ಸಚಿವ ಈಶ್ವರ್‌ ಖಂಡ್ರೆ 
ರಾಜ್ಯ

ಚಾರಣಿಗರ ಸುರಕ್ಷತೆಗೆ ಆ್ಯಪ್ ಜೊತೆಗೆ SOP ರೂಪಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಚಾರಣಿಗರಿಗೆ ಮಾರ್ಗದರ್ಶನ ಮಾಡುವ ನೇಚರ್ ಗೈಡ್‍ಗಳಿಗೆ ಕಡ್ಡಾಯವಾಗಿ ವೈರ್‍ಲೆಸ್ ಸೆಟ್ ನೀಡಬೇಕು. ಟ್ರೆಕ್ಕರ್‌ಗಳ ಸುರಕ್ಷತೆಯಲ್ಲಿ ಗೈಡ್‌ಗಳು, ಟ್ರೆಕ್ಕರ್‌ಗಳು ಮತ್ತು ಅರಣ್ಯ ಇಲಾಖೆ ಎಲ್ಲರೂ ಜವಾಬ್ದಾರರಾಗಿರಬೇಕು. ಯಾವುದೇ ಅನಾಹುತ ಸಂಭವಿಸಿದರೆ ಗೈಡ್‌ಗಳನ್ನೂ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು.

ಬೆಂಗಳೂರು: ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ತಂತ್ರಜ್ಞಾನ ಆಧಾರಿತ ಕ್ರಮಗಳನ್ನು ಜಾರಿಗೆ ತರಬೇಕೆಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆಯವರು ಗುರುವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತಡಿಯಾಂಡಮೋಲ್ ಚಾರಣದ ವೇಳೆ ಕೇರಳದ ಶರಣ್ಯ ಎಂಬ ಮಹಿಳೆ 3 ದಿನ ಕಾಡಿನಲ್ಲಿ ದಿನ ಕಳೆದಿರುವುದು ಹಾಗೂ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತದ ಬಳಿ ಬಾಲಕಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಖಂಡ್ರೆ ಈ ಲಿಖಿತ ಸೂಚನೆ ಕೊಟ್ಟಿದ್ದಾರೆ.

ಅರಣ್ಯ ಇಲಾಖೆ ಈಗಾಗಲೇ ಅಭಿವೃದ್ಧಿಪಡಿಸಿರುವ ಇ-ಗಸ್ತು, ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಬಳಕೆ ಮಾಡುವ ಆ್ಯಪ್ ಮಾದರಿಯಲ್ಲಿಯೇ ಚಾರಣ ಅವಧಿಯಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಮೊಬೈಲ್‍ನಲ್ಲಿ ಆ್ಯಪ್ ಅಳವಡಿಸಿದರೆ, ಯಾರೇ ದಾರಿ ತಪ್ಪಿಸಿಕೊಂಡರೂ ಅವರ ಶೋಧಕಾರ್ಯ ಸುಲಭವಾಗುತ್ತದೆ. ಹೀಗಾಗಿ ಆ್ಯಪ್ ಅಭಿವೃದ್ಧಿಗೆ ಕ್ರಮ ವಹಿಸುವಂತೆ ಮತ್ತು ಚಾರಣಿಗರಿಗೆ ಗುಂಪು ವಿಮೆ ಮಾಡಿಸುವಂತೆ ಸಚಿವರು ನಿರ್ದೇಶಿಸಿದ್ದಾರೆ.

ಇದರೊಂದಿಗೆ ಚಾರಣಿಗರಿಗೆ ಮಾರ್ಗದರ್ಶನ ಮಾಡುವ ನೇಚರ್ ಗೈಡ್‍ಗಳಿಗೆ ಕಡ್ಡಾಯವಾಗಿ ವೈರ್‍ಲೆಸ್ ಸೆಟ್ ನೀಡಬೇಕು. ಟ್ರೆಕ್ಕರ್‌ಗಳ ಸುರಕ್ಷತೆಯಲ್ಲಿ ಗೈಡ್‌ಗಳು, ಟ್ರೆಕ್ಕರ್‌ಗಳು ಮತ್ತು ಅರಣ್ಯ ಇಲಾಖೆ ಎಲ್ಲರೂ ಜವಾಬ್ದಾರರಾಗಿರಬೇಕು. ಯಾವುದೇ ಅನಾಹುತ ಸಂಭವಿಸಿದರೆ ಗೈಡ್‌ಗಳನ್ನೂ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂದೂ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ