ಅನಂತಕುಮಾರ್ ಹೆಗಡೆ 
ರಾಜ್ಯ

ಹಲ್ಲೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಪುತ್ರ ಅಶುತೋಷ್‌ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ದಾಬಸ್​ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಬೆಂಗಳೂರು: ದಾಬಸ್​ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಸ್ಲಿಂ ಕುಟುಂಬದೊಂದಿಗಿನ ಗಲಾಟೆ ಪ್ರಕರಣದಲ್ಲಿ ಅಶುತೋಷ್‌ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ಇಂದು ತಡೆ ನೀಡಿದೆ.

ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಅನಂತಕುಮಾರ್ ಹೆಗಡೆ ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ ನೀಡಿ ಇಂದು ಆದೇಶ ಹೊರಡಿಸಿದೆ. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್​ನಲ್ಲಿ ಅಶುತೋಷ್​ ಹೆಸರಿಲ್ಲದಿದ್ದರೂ ದೋಷಾರೋಪಪಟ್ಟಿಯಲ್ಲಿ ಸೇರಿಸಲಾಗಿದೆ. ಘಟನೆಯಲ್ಲಿ ಅಶುತೋಷ್ ಪಾತ್ರವಿಲ್ಲ ಎಂದು ವಕೀಲ ಪವನ್ ಚಂದ್ರ ಶೆಟ್ಟಿ ವಾದ ಮಂಡಿಸಿದರು.

2025ರ ಜೂನ್​​ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪ ಕೇಳಿಬಂದಿತ್ತು. ಅನಂತ್‌ ಕುಮಾರ್‌ ಹೆಗಡೆ ಅವರು ತೆರಳುತ್ತಿದ್ದ ಕಾರನ್ನು, ಓವರ್​ ಟೇಕ್​ ಮಾಡಲಾಯಿತು ಎಂಬ ಕಾರಣಕ್ಕೆ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ, ಅನಂತ್ ಕುಮಾರ್​ ಹೆಗಡೆ ಪುತ್ರ ಅಶುತೋಷ್, ಚಾಲಕ ಹಾಗೂ ಗನ್​​ಮ್ಯಾನ್​ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇನ್ನೋವಾ ಕಾರಿನಲ್ಲಿ ಸಲ್ಮಾನ್, ಸೈಫ್‌, ಇಲಿಯಾಜ್ ಖಾನ್‌ ಹಾಗೂ ಉನ್ನೀಸಾ ಎಂಬವರ ಮೇಲೆ ಹಲ್ಲೆ ಆರೋಪ ಕೇಳಿಬಂದಿತ್ತು. ಬಳಿಕ ಹಲ್ಲೆಗೊಳಗಾಗಿದ್ದ ಸೈಫ್ ನೀಡಿದ ದೂರಿನ ಮೇರೆಗೆ ದಾಬಸ್​​ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಅನಂತಕುಮಾರ್ ಹೆಗಡೆ A1, ಗನ್‌ಮ್ಯಾನ್ ಶ್ರೀಧರ್‌ A2, ಕಾರು ಚಾಲಕ ಮಹೇಶ್‌ A3 ಮತ್ತು ಇತರರ ವಿರುದ್ಧ ಬಿಎನ್​ಎಸ್ ಕಾಯ್ದೆಯ 6 ಸೆಕ್ಷನ್‌ಗಳಡಿ ಎಫ್​ಐಆರ್ ದಾಖಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಅವಧಿಯಲ್ಲಿ ಆಂಧ್ರ ವಿಭಜನೆ ಭಾರತ-ಪಾಕ್ ವಿಭಜನೆಗಿಂತ ಕೆಟ್ಟದಾಗಿತ್ತು- ತೇಜಸ್ವಿ ಸೂರ್ಯ ವಾಗ್ದಾಳಿ; ತೆಲಂಗಾಣ ರಾಜಕಾರಣಿಗಳಿಂದ ಟೀಕೆ

ಮಹಿಳಾ ಮೀಸಲಾತಿ ಮಸೂದೆ ವಿರೋಧಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ: ವಿಪಕ್ಷಗಳಿಗೆ ಪ್ರಧಾನಿ ಮೋದಿ ವಾರ್ನಿಂಗ್! Video

ಹೊಸ ಇತಿಹಾಸ ಸೃಷ್ಟಿಸಿದ ಬಾಬರ್ ಅಜಮ್; ಕೊಹ್ಲಿ ದಾಖಲೆ ಉಡೀಸ್: ಪಾಕಿಸ್ತಾನದ ನಂ.1, ಏಷ್ಯಾದ ನಂ.2, ವಿಶ್ವದ ನಂ.3!

Gold Smuggling Case: ನಟಿ ರನ್ಯಾ ರಾವ್​​ಗೆ ಬಿಗ್ ಶಾಕ್​; ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ: ಹರಿಯಾಣದ 5 ​​ಶಾಸಕರನ್ನು ಅಮಾನತುಗೊಳಿಸಿದ ಕಾಂಗ್ರೆಸ್

SCROLL FOR NEXT