ಸಿದ್ದರಾಮಯ್ಯ 
ರಾಜ್ಯ

ನಿಮ್ಮ ಗೊಡ್ಡು ಬೆದರಿಕೆಗಳಿಗೆ ಬಗ್ಗಲ್ಲ: 'ಗ್ಯಾರಂಟಿ' ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಸಿದ್ದರಾಮಯ್ಯ ಸಿಡಿಮಿಡಿ

ಚುನಾವಣಾ ಆಯೋಗ ಅನುಸರಿಸುತ್ತಿರುವ ನೀತಿಯು ಅನುಮಾನಸ್ಪದವಾಗಿದೆ. ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ನಗದು ವರ್ಗಾವಣೆ ಯೋಜನೆಗಳನ್ನು ಪ್ರಕಟಿಸಲಾಗಿದೆ ಮತ್ತು ಅಂತಹ ಯೋಜನೆಗಳ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ.

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಚುನಾವಣಾ ಆಯೋಗ ವರದಿ ಕೇಳಿದ್ದು, ಇದರ ಬೆನ್ನಲ್ಲೇ ಆಯೋಗದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು (ECI) ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿದೆ. ಆದರೆ, ನಮ್ಮ ಗ್ಯಾರಂಟಿ ಯೋಜನೆಗಳು ಈ ಉಪಚುನಾವಣೆ ಸಮಯದಲ್ಲಿ ಜಾರಿಯಾದವುಗಳಲ್ಲ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳು 2023ರ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆಗಳ ಭಾಗವಾಗಿ ನಮ್ಮ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಕಾರ್ಯಕ್ರಮಗಳಾಗಿವೆ. ಈ ಯೋಜನೆಗಳಡಿ ರಾಜ್ಯದ ಎಲ್ಲ ಫಲಾನುಭವಿಗಳ ಖಾತೆಗಳಿಗೆ ನಿಯಮಿತವಾಗಿ, ಪಾರದರ್ಶಕವಾಗಿ ಹಣ ವರ್ಗಾವಣೆಯಾಗುತ್ತಿದೆ. ರಾಜ್ಯದ ಎಲ್ಲ ವರ್ಗದ ಜನರು ಘನತೆಯಿಂದ ಜೀವಿಸಲು ಮತ್ತು ಜೀವನ ನಿರ್ವಹಣೆಗೆ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರವು ನೇರವಾಗಿ ಒದಗಿಸುತ್ತಿರುವ ಅನುದಾನವಾಗಿದೆ. ಈ ಯೋಜನೆಗಳು ಆಡಳಿತದ ಭಾಗವೇ ಹೊರತು, ಮತದಾರರನ್ನು ಸೆಳೆಯುವ ಕಾರ್ಯಕ್ರಮಗಳಲ್ಲ.

ಬಿಜೆಪಿಯು ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆ ನೀತಿಯ ಧೋರಣೆಯನ್ನು ತಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಒಂದು ಕಡೆ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು “ಬಿಟ್ಟಿ ಭಾಗ್ಯ” ಎಂದು ಅಪಹಾಸ್ಯ ಮಾಡುತ್ತಾರೆ. ಮತ್ತೊಂದು ಕಡೆ ಅದೇ ಯೋಜನೆಗಳನ್ನು ಅನುಕರಿಸಿ ತಾವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಗೊಳಿಸುತ್ತಾರೆ. ಇದರಿಂದ ಕರ್ನಾಟಕದ ಮಾದರಿಯು ದೇಶಕ್ಕೆ ಪ್ರೇರಣೆಯಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಆದರೆ, ಈ ವಿಚಾರವಾಗಿ ಚುನಾವಣಾ ಆಯೋಗ ಅನುಸರಿಸುತ್ತಿರುವ ನೀತಿಯು ಅನುಮಾನಸ್ಪದವಾಗಿದೆ. ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ನಗದು ವರ್ಗಾವಣೆ ಯೋಜನೆಗಳನ್ನು ಪ್ರಕಟಿಸಲಾಗಿದೆ ಮತ್ತು ಅಂತಹ ಯೋಜನೆಗಳ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ. ಮತದಾರರಿಗೆ ನೇರವಾಗಿ ಯೋಜನೆಗಳ ಲಾಭವನ್ನು ವರ್ಗಾವಣೆ ಮಾಡಲಾಗಿದೆ. ಅವೆಲ್ಲವೂ ಬಹಿರಂಗವಾಗಿ ನಡೆದಿವೆ. ಆದರೂ ಚುನಾವಣಾ ಆಯೋಗ ಮೌನವಹಿಸಿತ್ತು, ಯಾವುದೇ ಪರಿಶೀಲನೆಗೆ ಒಳಪಡಿಸದೆ ಯೋಜನೆಗಳನ್ನು ಮುಂದುವರಿಸಲು ಅನುಮತಿ ನೀಡಿತ್ತು.

ಇದು ನಿಷ್ಪಕ್ಷಪಾತ ನಡೆಯಲ್ಲ, ಇದು ಒಂದು ಪಕ್ಷಕ್ಕೆ ನೀಡಿದ ಸಹಕಾರವಾಗಿದೆ. ಬಿಜೆಪಿ ಅಥವಾ ಎನ್‌ಡಿಎ ಸರ್ಕಾರಗಳು ಏನು ಮಾಡಿದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿಕೊಂಡಿರುತ್ತದೆ. ಆದರೆ, ಕರ್ನಾಟಕ ಸರ್ಕಾರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿರುವಾಗ ಅದೇ ಆಯೋಗವು ಕ್ಯಾತೆ ತೆಗೆಯುತ್ತಿದೆ. ಈ ಇಬ್ಬಗೆಯ ನೀತಿಯು ಚುನಾವಣಾ ಆಯೋಗದ ಪಕ್ಷಪಾತವನ್ನು ಬಯಲು ಮಾಡುತ್ತದೆ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಗುರಿಯಾಗಿಸಿ ದಾಳಿ ಮಾಡುವುದು ಕೇವಲ ರಾಜಕೀಯ ಎಂದೆನಿಸುವುದಿಲ್ಲ – ಇದು ಬಡವರ ವಿರುದ್ಧ, ಮಹಿಳೆಯರ ವಿರುದ್ಧ ಮತ್ತು ಕರ್ನಾಟಕದ ವಿರುದ್ಧದ ಪರೋಕ್ಷ ದಾಳಿಯಾಗಿದೆ. ನುಡಿದಂತೆ ನಡೆವ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಮ್ಮ ಸರ್ಕಾರವು ಚುನಾವಣಾ ಆಯೋಗದ ಇಂತಹ ಗೊಡ್ಡು ಬೆದರಿಕೆಗಳಿಗೆ ಬಗ್ಗದೆ ತಾನು ಕೊಟ್ಟ ಭರವಸೆಗಳನ್ನು ಪೂರೈಸುವಲ್ಲಿ ಬದ್ಧವಾಗಿರುತ್ತದೆ ಮತ್ತು ಪ್ರತಿ ಕನ್ನಡಿಗನ ಸೇವೆಯನ್ನು ಎಂದಿನಂತೆ ಮುಂದುವರಿಸಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್-US ಕದನ ವಿರಾಮದ ನಡುವೆ ಯುಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ; ರಾಜಧಾನಿಗೆ ಅಪ್ಪಳಿಸಿದ ಹೊಸ ಹೈಪರ್ಸಾನಿಕ್ ಕ್ಷಿಪಣಿ| video

ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!

ಗೋಹತ್ಯೆ ನಿಲ್ಲಬೇಕೆ?: ಮೊದಲು ಗೋವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಿ: ಬಕ್ರೀದ್'ಗೂ ಮುನ್ನ ಮುಸ್ಲಿಂ ಸಂಘಟನೆಗಳ ಒತ್ತಾಯ!

IPL 2026: ಮುಂಬೈ ಇಂಡಿಯನ್ಸ್ ಮಣಿಸಿ ಪ್ಲೇಆಫ್‌ಗೆ ಎಂಟ್ರಿಕೊಟ್ಟ ರಾಜಸ್ಥಾನ ರಾಯಲ್ಸ್; ಪಂಜಾಬ್, KKR ಕನಸು ಭಗ್ನ!

IPL 2026: ಶಾರ್ದೂಲ್ ಠಾಕೂರ್‌ ವಿರುದ್ಧ 'ಸ್ವೀಟ್ ರಿವೆಂಜ್' ತೀರಿಸಿಕೊಂಡ ರವೀಂದ್ರ ಜಡೇಜಾ! Video ವೈರಲ್

SCROLL FOR NEXT