ಸಂಗ್ರಹ ಚಿತ್ರ 
ರಾಜ್ಯ

ಬಾಗಲಕೋಟೆ: ಅನೈತಿಕ ಸಂಬಂಧ; ಚಿಕ್ಕಪ್ಪನ ಮಗನನ್ನೇ ಬರ್ಬರವಾಗಿ ಕೊಂದ ಸಹೋದರ!

ಪತ್ನಿ ಜೊತೆ ಅನೈತಿಕ ಸಂಬಂಧ ಕಾರಣಕ್ಕೆ ಚಿಕ್ಕಪ್ಪನ ಮಗನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆಯ ಜಮಖಂಡಿಯಲ್ಲಿ ನಡೆದಿದೆ. ಕನ್ನೊಳ್ಳಿ ಗ್ರಾಮದಲ್ಲಿ ಬೆಂಕಿಹೊತ್ತುಕೊಂಡು ಕಾರಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು ವರದಿಯಾಗಿತ್ತು.

ಬಾಗಲಕೋಟೆ: ಪತ್ನಿ ಜೊತೆ ಅನೈತಿಕ ಸಂಬಂಧ ಕಾರಣಕ್ಕೆ ಚಿಕ್ಕಪ್ಪನ ಮಗನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆಯ ಜಮಖಂಡಿಯಲ್ಲಿ ನಡೆದಿದೆ. ಕನ್ನೊಳ್ಳಿ ಗ್ರಾಮದಲ್ಲಿ ಬೆಂಕಿಹೊತ್ತುಕೊಂಡು ಕಾರಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು ವರದಿಯಾಗಿತ್ತು. ಮೃತನನ್ನು 36 ವರ್ಷದ ಸೋಮು ಪಡಸಲಗಿ ಎಂದು ಗುರುತಿಸಲಾಗಿತ್ತು. ಇದು ಆಕಸ್ಮಿಕ ಸಾವಲ್ಲ ಬದಲಾಗಿ ಕೊಲೆ ಎಂಬುದು ತನಿಖೆ ವೇಳೆ ಬಯಲಾಗಿದೆ.

ಸೋಮು, ಸದಾಶಿವ ಪಡಸಲಗಿ ಪತ್ನಿ ಜೊತೆ ಮೂರು ವರ್ಷದಿಂದ ಅನೈತಿಕ ಸಂಬಂಧ ಹೊಂದಿದ್ದ. ಇದೇ ವಿಚಾರವಾಗಿ ಇಬ್ಬರ ಮಧ್ಯೆ ಜಗಳವೂ ನಡೆದಿತ್ತು. ಹೀಗಾಗಿ ಸೋಮುನನ್ನು ಸದಾಶಿವ ಪಡಸಲಗಿ ಹಾಗೂ ಆತನ ಸಹಚರರು ಕೊಲೆ ಮಾಡಿದ್ದರು ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೊಸ ಕಾರು ಖರೀದಿಸಿದ್ದ ಸೋಮು ಪೂಜೆ ಮಾಡಿಸಿಕೊಂಡು ಊರಿಗೆ ಬರುತ್ತಿದ್ದಾಗ ಆತನನ್ನು ಹಿಂಬಾಲಿಸಿದ ಸದಾಶಿವ ಮತ್ತು ಸಹಚರರು ಕನ್ನೊಳ್ಳಿ ಗ್ರಾಮದ ಬಳಿ ಸೋಮುವಿನ ಕಾರನ್ನು ತಡೆದು ಜಗಳವಾಡಿದ್ದರು. ನಂತರ ಸದಾಶಿವ ಸೋಮುಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದನು. ಬಳಿಕ ಶವವನ್ನು ಕಾರಲ್ಲಿ ಕೂರಿಸಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಕಾರಿಗೆ ಬೆಂಕಿ ತಗುಲಿ ಸೋಮು ಮೃತಪಟ್ಟಿದ್ದಾನೆ ಎಂದು ಬಿಂಬಿಸುವ ಪ್ರಯತ್ನ ಸದಾಶಿವ ಮಾಡಿದ್ದರು ಎಂಬುದು ಗೊತ್ತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೂರಂ ಹಬ್ಬಕ್ಕೂ ಮುನ್ನ ದೊಡ್ಡ ದುರಂತ: ತ್ರಿಶೂರ್‌ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 12 ಕಾರ್ಮಿಕರು ಸಾವು

ಪರಮೇಶ್ವರ್ ಗೆ ಬೆಟ್ಟಿಂಗ್ ಸಂಕಷ್ಟ: FIR ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶ

ಸಿದ್ದರಾಮಯ್ಯಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: CM ಆಪ್ತ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

'ಫಾರಿನ್ ಸ್ಟೈಲ್' Love ಮಾಡ್ತೀನಿ: ಕೈಕಾಲು ಕಟ್ಟಿ ಬೆಂಕಿ ಇಟ್ಟ ಪ್ರಿಯತಮೆ, ಪ್ರಿಯಕರ ಸುಟ್ಟು ಕರಕಲು!

ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನಿರ್ಣಯ ಮಂಡನೆ!

SCROLL FOR NEXT