ವೈರಲ್ ಆಗಿರುವ ವಿಡಿಯೋದಲ್ಲಿರುವ ವ್ಯಕ್ತಿ ಹಾಗೂ ಪೊಲೀಸ್ ಆಯುಕ್ತ 
ರಾಜ್ಯ

ಬೆಂಗಳೂರಿನಲ್ಲಿ ಝೋಂಬಿ ಡ್ರಗ್ಸ್ ಆತಂಕ: ವೈರಲ್ ವೀಡಿಯೋ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ, ಹೇಳಿದ್ದೇನು..?

ನಶೆಯಲ್ಲಿರುವ ವ್ಯಕ್ತಿಯೊಬ್ಬ ಒಂದೇ ಸ್ಥಳದಲ್ಲಿ ಗಂಟೆಗಟ್ಟಲೆ ನಿಂತಿರುವುದು, ಮೈ ಮೇಲೆ ಪ್ರಜ್ಞೆ ಇಲ್ಲದ ಸ್ಥಿಯಲ್ಲಿರುವ ವ್ಯಕ್ತಿ ಅರೆಪ್ರಜ್ಞಾ ಸ್ಥಿತಿಯಲ್ಲಿರುವ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆತಂಕ ಹುಟ್ಟಿಸಿವೆ.

ಬೆಂಗಳೂರು ನಗರದಲ್ಲಿ ‘ಝೋಂಬಿ ಡ್ರಗ್’ ಬಳಕೆ ಆರಂಭವಾಗಿದೆ ಎಂಬ ಆತಂಕ ಹುಟ್ಟಿಸುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.

ನಶೆಯಲ್ಲಿರುವ ವ್ಯಕ್ತಿಯೊಬ್ಬ ಒಂದೇ ಸ್ಥಳದಲ್ಲಿ ಗಂಟೆಗಟ್ಟಲೆ ನಿಂತಿರುವುದು, ಮೈ ಮೇಲೆ ಪ್ರಜ್ಞೆ ಇಲ್ಲದ ಸ್ಥಿಯಲ್ಲಿರುವ ವ್ಯಕ್ತಿ ಅರೆಪ್ರಜ್ಞಾ ಸ್ಥಿತಿಯಲ್ಲಿರುವ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆತಂಕ ಹುಟ್ಟಿಸಿವೆ.

ಕೆಲವರು ಇದನ್ನು ಜೈಲಜೈನ್ (xylazine) ಎಂಬ ಮದ್ದು ಹಾಗೂ ಇತರ ಡ್ರಗ್ಸ್ ಪ್ರಭಾವ ಎಂದು ಹೇಳಿ ಹಂಚಿಕೊಂಡಿದ್ದರು. ಇದರ ಪರಿಣಾಮವಾಗಿ ನಗರದಲ್ಲಿ ಹೊಸ ರೀತಿಯ ಅಪಾಯಕಾರಿ ಡ್ರಗ್ ಪ್ರವೇಶಿಸಿದೆ ಎಂಬ ವದಂತಿ ಹರಡಿತ್ತು.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಈಶಾನ್ಯ ವಿಭಾಗದ ಪೊಲೀಸರು, ತಕ್ಷಣ ತನಿಖೆ ಆರಂಭಿಸಿ, ವೀಡಿಯೋದಲ್ಲಿರುವ ವ್ಯಕ್ತಿಯನ್ನು ಪತ್ತೆ ಹಚ್ಚಿದರು.

ನಂತರ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಯಾವುದೇ ರೀತಿಯ ಮಾದಕ ಪದಾರ್ಥಗಳು ಅಥವಾ ಡ್ರಗ್ಸ್ ಅವನ ದೇಹದಲ್ಲಿ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಈ ಕುರಿತು ಸ್ಪಷ್ಟನೆ ನೀಡಿ, “ಆ ವ್ಯಕ್ತಿ ಬೆಂಗಳೂರಿನವನು ಅಲ್ಲ. ಹೊರ ರಾಜ್ಯದಿಂದ ಬಂದಿದ್ದ ಆತ ಕೆಲವು ಆರೋಗ್ಯ ಸಮಸ್ಯೆಗಳಿಗಾಗಿ ಔಷಧಿಗಳನ್ನು ಸೇವಿಸಿದ್ದ. ಅದರ ಜೊತೆಗೆ ಸ್ವಲ್ಪ ಪ್ರಮಾಣದ ಮದ್ಯ ಸೇವಿಸಿದ್ದರಿಂದ ದೇಹದ ಸಮತೋಲನ ಕಳೆದುಕೊಂಡು ವಿಚಿತ್ರವಾಗಿ ವರ್ತಿಸಿದ್ದಾನೆ. ಇದಕ್ಕೆ ಡ್ರಗ್ಸ್‌ಗೆ ಯಾವುದೇ ಸಂಬಂಧ ಇಲ್ಲ,” ಎಂದು ಹೇಳಿದ್ದಾರೆ.

ಇದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಪರಿಶೀಲಿಸದೇ ಇಂತಹ ವೀಡಿಯೋಗಳನ್ನು ಹಂಚುವುದು ಗಂಭೀರ ಪರಿಣಾಮ ಉಂಟುಮಾಡುತ್ತದೆ. “ಯಾವುದೇ ವೀಡಿಯೋವನ್ನು ಅಪ್ಲೋಡ್ ಮಾಡುವ ಮೊದಲು ಅದರ ನೈಜತೆಯನ್ನು ಖಚಿತಪಡಿಸಿಕೊಳ್ಳಬೇಕು. ಇನ್ನು ಮುಂದೆ ತಪ್ಪು ಮಾಹಿತಿಯನ್ನು ಹರಡುವವರು ಮಾತ್ರವಲ್ಲ, ಅದನ್ನು ಹಂಚುವವರ ಮೇಲೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ವೀಡಿಯೋವನ್ನು ಮೊದಲು ಚಿತ್ರೀಕರಿಸಿ ಹಂಚಿದ ವ್ಯಕ್ತಿಯನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದ್ದು, ಸಂಬಂಧಿಸಿದವರಿಗೂ ನೋಟಿಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಶಾಂತಿ ಪ್ರಯತ್ನ: ಕದನ ವಿರಾಮವಿಲ್ಲದೆ ಮಾತುಕತೆ ಸಾಧ್ಯವಿಲ್ಲ; ಹಿಜ್ಬುಲ್ಲಾ ಷರತ್ತು, ಉದ್ವಿಗ್ನತೆ ಮುಂದುವರಿಕೆ ಸಾಧ್ಯತೆ

ಆಗ ಮಂಡ್ಯ, ಈಗ ತಮಿಳುನಾಡು: 3 ವಿಜಯ್, 2 ಜೊಸೆಫ್.. ಒಂದೇ ಹೆಸರಿನ ಅಭ್ಯರ್ಥಿಗಳ ಪಟ್ಟಿ, ನಟ Vijay ಹಣಿಯಲು ಏನೆಲ್ಲಾ ಕಸರತ್ತು!

‘ಮಾನವಕುಲಕ್ಕೆ ಶಾಪ’ ನೀವು, ನರಕದಲ್ಲಿ ಬೆಂದು ಹೋಗಿ; ಇಸ್ರೇಲ್'ಗೆ ಪಾಕ್ ಶಾಪ, ಶಾಂತಿ ಮಾತುಕತೆ ಮಧ್ಯಸ್ಥಿಕೆ ನಡುವೆಯೇ ಶಾಕಿಂಗ್ ಹೇಳಿಕೆ..!

ತಮಿಳುನಾಡಿನಲ್ಲಿ ದ್ರಾವಿಡ ಪಕ್ಷಗಳ ನೇರ ಸೆಣಸಾಟ ಮುಂದುವರಿಯಲಿದೆಯೇ? ತೃತೀಯ ಶಕ್ತಿ ಉದಯಿಸುತ್ತದೆಯೇ? (ನೇರ ನೋಟ)

ಹಾರ್ಮುಜ್ ಟ್ಯಾಂಕರ್ ಶುಲ್ಕ ವಿವಾದ: ಕೂಡಲೇ ನಿಲ್ಲಿಸಿ...; ಇರಾನ್ ವಿರುದ್ಧ ಗುಡುಗಿದ ಟ್ರಂಪ್, ಕಠಿಣ ಎಚ್ಚರಿಕೆ

SCROLL FOR NEXT