ಫೈರೋಜ್‌ ಪಠಾಣ್‌ 
ರಾಜ್ಯ

ಧಾರವಾಡ: ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಹತ್ಯೆ; ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರ ಕೊಲೆ

​ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ನಿನ್ನೆ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ಧಾರವಾಡ: ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ದಿಗ್ಭ್ರಮೆಗೊಂಡಿದ್ದಾರೆ.

​ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ನಿನ್ನೆ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ಕೂಡಲೇ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.

​ಹತ್ಯೆಗೀಡಾದ ಫೈರೋಜ್‌ ಪಠಾಣ್‌ ಅವರು ಧಾರವಾಡದ ಮುಂಚೂಣಿಯ ಯುವ ನಾಯಕರಾಗಿದ್ದರು. ಆರಂಭದಲ್ಲಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಪ್ರಸ್ತುತ ಯುವ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.

ವೈಯಕ್ತಿಕ ದ್ವೇಷ, ರಾಜಕೀಯ ವೈರತ್ವ ಮತ್ತು ಇತರ ವಿವಾದಗಳು ಸೇರಿದಂತೆ ಎಲ್ಲಾ ಕೋನಗಳಿಂದ ಪರಿಶೀಲಿಸುತ್ತಿದ್ದಾರೆ , ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

ನಮ್ಮ ನೌಕೆಗಳನ್ನು ಅತ್ಯುತ್ತಮ ಶಸ್ತ್ರಾಸ್ತ್ರಗಳಿಂದ ತುಂಬುತ್ತಿದ್ದೇವೆ; ಇರಾನ್ ಬಗ್ಗದೇ ಹೋದಲ್ಲಿ ಸರ್ವನಾಶ- ಮಾತುಕತೆಗೂ ಮುನ್ನ ಟ್ರಂಪ್ ಬೆದರಿಕೆ!

SCROLL FOR NEXT