ರಾಜ್ಯ

ಆಫ್ರಿಕಾದಿಂದ ಬೆಂಗಳೂರಿಗೆ ಹೊಸ ಅತಿಥಿಗಳು: ಬನ್ನೇರುಘಟ್ಟ ಮೃಗಾಲಯಕ್ಕೆ ನಾಲ್ಕು ಚೀತಾಗಳ ಆಗಮನ..!

ವನ್ಯಜೀವಿಗಳನ್ನು ಕ್ವಾರಂಟೈನಿನಲ್ಲಿ ಇರಿಸಿ, 30 ದಿನಗಳ ಕಾಲ ನಿಗದಿತ ಆಹಾರ ನೀಡಬೇಕು. ಈ ವಿದೇಶಿ ವನ್ಯಜೀವಿಗಳಿಗೆ ಯಾವುದೇ ಸೋಂಕು ಇದೆಯೇ ಎಂದು ಪರಿಶೀಲಿಸಬೇಕು. ಪ್ರಾಣಿಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟಕ್ಕೆ ಸಾಗಿಸಬೇಕು ಎಂದು ಸೂಚನೆ ನೀಡಿದರು.

ಬೆಂಗಳೂರು: ತಡರಾತ್ರಿ ದಕ್ಷಿಣ ಆಫ್ರಕಾದಿಂದ ಬೆಂಗಳೂರಿಗೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಗಂಡು ಮತ್ತು ಎರಡು ಹೆಣ್ಣು ಚಿತಾ (ಸಿವಂಗಿ) ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಆಗಮಿಸಿವೆ.

ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಚೀತಾಗಳನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ವಿಮಾನ ನಿಲ್ದಾಣಕ್ಕೆ ತೆರಳಿ ಬರಮಾಡಿಕೊಂಡರು.

ಈ ವೇಳೆ ಅಧಿಕಾರಿಗಳು ಮತ್ತು ಪಶುವೈದ್ಯಾಧಿಕಾರಿಗಳಿಗೆ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿರುವ ಈ ಚೀತಾಗಳಿಗೆ ವಾತಾವರಣ ಹಾಗೂ ಹವಾಮಾನ ಬದಲಾವಣೆಯಿಂದ ಯಾವುದೇ ತೊಂದರೆ ಆಗದಂತೆ, ಆರೋಗ್ಯ ಸಮಸ್ಯೆಗಳು ಎದುರಾಗದಂತೆ ಸೂಕ್ತ ನಿಗಾ ವಹಿಸಬೇಕು.

ವನ್ಯಜೀವಿಗಳನ್ನು ಕ್ವಾರಂಟೈನಿನಲ್ಲಿ ಇರಿಸಿ, 30 ದಿನಗಳ ಕಾಲ ನಿಗದಿತ ಆಹಾರ ನೀಡಬೇಕು. ಈ ವಿದೇಶಿ ವನ್ಯಜೀವಿಗಳಿಗೆ ಯಾವುದೇ ಸೋಂಕು ಇದೆಯೇ ಎಂದು ಪರಿಶೀಲಿಸಬೇಕು. ಪ್ರಾಣಿಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟಕ್ಕೆ ಸಾಗಿಸಬೇಕು ಎಂದು ಸೂಚನೆ ನೀಡಿದರು.

ಒಂದು ಕಾಲದಲ್ಲಿ ನಮ್ಮ ಕರ್ನಾಟಕದ ಕಾಡುಗಳಲ್ಲಿ ಕಾಣಿಸಿಕೊಂಡಿದ್ದ ಚೀತಾಗಳು ಇಂದು ಇಲ್ಲದಂತಾಗಿವೆ. ಕನಿಷ್ಠ ಮೃಗಾಲಯಗಳಲ್ಲಾದರೂ ಜನತೆಗೆ ಈ ಅಪರೂಪದ ವನ್ಯಜೀವಿಗಳನ್ನು ನೋಡುವ ಅವಕಾಶ ದೊರಕಬೇಕು. ಈ ನಿಟ್ಟಿನಲ್ಲಿ ಅವುಗಳ ಸುರಕ್ಷತೆ ಮತ್ತು ಸಂರಕ್ಷಣೆಗೆ ಅತ್ಯಂತ ಆದ್ಯತೆ ನೀಡುವಂತೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇನ್ಮುಂದೆ Mr Nice Guy ಇರೊಲ್ಲ.. ಕಿಲ್ಲಿಂಗ್ ಮಷಿನ್ ಕೊನೆಗೊಳ್ಳುವ ಸಮಯ ಬಂದಿದೆ: ಇರಾನ್ ಗೆ ಮತ್ತೆ Donald Trump ಬೆದರಿಕೆ!

ಕಾಶ್ಮೀರದಲ್ಲಿ ಅಮೆರಿಕಾದ ಪ್ರಜೆ ಬಂಧನ: ಅಲ್ಲಿ ಆತ ಮಾಡ್ತಿದಿದ್ದೇನು?

ದೀದಿಗೆ ಶಾಕ್: ಬಾಂಗ್ಲಾದ ನೂತನ ರಾಯಭಾರಿಯಾಗಿ TMC ಮಾಜಿ ನಾಯಕ ದಿನೇಶ್ ತ್ರಿವೇದಿ ನೇಮಕ?

IPL 2026: ಸಿಕ್ಸರ್ ಗಳ ಸುರಿಮಳೆ, ಶ್ರೇಯಸ್ ಅಯ್ಯರ್ ಪಡೆಯ ಬ್ಯಾಟಿಂಗ್ ಅಬ್ಬರಕ್ಕೆ ಹಲವು ದಾಖಲೆಗಳು ಪತನ!

IPL 2026: ಮುಂದುವರೆದ PBKS ಜೈತ್ರ ಯಾತ್ರೆ, LSG ವಿರುದ್ಧ 54 ರನ್ ಗಳ ಭರ್ಜರಿ ಜಯ

SCROLL FOR NEXT