ಬಾಲಕಿ ನಂದನಾ 
ರಾಜ್ಯ

ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಕೇರಳದ 14 ವರ್ಷದ ಬಾಲಕಿ ನಾಪತ್ತೆ; ತೀವ್ರ ಹುಡುಕಾಟ!

ಬಾಲಕಿಯನ್ನು ಕೇರಳದ ಪಾಲಕ್ಕಾಡ್ ಮೂಲದ ನಂದನಾ ಎಂದು ಗುರುತಿಸಲಾಗಿದೆ. ಈಕೆ ತನ್ನ ಪೋಷಕರು ಮತ್ತು ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು.

ಚಿಕ್ಕಮಗಳೂರು: ಇತ್ತೀಚಿಗೆ ಕೊಡಗಿಗೆ ಚಾರಣಕ್ಕೆ ಆಗಮಿಸಿದ್ದ ಆಗಮಿಸಿದ್ದ ಶರಣ್ಯಾ ಎಂಬ ಕೇರಳದ ಯುವತಿ ನಾಪತ್ತೆ ಪ್ರಕರಣ ಸುಖಾಂತ್ಯಗೊಂಡ ಬೆನ್ನಲ್ಲೇ ಇದೀಗ ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಮುಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ 14 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಬಾಲಕಿಯನ್ನು ಕೇರಳದ ಪಾಲಕ್ಕಾಡ್ ಮೂಲದ ನಂದನಾ ಎಂದು ಗುರುತಿಸಲಾಗಿದೆ. ಈಕೆ ತನ್ನ ಪೋಷಕರು ಮತ್ತು ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ನಿನ್ನೆ ಸಂಜೆ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಬಳಿ ಈ ಘಟನೆ ಸಂಭವಿಸಿದೆ. ಬಾಲಕಿಯ ಕುಟುಂಬದವರು ಹಾಗೂ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಮಾಣಿಕ್ಯಧಾರಾ ಜಲಪಾತದ ಸಮೀಪವಿರುವ ಬೆಟ್ಟದ ಪ್ರದೇಶದಲ್ಲಿ ಸಂಜೆ ಸುಮಾರು 6 ಗಂಟೆಯ ಸುಮಾರಿಗೆ ನಂದನಾ ತಂಡದಿಂದ ಬೇರ್ಪಟ್ಟಿದ್ದಾಳೆ. ಆರಂಭದಲ್ಲಿ ಆಕೆ ಎಲ್ಲೋ ಹತ್ತಿರದಲ್ಲಿ ಇರಬಹುದು ಎಂದು ಭಾವಿಸಿದ್ದ ಪೋಷಕರು ಮತ್ತು ತಂಡದ ಸದಸ್ಯರು, ಸಮಯ ಕಳೆದಂತೆ ಗಾಬರಿಗೊಂಡಿದ್ದಾರೆ.

ಸ್ಥಳೀಯರು ಮತ್ತು ಇತರ ಪ್ರವಾಸಿಗರು ರಾತ್ರಿ 8 ಗಂಟೆಯವರೆಗೂ ಹುಡುಕಾಟ ಆರಂಭಿಸಿದರೂ ಸಹ, ದಟ್ಟವಾದ ಮಂಜು ಮತ್ತು ಕತ್ತಲೆಯಿಂದಾಗಿ ಯಾವುದೇ ಸುಳಿವು ಸಿಗಲಿಲ್ಲ. ಈ ಪ್ರದೇಶವು ಕಡಿದಾದ ಇಳಿಜಾರು ಮತ್ತು ದಟ್ಟವಾದ ಹುಲ್ಲುಗಾವಲುಗಳಿಂದ ಕೂಡಿದ್ದು, ಹುಡುಕಾಟಕ್ಕೆ ಭಾರಿ ಅಡಚಣೆಯಾಗಿದೆ. ಬಳಿಕ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ರಾತ್ರಿಯಿಡೀ ಹುಡುಕಾಟ ನಡೆಸಿದ್ದಾರೆ. ಥರ್ಮಲ್ ಡ್ರೋನ್ ಬಳಸಿ ಬೆಳಗಿನ ಜಾವ 4-30ರ ತನಕ ಶೋಧ ನಡೆಸಿದ್ದಾರೆ. ಆದರೂ ಬಾಲಕಿ ಪತ್ತೆಯಾಗಿಲ್ಲ. ಬೆಳಗ್ಗೆ ವಿಪತ್ತು ನಿರ್ವಹಣಾ ತಂಡದವರು ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೀತೇಂದ್ರ ಕುಮಾರ್ ದಯಾಮ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ