ಎಸ್.ಕೆ ಸೋಮಶೇಖರ್ 
ರಾಜ್ಯ

ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ ನೇಮಕವಾದ ಮೊದಲ ಕನ್ನಡಿಗ: ಇತಿಹಾಸ ಸೃಷ್ಟಿಸಿದ ಕೆ.ಎಸ್ ಸೋಮಶೇಖರ್

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ನೀಲತೂರಿನ ಸಣ್ಣ ಮಾವು ಬೆಳೆಯುವ ಗ್ರಾಮದ ಸೋಮಶೇಖರ್, ರೋಣೂರಿನ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿದರು. ಕೋಲಾರದ ಸರ್ಕಾರಿ ಕಾಲೇಜಿನಿಂದ ಪದವಿ ಪಡೆದರು.

ಕೋಲಾರ: ರಾಜ್ಯಸಭಾ ಕಾರ್ಯದರ್ಶಿಯಾಗಿ ಕೋಲಾರದ ಶ್ರೀನಿವಾಸಪುರ ಸೋಮಶೇಖರ್‌ ನೇಮಕಗೊಂಡಿದ್ದಾರೆ. ಪ್ರತಿಷ್ಠಿತ ಸ್ಥಾನಕ್ಕೇರಿದ ಕರ್ನಾಟಕದ ಮೊದಲ ಅಧಿಕಾರಿ ಎಂಬ ಇತಿಹಾಸವನ್ನು ಸೋಮಶೇಖರ್‌ ನಿರ್ಮಿಸಿದ್ದಾರೆ.

ಇದು ಅತ್ಯಂತ ಜವಾಬ್ದಾರಿಯುತ ಕೆಲಸ ಮತ್ತು ಈ ದೊಡ್ಡ ಅವಕಾಶ ನೀಡಿದ್ದಕ್ಕಾಗಿ ಕೃತಜ್ಞರಾಗಿರುವುದಾಗಿ ಕೆ.ಎಸ್ ಸೋಮಶೇಖರ್ ತಿಳಿಸಿದ್ದಾರೆ. ಸೆಕ್ರೆಟರಿಯೇಟ್ ಪರೀಕ್ಷೆ ತೆಗೆದುಕೊಳ್ಳಲು ಮಾರ್ಗದರ್ಶನ ನೀಡಿದ ಎಚ್. ಹನುಮಂತಪ್ಪ ಮತ್ತು ತಮ್ಮ ವೃತ್ತಿಜೀವನದಲ್ಲಿ ನೀಡಿದ ಬೆಂಬಲಕ್ಕಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ತಾವು ಎಂದಿಗೂ ಮರೆಯುವುದಿಲ್ಲ ಎಂದು ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ನೀಲತೂರಿನ ಸಣ್ಣ ಮಾವು ಬೆಳೆಯುವ ಗ್ರಾಮದ ಸೋಮಶೇಖರ್, ರೋಣೂರಿನ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿದರು ಮತ್ತು ಕೋಲಾರದ ಸರ್ಕಾರಿ ಕಾಲೇಜಿನಿಂದ ಪದವಿ ಪಡೆದರು.

ಸೋಮಶೇಖರ್ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಪಡೆದರು, ರೈತರ ಸಂಕಷ್ಟದ ತುಲನಾತ್ಮಕ ಅಧ್ಯಯನದಲ್ಲಿ ಕೆಲಸ ಮಾಡಿದರು. ಎಂಫಿಲ್ ಮತ್ತು ಎಂಎ (ಸಾಹಿತ್ಯ) ಪದವಿ ಪಡೆದರು. ಚಿಂತಾಮಣಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು.

ನಂತರ ಅವರು ಕಾರ್ಯದರ್ಶಿ ಪರೀಕ್ಷೆಯನ್ನು ತೆಗೆದುಕೊಂಡು ಸೇವೆಗೆ ಸೇರಿದರು. ನವದೆಹಲಿಯ ಕರ್ನಾಟಕ ಭವನದ ಉಪ ನಿವಾಸ ಆಯುಕ್ತರು, ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಜಂಟಿ ನಿರ್ದೇಶಕರು (ಆಡಳಿತ) ಮತ್ತು 2018-19ರಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿಯ ವಿಶೇಷ ಕರ್ತವ್ಯ ಅಧಿಕಾರಿ (OSD) ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು.

ಸೋಮಶೇಖರ್ ಅವರಿಗೆ ಇಂಗ್ಲಿಷ್, ಹಿಂದಿ, ತೆಲುಗು ಮತ್ತು ತಮಿಳು ತಿಳಿದಿದ್ದರೂ, ಅವರ ಮಾತೃಭಾಷೆ ಕನ್ನಡಕ್ಕೆ ಅವರ ನಿಷ್ಠೆ ಉಳಿದಿದೆ ಎಂದು ಹೇಳಿದರು.

ನಿವೃತ್ತಿಯ ನಂತರ ಅವರು ತಮ್ಮ ಸ್ಥಳೀಯ ಗ್ರಾಮದಲ್ಲಿ ನೆಲೆಸಲು ಮತ್ತು ನಿವೃತ್ತ ಸರ್ಕಾರಿ ಶಿಕ್ಷಕರಾದ ಅವರ ತಂದೆ ಮಾಡಿದಂತೆ ಯುವ ಪೀಳಿಗೆಗೆ ಬೋಧನೆ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕೃಷಿ ಚಟುವಟಿಕೆಗಳತ್ತ ಗಮನಹರಿಸಲು ಬಯಸಿದ್ದಾರೆ.

ಸೋಮಶೇಖರ್ ಅವರ ಪತ್ನಿ ರೈಲ್ವೆ ಅಧಿಕಾರಿ, ಅವರ ಮಗಳು ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ ಮತ್ತು ಮಗ ಕಾನೂನು ಪದವಿ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!