ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಸೆಕ್ಸ್ ದಂಧೆ: ಹಲವು ಕಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ; ನಾಲ್ವರ ಬಂಧನ, ನಾಲ್ವರ ರಕ್ಷಣೆ

ಮನುವನ, ವಿಜಯನಗರ, ರಾಮಸ್ವಾಮಿಪಾಳ್ಯ, ಬಾಣಸವಾಡಿ, ಅಂದ್ರಹಳ್ಳಿ, ವೀರಭದ್ರೇಶ್ವರನಗರ ಮತ್ತು ಬ್ಯಾಡರಹಳ್ಳಿಯಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು, ಅಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.

ಬೆಂಗಳೂರು: ರಾಜಧಾನಿ ಬೆಂಗಳೂರಿನಾದ್ಯಂತ ಹಲವು ಕಡೆ ಬಾಡಿಗೆ ಮನೆಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಮಹಿಳೆಯರನ್ನು ಬಂಧಿಸಿದ್ದಾರೆ ಮತ್ತು ಇತರ ರಾಜ್ಯಗಳ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ವಿವಿಧ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆಗಳ ಬಗ್ಗೆ ಹಲವು ದಿನಗಳಿಂದ ಸಂಗ್ರಹಿಸಿದ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ದಳ ಈ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಮನುವನ, ವಿಜಯನಗರ, ರಾಮಸ್ವಾಮಿಪಾಳ್ಯ, ಬಾಣಸವಾಡಿ, ಅಂದ್ರಹಳ್ಳಿ, ವೀರಭದ್ರೇಶ್ವರ ನಗರ ಮತ್ತು ಬ್ಯಾಡರಹಳ್ಳಿಯಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು, ಅಲ್ಲಿ ಮಹಿಳೆಯರನ್ನು ಇಟ್ಟು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.

ನಿರ್ದಿಷ್ಟ ಮಾಹಿತಿಯ ಮೇರೆಗೆ, ಈ ಸ್ಥಳಗಳಲ್ಲಿ ಸಂಘಟಿತ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯ ಸಮಯದಲ್ಲಿ, ವೇಶ್ಯಾವಾಟಿಕೆಗೆ ಬಲವಂತವಾಗಿ ತಳ್ಳಲ್ಪಟ್ಟ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ.

ಸೆಕ್ಸ್ ದಂಧೆಯನ್ನು ನಡೆಸುತ್ತಿದ್ದ ಆರೋಪ ಮೇಲೆ ನಾಲ್ವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಆರೋಪಿಗಳು ಗ್ರಾಹಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ಏರ್ಪಡಿಸಿ ಹೆಚ್ಚಿನ ಹಣ ಗಳಿಸಲು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ವಿಜಯನಗರ, ಬಾಣಸವಾಡಿ ಮತ್ತು ಬ್ಯಾಡರಹಳ್ಳಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆ ವಿರೋಧಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ: ವಿಪಕ್ಷಗಳಿಗೆ ಪ್ರಧಾನಿ ಮೋದಿ ವಾರ್ನಿಂಗ್! Video

ಹೊಸ ಇತಿಹಾಸ ಸೃಷ್ಟಿಸಿದ ಬಾಬರ್ ಅಜಮ್; ಕೊಹ್ಲಿ ದಾಖಲೆ ಉಡೀಸ್: ಪಾಕಿಸ್ತಾನದ ನಂ.1, ಏಷ್ಯಾದ ನಂ.2, ವಿಶ್ವದ ನಂ.3!

ಕಾಂಗ್ರೆಸ್ ಅವಧಿಯಲ್ಲಿ ಆಂಧ್ರ ವಿಭಜನೆ ಭಾರತ-ಪಾಕ್ ವಿಭಜನೆಗಿಂತ ಕೆಟ್ಟದಾಗಿತ್ತು- ತೇಜಸ್ವಿ ಸೂರ್ಯ ವಾಗ್ದಾಳಿ; ತೆಲಂಗಾಣ ರಾಜಕಾರಣಿಗಳಿಂದ ಟೀಕೆ

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ: ಹರಿಯಾಣದ 5 ​​ಶಾಸಕರನ್ನು ಅಮಾನತುಗೊಳಿಸಿದ ಕಾಂಗ್ರೆಸ್

ಮಹಿಳೆ ಮೇಲೆ ಅತ್ಯಾಚಾರ: ಬಿಜೆಪಿ ಕೌನ್ಸಿಲರ್ ಮಗನ ವಿರುದ್ಧ ಕೇಸ್ ದಾಖಲು; ಆರೋಪಿ ಪರಾರಿ

SCROLL FOR NEXT