ರಾಜ್ಯ

ಚಿಕ್ಕಮಗಳೂರು: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಅವಘಡ; ಬಾಲಕಿ ಸಾವು, 9 ಮಂದಿಗೆ ಗಾಯ

ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ.

ಚಿಕ್ಕಮಗಳೂರು: ಮಲೆನಾಡು ಜಿಲ್ಲೆ ಚಿಕ್ಕಮಗಳೂರಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ಸಂಭ್ರಮದ ನಡುವೆ ನಿನ್ನೆ ಸಾಯಂಕಾಲ ವೇಗವಾಗಿ ಬಂದ ಕಾರೊಂದು ಮೆರವಣಿಗೆಯಲ್ಲಿದ್ದ ಜನರ ಮೇಲೆ ಹರಿದ ಪರಿಣಾಮ 7 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿು ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಇಂದಾವರ ಗ್ರಾಮದಿಂದ ಬಿಳೆಕಲ್ಲು ಗ್ರಾಮದ ತನ್ನ ತಂಗಿ ಮನೆಗೆ ಹೋಗಿದ್ದ 7 ವರ್ಷದ ಬಾಲಕಿ ಸಾನ್ವಿ ಕಾರು ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಅಪಘಾತದಲ್ಲಿ ನಿಶ್ಚಿತ (11ವ), ತೃಪ್ತಿ (11ವ), ತಿಮ್ಮರಾಜು (45ವ), ಉಷಾ (22ವ), ಸೃಷ್ಟಿ (18ವ), ನಾಗರಾಜು (28ವ), ಚೇತನ್ (16ವ) ಸೇರಿದಂತೆ ಒಟ್ಟು 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನಲ್ಲಿದ್ದ ಸುಧಾಕರ್ ಎಂಬುವವರಿಗೂ ಗಾಯಗಳಾಗಿದ್ದು, ಅವರ ಸ್ಥಿತಿಯೂ ಗಂಭೀರವಾಗಿದೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

SCROLL FOR NEXT