ಸಚಿವ ಚಲುವರಾಯಸ್ವಾಮಿ 
ರಾಜ್ಯ

ವಿಧಾನಸಭಾ ಚುನಾವಣೆಯಲ್ಲೂ ಮಹಿಳೆಯರಿಗೆ ಮೀಸಲಾತಿ: ಶೀಘ್ರದಲ್ಲೇ ಜಾರಿ; ಸಚಿವ ಚಲುವರಾಯಸ್ವಾಮಿ

ಸವಾಲುಗಳು ಜೀವನದ ಒಂದು ಭಾಗವಾಗಿದ್ದರೂ, ಸರ್ಕಾರವು ಒದಗಿಸುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಮುಂದೆ ಸಾಗಬೇಕು.

ಮಂಡ್ಯ: ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಈಗಾಗಲೇ 1.3 ಲಕ್ಷ ಕೋಟಿ ರೂ.ಕ್ಕಿಂತ ಹೆಚ್ಚು ಹಣವನ್ನು ವಿತರಿಸಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದರು.

ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬುಧವಾರ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು,

ಸವಾಲುಗಳು ಜೀವನದ ಒಂದು ಭಾಗವಾಗಿದ್ದರೂ, ಸರ್ಕಾರವು ಒದಗಿಸುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಮುಂದೆ ಸಾಗಬೇಕು ಎಂದು ಹೇಳಿದರು.

ಇದೇ ವೇಳೆ ಸಮಾಜದಲ್ಲಿ ಮಹಿಳೆಯರ ಪಾತ್ರದ ಮಹತ್ವವನ್ನು ಒತ್ತಿಹೇಳಿದ ಅವರು, ಸ್ವಾತಂತ್ರ್ಯಕ್ಕೂ ಮುನ್ನವೇ ಮಹಿಳೆಯರಿಗೆ ಪ್ರತಿನಿಧಿತ್ವ ಮತ್ತು ಮನ್ನಣೆ ದೊರಕಿತ್ತು.. “ಹೆಣ್ಣು ಮಗು ಶಿಕ್ಷಣ ಪಡೆದರೆ ಒಂದು ಶಾಲೆ ತೆರೆದಂತೆಯೇ” ಎಂಬ ಸಂದೇಶದಡಿ ಮಹಿಳಾ ಶಿಕ್ಷಣಕ್ಕೆ ಸರ್ಕಾರ ವಿಶೇಷ ಒತ್ತು ನೀಡುತ್ತಿದೆ. ಶಿಕ್ಷಕರ ನೇಮಕಾತಿಯಲ್ಲಿ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ. ಜೊತೆಗೆ ಜಿಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇನ್ನೂ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿಯೂ ಮಹಿಳೆಯರಿಗೆ ಮೀಸಲಾತಿ ನೀಡುವ ದಿನ ದೂರವಿಲ್ಲ. ಎಂದೂ ಇದೇ ವೇಳೆ ಹೇಳಿದರು.

ಬಳಿಕ ಮಹಿಳೆಯರ ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಅಗತ್ಯವನ್ನು ಒತ್ತಿ ಹೇಳಿದ ಅವರು, ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಇದಲ್ಲದೆ, ಎನ್‌ಆರ್‌ಎಲ್‌ಎಂ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಘೋಷಿಸಿದರು.

ಈ ಸಂದರ್ಭದಲ್ಲಿ ಶಾಸಕ ಪಿ. ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಮಹಿಳೆಯರಿಗೆ ಸಣ್ಣ ಕೈಗಾರಿಕೆಗಳನ್ನು ಉತ್ತೇಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್ ಅವರು ಮಾತನಾಡಿ, ಗಾರ್ಮೆಂಟ್ ಘಟಕಗಳನ್ನು ಸ್ಥಾಪಿಸುವುದರ ಕುರಿತಂತೆಯೂ ಚರ್ಚೆ ನಡಯುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

SCROLL FOR NEXT