ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಬುಧವಾರ ತುಮಕೂರಿನಲ್ಲಿ ವೃದ್ಧ ಮಹಿಳೆಯೊಬ್ಬರ ಕುಂದುಕೊರತೆಗಳನ್ನು ಆಲಿಸಿದರು. 
ರಾಜ್ಯ

ಗೃಹಲಕ್ಷ್ಮೀ ಬೇಡಯ್ಯ, ಮನೆ ನೀಡಯ್ಯ: ಹಕ್ಕುಪತ್ರ ನೀಡದ ಸರ್ಕಾರಕ್ಕೆ ಹಾಡಿನ ಮೂಲಕ ಮಹಿಳೆ ಚಾಟಿ..!

ಗೃಹ ಸಚಿವ ಜಿ.ಪರಮೇಶ್ವರ್ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಾಬಿಯಾ ಅಸ್ಲಾಂ ಪಾಷಾ ಎಂಬ ಮಹಿಳೆ ಮನೆ ಜಾಗಕ್ಕೆ ಹಕ್ಕುಪತ್ರ ನೀಡದ ಅಧಿಕಾರಿಗಳ ವಿರುದ್ಧ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದರು.

ತುಮಕೂರು: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು, ಶಿರಾ ಪಟ್ಟಣದ ಮಹಿಳೆ ಒಬ್ಬರು ಜನಸ್ಪಂದನ ಕಾರ್ಯಕ್ರಮದಲ್ಲಿ ಹಾಡು ಹಾಡಿ ಮತ್ತು ಪ್ರತಿಭಟನೆ ನಡೆಸಿದ ಘಟನೆ ಗಮನ ಸೆಳೆದಿದೆ.

ಗೃಹ ಸಚಿವ ಜಿ.ಪರಮೇಶ್ವರ್ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಾಬಿಯಾ ಅಸ್ಲಾಂ ಪಾಷಾ ಎಂಬ ಮಹಿಳೆ ಮನೆ ಜಾಗಕ್ಕೆ ಹಕ್ಕುಪತ್ರ ನೀಡದ ಅಧಿಕಾರಿಗಳ ವಿರುದ್ಧ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಸರ್ಕಾರದ ಯೋಜನೆಯಡಿ ನೀಡಬೇಕಾದ ಹಕ್ಕುಪತ್ರವನ್ನು ಬಹುಕಾಲದಿಂದ ನೀಡದ ಹಿನ್ನೆಲೆಯಲ್ಲಿ, ರಾಬಿಯಾ ವ್ಯಂಗ್ಯಗೀತೆ ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉಲ್ಲೇಖಿಸಿ ಹಾಡು ಹಾಡಿದರು.

“ಐದು ಗ್ಯಾರಂಟಿಗಳ ಬದಲು ನನಗೆ ಮನೆ ಕೊಡಿ” ಎಂಬ ಅರ್ಥದ ಗೀತೆಯ ಮೂಲಕ ಅವರು ತಮ್ಮ ಸಮಸ್ಯೆಯನ್ನು ಬಹಿರಂಗಪಡಿಸಲು ಪ್ರಯತ್ನಿಸಿದರು.

2024ರಲ್ಲಿ ಮುಖ್ಯಮಂತ್ರಿಗಳ ಭೇಟಿಯ ವೇಳೆ ಕೂಡ ಇದೇ ರೀತಿಯ ಪ್ರತಿಭಟನೆ ನಡೆಸಿದ್ದರು. ಬಳಿರ ಜಿಲ್ಲಾಧಿಕಾರಿ ಸಮಸ್ಯೆ ಪರಿಹರಿಸಲು ಸೂಚನೆ ನೀಡಿದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದ್ದಾರೆ.

ಈ ಬಾರಿ ಜನಸ್ಪಂದನ ಕಾರ್ಯಕ್ರಮದಲ್ಲಿ ತಮ್ಮ ಇಬ್ಬರು ಮಕ್ಕಳೊಂದಿಗೆ ವೇದಿಕೆಯ ಮೇಲೆ ತೆರಳಿ ಹಾಡು ಹಾಡಿ, ಅಧಿಕಾರಿಗಳ ವಿರುದ್ಧ ಪ್ರತಿಭಟಿಸಿದರು.

ಕೂಡಲೇ ಪೊಲೀಸರು ಅವರು ಸ್ಥಳದಿಂದ ಹೊರಗೆ ಕರೆದೊಯ್ದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಅಡ್ಡಿಪಡಿಸಲು ಯತ್ನಿಸಿದ ಆರೋಪದ ಮೇಲೆ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರನ್ನೂ ಪೊಲೀಸರು ವಶಕ್ಕೆ ಪಡೆದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸಂಬಂಧ ಸುಮಾರು 2,500ಕ್ಕೂ ಹೆಚ್ಚು ದೂರುಗಳು ಬಂದಿದ್ದು, ಅವುಗಳಲ್ಲಿ ಸುಮಾರು 450 ದೂರುಗಳು ಆದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸಚಿವ ಪರಮೇಶ್ವರ್ ಅವರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ತಹಶೀಲ್ದಾರರು ಮತ್ತು ಸಹಾಯಕ ಆಯುಕ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ. ಪಡಿತರ ಚೀಟಿಯಲ್ಲಿ ಹೆಸರು ಬದಲಾಯಿಸಲು ಒಂದು ವರ್ಷದಿಂದ ಅಲೆದಾಡುತ್ತಿದ್ದಾರೆ, ಈ ಪ್ರವೃತ್ತಿ ಮುಂದುವರಿದರೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನ್ಯಾಯಾಲಯದ ಆದೇಶಗಳಿದ್ದರೆ, ಜನರಿಗೆ ನ್ಯಾಯ ಒದಗಿಸಲು ಅವುಗಳನ್ನು ತ್ವರಿತವಾಗಿ ಕಾರ್ಯಗತಗೊಳಿಸಬೇಕು ಎಂದೂ ಸ್ಪಷ್ಟಪಡಿಸಿದ್ದಾರೆ.

ಜೊತೆಗೆ, ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದ ಪ್ರಗತಿ ನಿಧಾನವಾಗಿರುವುದಕ್ಕೂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ ಅವರು, ಒಂದು ತಿಂಗಳೊಳಗೆ ಯೋಜನೆ ಪ್ರಾರಂಭಿಸಲು ಗಡುವು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kerala, Karnataka Bypoll & Assam, Puducherry Election 2026 Live Updates | ಬೆಳಗ್ಗೆ 11 ಗಂಟೆಯವರೆಗೆ ಅಸ್ಸಾಂನಲ್ಲಿ ಶೇ. 38.92, ಕೇರಳದಲ್ಲಿ ಶೇ. 33.28, ಪುದುಚೆರಿಯಲ್ಲಿ ಶೇ. 37.06 ಮತದಾನ

Strait of Hormuz: 'ಮುಲಾಜೇ ಇಲ್ಲ, ಅನುಮತಿ ಇಲ್ದೇ ಬಂದ್ರೆ ಹೊಡೆದುರುಳಿಸ್ತೀವಿ': Iran ಎಚ್ಚರಿಕೆ

ಲೆಬನಾನ್ ಮೇಲೆ ದಾಳಿ: ಅಮೆರಿಕಾ ವಿರುದ್ಧ ಇರಾನ್ ತೀವ್ರ ಕಿಡಿ; ಮಾತುಕತೆಗೂ ಮುನ್ನವೇ ಕದನ ವಿರಾಮ ಉಲ್ಲಂಘನೆ, ಸಂಧಾನ ಪ್ರಯತ್ನ ಅರ್ಥಹೀನ ಎಂದ ಟೆಹ್ರಾನ್

ಕದನ ವಿರಾಮ ಉಲ್ಲಂಘಿಸಿ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಪ್ರತೀಕಾರಕ್ಕೆ ಇರಾನ್ ಮುಂದು, ಹಾರ್ಮುಜ್ ಮಾರ್ಗ ಮತ್ತೆ ಬಂದ್..!

ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಹಿಜ್ಬುಲ್ಲಾ ರಾಕೆಟ್ ದಾಳಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

SCROLL FOR NEXT