ಫೈರೋಜ್‌ ಪಠಾಣ್‌ 
ರಾಜ್ಯ

ಧಾರವಾಡ: ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಹತ್ಯೆ; ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರ ಕೊಲೆ

​ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ನಿನ್ನೆ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ಧಾರವಾಡ: ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಧಾರವಾಡದ ಮೆಹಬೂಬ್ ನಗರದ ನಿವಾಸಿಯಾಗಿರುವ ಮೃತ ವ್ಯಕ್ತಿಯನ್ನು 28 ವರ್ಷದ ಫೈರೋಜ್ ಖಾನ್ ಪಠಾಣ್ ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ಅವರ ಮನೆಗೆ ನುಗ್ಗಿ ಅಪರಿಚಿತ ದುಷ್ಕರ್ಮಿಗಳು, ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ನಾಲ್ಕರಿಂದ ಐದು ಜನರ ಗುಂಪೊಂದು ಅವರ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಅವರು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಸಮಯದಲ್ಲಿ ಮನೆಯಲ್ಲಿ ಯಾವುದೇ ಕುಟುಂಬ ಸದಸ್ಯರು ಇರಲಿಲ್ಲ.

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೊಲೆ ಪ್ರಕರಣ ದಾಖಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

"ನಿನ್ನೆ ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಫೈರೋಜ್ ಪಠಾಣ್ ಎಂಬ ವ್ಯಕ್ತಿಯ ಮೇಲೆ ನಾಲ್ಕರಿಂದ ಐದು ಜನರ ಗುಂಪು ಅವರ ನಿವಾಸದಲ್ಲಿ ಹಲ್ಲೆ ನಡೆಸಿದೆ. ಈ ಘಟನೆಯಲ್ಲಿ ಅವರು ಗಾಯಗೊಂಡು ಸಾವನ್ನಪ್ಪಿದ್ದಾರೆ" ಎಂದು ಅವರು ANI ಗೆ ತಿಳಿಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.

"ಶವವನ್ನು ಹುಬ್ಬಳ್ಳಿಯ KIMS ನಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇಡಲಾಗಿದೆ. ಅಪರಾಧದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ನಾವು ಶೀಘ್ರವಾಗಿ ಬಂಧಿಸುತ್ತೇವೆ" ಎಂದು ಅವರು ಹೇಳಿದರು.

ಕೊಲೆಯ ಹಿಂದಿನ ಉದ್ದೇಶದ ಬಗ್ಗೆ ಇನ್ನೂ ದೃಢಪಟ್ಟಿಲ್ಲ ಎಂದು ಆಯುಕ್ತರು ಹೇಳಿದರು.

ಪೊಲೀಸರು ತನಿಖೆ ಆರಂಭಿಸಿದ್ದು, ಹಲ್ಲೆಕೋರರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT