ಮೈಸೂರಿನಲ್ಲಿ ಮನೆಗೇ ನುಗ್ಗಿದ ಚಿರತೆ 
ರಾಜ್ಯ

Mysuru: ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತಿದ್ದ ಚಿರತೆ, ವೃದ್ಧ ತಾಯಿಯ ಹೊರಗೆಳೆದ ಮಗಳು, ಕಾರ್ಯಾಚರಣೆಯೇ ರೋಚಕ!

ಸುಮಾರು ಮೂರರಿಂದ ನಾಲ್ಕು ವರ್ಷ ವಯಸ್ಸಿನ ಚಿರತೆಯೊಂದು ಸ್ಥಳೀಯ ನಿವಾಸಿ ಸುರೇಶ್ ಎಂಬುವವರ ಮನೆಗೆ ನುಗ್ಗಿದೆ. ಮನೆಯಲ್ಲಿನ ಒಂದು ಕೋಣೆಯಲ್ಲಿ ಮಂಚದ ಕೆಳಗೆ ನುಗ್ಗಿದ್ದ ಚಿರತೆ ಅಲ್ಲಿಯೇ ವಿಶ್ರಾಂತಿ ಪಡೆದಿದೆ.

ಮೈಸೂರು: ಶುಕ್ರವಾರ ಮೈಸೂರಿನಲ್ಲಿ ಮನೆಯೊಂದಕ್ಕೆ ಗಂಡು ಚಿರತೆಯೊಂದು ನುಗ್ಗಿದ್ದು, ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು ನಗರದ ಸಿದ್ಧಾರ್ಥ ಲೇಔಟ್‌ನಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಸುಮಾರು ಮೂರರಿಂದ ನಾಲ್ಕು ವರ್ಷ ವಯಸ್ಸಿನ ಚಿರತೆಯೊಂದು ಸ್ಥಳೀಯ ನಿವಾಸಿ ಸುರೇಶ್ ಎಂಬುವವರ ಮನೆಗೆ ನುಗ್ಗಿದೆ. ಮನೆಯಲ್ಲಿನ ಒಂದು ಕೋಣೆಯಲ್ಲಿ ಮಂಚದ ಕೆಳಗೆ ನುಗ್ಗಿದ್ದ ಚಿರತೆ ಅಲ್ಲಿಯೇ ವಿಶ್ರಾಂತಿ ಪಡೆದಿದೆ.

ವಿಚಾರ ತಿಳಿದ ಕೂಡಲೆ ಮನೆಯವರು ಹೊರಗೆ ಓಡಿ ಬಂದು ಮನೆ ಬಾಗಿಲು ಹಾಕಿದ್ದಾರೆ. ಬಳಿಕ ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಧಾವಿಸಿದ ಪಶುವೈದ್ಯರು ಚಿರತೆಗೆ ಅರವಳಿಗೆ ಚುಚ್ಚು ಮದ್ದು ನೀಡಿ ಅದನ್ನು ಸೆರೆ ಹಿಡಿದಿದ್ದಾರೆ. ನಂತರ ಅದನ್ನು ಸುರಕ್ಷಿತವಾಗಿ ಮೈಸೂರು ಮೃಗಾಲಯಕ್ಕೆ ಸ್ಥಳಾಂತರಿಸಲಾಯಿತು ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿಗಳು ಹೇಳಿರುವಂತೆ ಚಾಮುಂಡಿ ಬೆಟ್ಟ ಅಥವಾ ಹತ್ತಿರದ ಅರಣ್ಯ ಪ್ರದೇಶಗಳಿಂದ ಚಿರತೆ ದಾರಿ ತಪ್ಪಿ ಬಂದಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ವೃದ್ಧ ಅಮ್ಮನ ಹೊರಗೆಳೆದು, ಕೋಣೆಯೊಳಗೆ ಕೂಡಿಹಾಕಿದ ಮಗಳು!

ಮನೆಯ ಮುಂಭಾಗದ ಬಾಗಿಲು ತೆರೆದಿದ್ದನ್ನು ಕಂಡ ಚಿರತೆ, ಯಾರಿಗೂ ತಿಳಿಯದಂತೆ ನೇರವಾಗಿ ಒಳಗಿನ ಕೊಠಡಿಯೊಂದಕ್ಕೆ ನುಗ್ಗಿದೆ. ಈ ಸಮಯದಲ್ಲಿ ಮನೆಯಲ್ಲಿ ಸುರೇಶ್ ಅವರ ಪತ್ನಿ ಸುಜಾತ ಮತ್ತು ಅವರ ತಾಯಿ ಶೈಲಜಾ ಮಾತ್ರ ಇದ್ದರು. ಚಿರತೆ ನೇರವಾಗಿ ಅಜ್ಜಿ ಶೈಲಜಾ ಅವರು ಇದ್ದ ಕೊಠಡಿಯೊಳಗೆ ನುಗ್ಗಿದೆ. ಕಣ್ಣೆದುರೇ ಕಾಡುಪ್ರಾಣಿಯನ್ನು ಕಂಡ ಶೈಲಜಾ ಆಘಾತಕ್ಕೊಳಗಾಗಿದ್ದಾರೆ.

ಆದರೆ, ತಕ್ಷಣವೇ ಕಾರ್ಯಪ್ರವೃತ್ತರಾದ ಸುರೇಶ್ ಅವರ ಪತ್ನಿ ಸುಜಾತ, ಪ್ರಾಣದ ಹಂಗು ತೊರೆದು ಅದ್ಭುತ ಧೈರ್ಯ ತೋರಿದ್ದಾರೆ. ಚಿರತೆ ದಾಳಿ ಮಾಡುವ ಮೊದಲೇ ತನ್ನ ತಾಯಿಯನ್ನು ಚಾಣಾಕ್ಷತನದಿಂದ ಕೊಠಡಿಯಿಂದ ಹೊರಕ್ಕೆ ಎಳೆದು ತಂದು, ಹೊರಗಿನಿಂದ ಕೊಠಡಿಯ ಬಾಗಿಲನ್ನು ಲಾಕ್ ಮಾಡಿದ್ದಾರೆ.

ಕೆಲಕಾಲ ಆತಂಕ

ನಗರದ ಮಧ್ಯಭಾಗದಲ್ಲಿರುವ ಸಿದ್ದಾರ್ಥ ಬಡಾವಣೆಯೊಳಗೆ ಚಿರತೆ ಬಂದಿರುವುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿತ್ತು. ಸುದ್ದಿ ಹರಡುತ್ತಿದ್ದಂತೆ ನೂರಾರು ಜನರು ಸುರೇಶ್ ಅವರ ಮನೆಯ ಬಳಿ ಜಮಾಯಿಸಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಮೈಸೂರು ನಗರದ ಸುತ್ತಮುತ್ತಲಿನ ಬೆಟ್ಟ ಮತ್ತು ಪೊದೆಗಳಿಂದ ಚಿರತೆಗಳು ನಗರಕ್ಕೆ ಲಗ್ಗೆ ಇಡುತ್ತಿರುವುದು ಈಗ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಮ್ಮನನ್ನು ರಕ್ಷಿಸಿದ ಸುಜಾತ ಅವರ ಸಾಹಸಕ್ಕೆ ಈಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Women's Reservation Bill: ಮಹಿಳೆಯರ ಕೋಪ ತಟ್ಟದೇ ಬಿಡಲ್ಲ..; ವಿಪಕ್ಷಗಳ ವಿರುದ್ಧ Amit Shah ಕೆಂಡಾಮಂಡಲ!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು; ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ NDA ವಿಫಲ

ಇರಾನ್ ಮಹತ್ವದ ನಿರ್ಧಾರ: ಹಾರ್ಮುಜ್ ಜಲಸಂಧಿ ನಿರ್ಬಂಧ ಸಂಪೂರ್ಣ ತೆರವು; ವಿದೇಶಾಂಗ ಸಚಿವರ ಘೋಷಣೆ!

ಅದು ಅವರ ಸೀಟ್ ಅಲ್ಲ.. ಮುಸ್ಲಿಮರಿಗೆ ಕಾಂಗ್ರೆಸ್ ಮಾಡಿದಷ್ಟು ಸಹಾಯ ಯಾರೂ ಮಾಡಿಲ್ಲ: ಡಿಸಿಎಂ DK Shivakumar

RCB ವಿರುದ್ಧದ ಪಂದ್ಯದ ವೇಳೆ ಮೊಬೈಲ್ ನೋಡಿದ ರೋಮಿ ಭಿಂದರ್​ಗೆ 1 ಲಕ್ಷ ರೂ. ದಂಡ; ವೈಭವ್ ಸೂರ್ಯವಂಶಿ ಜಸ್ಟ್‌ ಮಿಸ್‌!

SCROLL FOR NEXT