ಅಪಘಾತ ತೀವ್ರತೆಗೆ ಹೊತ್ತಿ ಉರಿದ ವಾಹನಗಳು  
ರಾಜ್ಯ

ಯಾದಗಿರಿ: ಕಾರು-VRL ಬಸ್​​ ಮುಖಾಮುಖಿ ಡಿಕ್ಕಿ; 7 ಮಂದಿ ಸ್ಥಳದಲ್ಲೇ ಸಾವು; ಹೊತ್ತಿ ಉರಿದ ವಾಹನಗಳು; Video

ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಯಾದಗಿರಿ: ಕಾರು ಮತ್ತು ವಿಆರ್ ಎಲ್ ಬಸ್​​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ.ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ 7 ಜನ ಸಾವಿಗೀಡಾಗಿದ್ದಾರೆ.

ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಅಪಘಾತದಲ್ಲಿ ಮೃತಪಟ್ಟವರನ್ನು ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಂದು ಅಮವಾಸ್ಯೆ ಹಿನ್ನೆಲೆ ತಿಂತನಿಮೌನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ನಡೆದಿದೆ.

ಕಾರಲ್ಲಿದ್ದ ಸರ್ಕಾರಿ ನೌಕರ ಶರಣಪ್ಪ, ಪುರಸಭೆ ಸದಸ್ಯ ಮಲ್ಲಿಕಾರ್ಜುನ್, ಮೂವರು ಮಹಿಳೆಯರು ಸೇರಿ 7 ಮಂದಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!