ಸಂಗ್ರಹ ಚಿತ್ರ 
ರಾಜ್ಯ

ಪ್ರೀತಿ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಗೆ ವಂಚನೆ, ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1.25 ರೂ ಲಕ್ಷ ದಂಡ..!

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (ವಿಶೇಷ ಪೋಕ್ಸೋ) ನ್ಯಾಯಾಧೀಶ ಮೊಹಮ್ಮದ್ ಮುಜೀರ್ ಉಲ್ಲಾ ಸಿಜಿ ಅವರು ಬುಧವಾರ ತೀರ್ಪು ಪ್ರಕಟಿಸಿ, ನಾಗೇಶ್ ಅವರಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದರು.

ಕಲಬುರಗಿ: ಕಲಬುರಗಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ವಿಶೇಷ ಪೊಕ್ಸೋ) ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ನಾಗೇಶ್ ಎಂಬ ಆರೋಪಿ ಅಪ್ರಾಪ್ತೆಯೊಂದಿಗೆ ಪ್ರೀತಿ ಹೆಸರಿನಲ್ಲಿ ಪರಿಚಯ ಬೆಳೆಸಿ, ಮದುವೆಯಾಗುವ ಭರವಸೆ ನೀಡಿದ್ದಾನೆ. ಬಳಿಕ ಬಾಲಕಿಯನ್ನು ತನ್ನೊಂದಿಗೆ ಬೆಂಗಳೂರಿಗೆ ಕರೆತಂದು, 56 ದಿನಗಳ ಕಾಲ ತನ್ನ ವಶದಲ್ಲಿಟ್ಟುಕೊಂಡಿದ್ದಾನೆ. ಈ ಅವಧಿಯಲ್ಲಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

ಅಪ್ರಾಪ್ತೆಯು ಕೊನೆಗೆ ಆರೋಪಿಯಿಂದ ತಪ್ಪಿಸಿಕೊಂಡು ತನ್ನ ಗ್ರಾಮಕ್ಕೆ ಮರಳಿ, ಪೋಷಕರಿಗೆ ನಡೆದ ಘಟನೆ ವಿವರಿಸಿದ್ದಾಳೆ. ಈ ಮಾಹಿತಿ ಆಧರಿಸಿ ಕುಟುಂಬದವರು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ತನಿಖೆ ವೇಳೆ ಅಧಿಕಾರಿಗಳು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಪೊಕ್ಸೋ ಕಾಯ್ದೆಯಡಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದರು.

ಪ್ರಾಸಿಕ್ಯೂಷನ್ ಪರ ವಕೀಲರು ನ್ಯಾಯಾಲಯದಲ್ಲಿ ಬಲವಾದ ವಾದ ಮಂಡಿಸಿ, ಆರೋಪಿಯ ವಿರುದ್ಧದ ಎಲ್ಲಾ ಆರೋಪಗಳನ್ನು ಸಾಬೀತುಪಡಿಸಲು ಸಾಕ್ಷ್ಯಗಳನ್ನು ಒದಗಿಸಿದರು.

ಅಪ್ರಾಪ್ತೆಯ ಹೇಳಿಕೆ, ವೈದ್ಯಕೀಯ ವರದಿ ಹಾಗೂ ಇತರೆ ಸಾಕ್ಷ್ಯಾಧಾರಗಳು ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದವು.

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (ವಿಶೇಷ ಪೋಕ್ಸೋ) ನ್ಯಾಯಾಧೀಶ ಮೊಹಮ್ಮದ್ ಮುಜೀರ್ ಉಲ್ಲಾ ಸಿಜಿ ಅವರು ಬುಧವಾರ ತೀರ್ಪು ಪ್ರಕಟಿಸಿ, ನಾಗೇಶ್ ಅವರಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದರು.

ಇದಲ್ಲದೆ, ಪೀಡಿತ ಬಾಲಕಿಗೆ 3 ಲಕ್ಷ ರೂ. ಪರಿಹಾರವನ್ನು ಕಾನೂನು ಪ್ರಾಧಿಕಾರದಿಂದ ಒಂದು ತಿಂಗಳೊಳಗೆ ನೀಡುವಂತೆಯೂ ಆದೇಶಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ಬಿಗಿ ಪಟ್ಟು; ವಿಧಾನಸಭೆಯಲ್ಲಿ ತೀವ್ರ ಕೋಲಾಹಲ