US ಹತ್ತಿರ: 'ಆತುರ ಬೇಡ'-ಟ್ರಂಪ್ ಹೊಸ ವರಸೆ!

ಇರಾನ್-US ಕದನ ವಿರಾಮದ ನಡುವೆ ಯುಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ; ರಾಜಧಾನಿಗೆ ಅಪ್ಪಳಿಸಿದ ಹೊಸ ಹೈಪರ್ಸಾನಿಕ್ ಕ್ಷಿಪಣಿ| video

ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!

ಗೋಹತ್ಯೆ ನಿಲ್ಲಬೇಕೆ?: ಮೊದಲು ಗೋವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಿ: ಬಕ್ರೀದ್'ಗೂ ಮುನ್ನ ಮುಸ್ಲಿಂ ಸಂಘಟನೆಗಳ ಒತ್ತಾಯ!

IPL 2026: ಮುಂಬೈ ಇಂಡಿಯನ್ಸ್ ಮಣಿಸಿ ಪ್ಲೇಆಫ್‌ಗೆ ಎಂಟ್ರಿಕೊಟ್ಟ ರಾಜಸ್ಥಾನ ರಾಯಲ್ಸ್; ಪಂಜಾಬ್, KKR ಕನಸು ಭಗ್ನ!

SCROLL FOR NEXT