ನಲಪಾಡ್ ಮತ್ತು ಹ್ಯಾರಿಸ್ 
ರಾಜ್ಯ

ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್, ಪುತ್ರ ನಲಪಾಡ್ ಮನೆ ಮೇಲೆ ED ದಾಳಿ; Video

ಸೋಮವಾರ ಬೆಳಿಗ್ಗೆ 6.30ರ ವೇಳೆಗೆ ಇ.ಡಿ ಬೆಂಗಳೂರು ವಲಯದ 100ಕ್ಕೂ ಹೆಚ್ಚು ಸಿಬ್ಬಂದಿ ಶಾಸಕ ಮತ್ತು ನಲಪಾಡ್ ಅವರ ತಂದೆ ಎನ್‌.ಎ.ಹ್ಯಾರಿಸ್‌ ಅವರ ಶಾಂತಿನಗರದ ನಿವಾಸವೂ ಸೇರಿ ಒಟ್ಟು 17 ಕಡೆ ದಾಳಿ ನಡೆಸಿದ್ದಾರೆ.

ಬೆಂಗಳೂರು: ಬಿಟ್‌ಕಾಯಿನ್‌ ಅಕ್ರಮ ವಹಿವಾಟು ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ್ ಉರುಫ್‌ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆಸಿರುವ ಸಂಬಂಧ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಅವರ ಇಬ್ಬರು ಪುತ್ರರು ಮತ್ತು ಇತರರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ.

ಸೋಮವಾರ ಬೆಳಿಗ್ಗೆ 6.30ರ ವೇಳೆಗೆ ಇ.ಡಿ ಬೆಂಗಳೂರು ವಲಯದ 100ಕ್ಕೂ ಹೆಚ್ಚು ಸಿಬ್ಬಂದಿ ಶಾಸಕ ಮತ್ತು ನಲಪಾಡ್ ಅವರ ತಂದೆ ಎನ್‌.ಎ.ಹ್ಯಾರಿಸ್‌ ಅವರ ಶಾಂತಿನಗರದ ನಿವಾಸವೂ ಸೇರಿ ಒಟ್ಟು 17 ಕಡೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಗರುಡಾ ಮಾಲ್ ಹಿಂಭಾಗದಲ್ಲಿರುವ ಹ್ಯಾರಿಸ್ ಮನೆಯ ಮೇಲೆ ಇಡಿ ದಾಳಿ ನಡೆದಿದೆ. ಇದೇ ಸಂದರ್ಭದಲ್ಲಿ ಹ್ಯಾರಿಸ್ ಪುತ್ರ ಮುಹಮ್ಮದ್ ನಲಪಾಡ್ ನಿವಾಸದ ಮೇಲೂ ದಾಳಿ ನಡೆಸಲಾಗಿದೆ. ಕೇಂದ್ರದ ಭದ್ರತಾ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಿಟ್‌ಕಾಯಿನ್‌ ಪ್ರಕರಣ ಪತ್ತೆಯಾಗುವುದಕ್ಕೂ ಮೊದಲ ಆರು ವರ್ಷಗಳ ಅವಧಿಯಲ್ಲಿ ನಲಪಾಡ್‌ ಮತ್ತು ಶ್ರೀಕಿ ಮಧ್ಯೆ ನಿರಂತರ ಹಣಕಾಸು ವ್ಯವಹಾರ ನಡೆದಿದೆ. ಈ ಅವಧಿಯಲ್ಲಿ ಒಟ್ಟು ₹4.65 ಕೋಟಿ ಹಣ ಕೈಬದಲಾಗಿದೆ. ಬಿಟ್‌ಕಾಯಿನ್‌ ವಹಿವಾಟಗೂ ಇದಕ್ಕೂ ಸಂಬಂಧವಿದೆಯೇ ಅಥವಾ ಇದು ಬೇರೆ ಅಕ್ರಮ ವಹಿವಾಟೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಇ.ಡಿ ಮೂಲಗಳು ತಿಳಿಸಿವೆ

ಶಾಸಕ ಹ್ಯಾರಿಸ್ ಪುತ್ರರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತು ಒಮರ್ ಫಾರೂಕ್ ನಲಪಾಡ್ ಮತ್ತು ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಎಂಬ ಕ್ರಿಪ್ಟೋ ಹ್ಯಾಕರ್ ಅವರ ನಿವಾಸಗಳು ಸೇರಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಡಿ ಅಧಿಕಾರಿಗಳು ಸದ್ಯ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಬಿಟ್ ಕಾಯಿನ್ ಹಗರಣದ ಆರೋಪಿಗಳ ಜೊತೆಗೆ ಯಾವ ರೀತಿಯಲ್ಲಿ ಆರ್ಥಿಕ ವ್ಯವಹಾರ ನಡೆಸಲಾಗಿದೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಎ ಹ್ಯಾರಿಸ್ ಮತ್ತು ಮುಹಮ್ಮದ್ ನಲಪಾಡ್ ಅವರಿಂದಲೂ ಕೆಲವೊಂದು ಮಾಹಿತಿಗಳನ್ನು ಸಂಗ್ರಹಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ ಕಟ್ಟಡ ದುರಂತ: ತಲೆಮರೆಸಿಕೊಂಡಿರುವ PG ಮಾಲೀಕನ ವಿರುದ್ಧ Lookout Notice ಜಾರಿ, ಇಂದು High courtನಲ್ಲಿ ತುರ್ತು ವಿಚಾರಣೆ..!

Devi Awards 2026: ಮಹಿಳೆಯರನ್ನು ಕೇವಲ ಫಲಾನುಭವಿಗಳಾಗಿ ನೋಡುವ ಬದಲು ಅಭಿವೃದ್ಧಿಯ ಪಾಲುದಾರರು, ನಾಯಕಿಯರನ್ನಾಗಿ ಪರಿಗಣಿಸಬೇಕು- ಒಡಿಶಾ ಡಿಸಿಎಂ

West asia conflict: ಬೆದರಿಕೆಗೆ ಮಣಿಯಲ್ಲ, ದಾಳಿ ನಿಲ್ಲದ ಹೊರತು ಹಾರ್ಮುಜ್ ಜಲಸಂಧಿ ತೆರೆಯಲ್ಲ: ಅಮೆರಿಕಾಕ್ಕೆ Iran ಖಡಕ್ ಸಂದೇಶ..!

'ಅಹಿಂದ ಯಾರ ಆಸ್ತಿಯೂ ಅಲ್ಲ'.. ಕರೆಯದೇ ಹೇಗೆ ಹೋಗಲಿ?: ಗುರುವಿನ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಗರಂ!

ದೆಹಲಿ ಹಾಸ್ಟೆಲ್ ದುರಂತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ; 11 ಮಂದಿ ರಕ್ಷಣೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ