ಕರ್ನಾಟಕ ಸಚಿವ ಸಂಪುಟ ಸಭೆ (ಸಂಗ್ರಹ ಚಿತ್ರ) 
ರಾಜ್ಯ

SC ಒಳಮೀಸಲಾತಿ: CS ನೇತೃತ್ವದ ತಾಂತ್ರಿಕ ಸಮಿತಿ ರಚನೆ, ಏಪ್ರಿಲ್ 24ಕ್ಕೆ ವಿಶೇಷ ಸಂಪುಟ ಸಭೆ

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಲು ತೀರ್ಮಾನಿಸಲಾಗಿದ್ದು, ಸಮಿತಿ ವರದಿ ಮೇಲೆ ಏ.24ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ತೀರ್ಮಾನಕ್ಕೆ ಬರಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ತೀರ್ಮಾನಿಸಿದ್ದು, ಏಪ್ರಿಲ್ 24ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಿದೆ.

ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಸ್​​ಸಿ ಒಳಮೀಸಲಾತಿ ಸಂಬಂಧ ಚರ್ಚೆ ನಡೆಯಿತು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಲು ತೀರ್ಮಾನಿಸಲಾಗಿದ್ದು, ಸಮಿತಿ ವರದಿ ಮೇಲೆ ಏ.24ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ತೀರ್ಮಾನಕ್ಕೆ ಬರಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ತಾಂತ್ರಿಕ ಸಮಿತಿಯಲ್ಲಿ ಕಾನೂನು ಮತ್ತು ಸಂಸದೀಯ ಇಲಾಖೆ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಇರಲಿದ್ದಾರೆ. ಈ ಸಮಿತಿ ಒಳಮೀಸಲಾತಿ ಸಮೀಕರಣದ ಬಗ್ಗೆ ಪರಿಶೀಲಿಸಿ ವರದಿ ನೀಡಲಿದೆ. ಈ ವರದಿಯನ್ನು ಏಪ್ರಿಲ್ 24ರಂದು ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು. ಅಂದು ಒಳಮೀಸಲಾತಿ ಬಗ್ಗೆಯೇ ಬಹುತೇಕ ಚರ್ಚೆ ನಡೆಯಲಿದೆ. ಅಲ್ಲದೆ, ಎಸ್​​ಸಿ ಎ, ಬಿ ಮತ್ತು ಸಿ ಮೂರು ವರ್ಗಗಳಿಗೆ ಎಷ್ಟು ಒಳಮೀಸಲಾತಿ ನೀಡಬೇಕು ಎಂದು ತೀರ್ಮಾನಕ್ಕೆ ಬರಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET Paper Leak: ವಿದ್ಯಾರ್ಥಿಗಳ ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರದಿಂದ ಮೊದಲ ಕ್ರಮ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ

CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು': ಕೊನೆಗೂ ಮೌನ ಮುರಿದ Sachin Tendulkar

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ