ಸಿದ್ದರಾಮಯ್ಯ 
ರಾಜ್ಯ

ದೆಹಲಿಗೆ 'ಕೈ' ಶಾಸಕರು ದೌಡು: ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು- ಸಿಎಂ ಸಿದ್ದರಾಮಯ್ಯ

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಿಕ್ಕಮಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ ಅವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ ಎಂದರು.

ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ಕಾರ್ಯ ಬಾಕಿಯಿದೆ. ಐದು ರಾಜ್ಯಗಳ ಚುನಾವಣೆ, ಬಜೆಟ್ ಅಧಿವೇಶನ ಸಂಪುಟ ಪುನರ್ರಚನೆ ವಿಳಂಬಕ್ಕೆ ಕಾರಣವಿರಬಹುದುಎಂದರು.

ಅರಣ್ಯ ಹಕ್ಕುಪತ್ರಕ್ಕೆ ಸಭೆ

ಮಲೆನಾಡಿನಲ್ಲಿ ರೆಸಾರ್ಟ್ ಗಳಿಗೆ ಬೇಕಾಬಿಟ್ಟಿಯಾಗಿ ಅನುಮತಿ ನೀಡುತ್ತಿರುವ ಸರ್ಕಾರ, ಅರಣ್ಯವಾಸಿಗಳಿಗೆ ಹಕ್ಕು ಪತ್ರ ನೀಡುತ್ತಿಲ್ಲ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅರಣ್ಯ ಇಲಾಖೆಯಿಂದ ಹಕ್ಕು ಪತ್ರ ನೀಡುವುದೂ ಸೇರಿದಂತೆ ಹಲವು ವಿಷಯದ ಬಗ್ಗೆ ಸಧ್ಯದಲ್ಲಿಯೇ ಸಭೆ ನಡೆಸಲಾಗುವುದು ಎಂದರು.

ಪ್ರವಾಸಿಗರಿಗೆ ಕರ್ನಾಟಕ ಸುರಕ್ಷಿತ

ಪ್ರವಾಸಿಗರಿಗೆ ಕರ್ನಾಟಕ ಸುರಕ್ಷಿತ ತಾಣವಲ್ಲ ಎಂದು ಕೇರಳದಿಂದ ಟೀಕೆಗಳು ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇರಳ ರಾಜ್ಯದ ಬಾಲಕಿ ಚಿಕ್ಕಮಗಳೂರಿಗೆ ಬಂದು ಮೃತಪಟ್ಟಿರುವ ವಿಷಯ ತನಿಖೆಯಾಗಲಿದೆ. ಆದರೆ ಕರ್ನಾಟಕ ರಾಜ್ಯ ಪ್ರವಾಸಿಗರಿಗೆ ಸುರಕ್ಷಿತವಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರದ ಭರವಸೆಗೆ ಮಣಿದ Sonam Wangchuk: 26 ದಿನಗಳ ಉಪವಾಸ ಅಂತ್ಯ, Dharmendra Pradhan ರಾಜೀನಾಮೆ ನೀಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದ CJP..!

NEET Paper Leak: ವಿದ್ಯಾರ್ಥಿಗಳ ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರದಿಂದ ಮೊದಲ ಕ್ರಮ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ

CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು': ಕೊನೆಗೂ ಮೌನ ಮುರಿದ Sachin Tendulkar

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು