ಸಾಂಕೇತಿಕ ಚಿತ್ರ online desk
ರಾಜ್ಯ

ಶಸ್ತ್ರಚಿಕಿತ್ಸೆ ಬಳಿಕ ಮರ್ಮಾಂಗಕ್ಕೆ ಹೊಲಿಗೆ ಹಾಕಲು ಮರೆತ ವೈದ್ಯರು! ರಸ್ತೆ ನಡುವೆ ನರಳಿ ಶಾ ನವಾಜ್ ಸಾವು; ಕುಟುಂಬಸ್ಥರ ಆಕ್ರೋಶ

ಮರ್ಮಾಂಗಕ್ಕೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಹೊಲಿಗೆ ಹಾಕದೆ ರೋಗಿಯನ್ನ ಮನೆಗೆ ಕಳುಹಿಸಿದ್ದರು. ಮರ್ಮಾಂಗದ ಭಾದೆ ತಾಳಲಾರದೆ ರೋಗಿ ರಸ್ತೆ ನಡುವೆ ನರಳಿ ನರಳಿ ಸಾವನ್ನಪ್ಪಿದ್ದಾರೆ.

ಬೆಂಗಳೂರು: ರೋಗಿಯೊಬ್ಬರಿಗೆ ಮರ್ಮಾಂಗ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಹೊಲಿಗೆ ಹಾಕುವುದನ್ನು ಮರೆತ ಪರಿಣಾಮ ರೋಗಿ ಶಾ ನವಾಜ್ ಸಾವನ್ನಪ್ಪಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವರದಿಯಾಗಿದೆ.

ಮರ್ಮಾಂಗಕ್ಕೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಹೊಲಿಗೆ ಹಾಕದೆ ರೋಗಿಯನ್ನ ಮನೆಗೆ ಕಳುಹಿಸಿದ್ದರು. ಮರ್ಮಾಂಗದ ಭಾದೆ ತಾಳಲಾರದೆ ರೋಗಿ ರಸ್ತೆ ನಡುವೆ ನರಳಿ ನರಳಿ ಸಾವನ್ನಪ್ಪಿದ್ದಾರೆ. ಶಾ ನವಾಜ್ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಶಾ ನವಾಜ್ (45) ಮರ್ಮಾಂಗದಲ್ಲಿ ಗಡ್ಡೆ ಬೆಳೆದ ಹಿನ್ನೆಲೆ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತ ಖಾಸಗಿ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಮನೆಗೆ ಆಧಾರವಾಗಿದ್ದ ನವಾಜ್​ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ಮರ್ಮಾಂಗದಲ್ಲಿ ಗಡ್ಡೆ ಬೆಳೆದ ಕಳೆದ ಒಂದೂವರೆ ತಿಂಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗಕ್ಕೆ ಈತನನ್ನು ದಾಖಲಿಸಲಾಗಿತ್ತು. ಸೋಂಕು ತಗುಲಿದೆ ಎಂದು ಹೇಳಿದ್ದ ವೈದ್ಯರು ಮರ್ಮಾಂಗಕ್ಕೆ ಶಸ್ತ್ರಚಿಕಿತ್ಸೆ ನಡೆಸಿದ್ದರು.

ಕೆಲ ದಿನಗಳ ಬಳಿಕ ಪ್ಲಾಸ್ಟಿಕ್ ಸರ್ಜರಿ ವಿಭಾಗಕ್ಕೆ ಹೋಗುವಂತೆ ರೋಗಿಗೆ ಸೂಚಿಸಲಾಗಿತ್ತು. ಆದರೆ ಗಾಯ ಇನ್ನೂ ವಾಸಿಯಾಗಿಲ್ಲ ಎಂದು ಸರ್ಜರಿ ವಿಭಾಗ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದರು. ಅಪರೇಷನ್ ಹಾಗೂ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಸಿಬ್ಬಂದಿ ಸಮನ್ವಯತೆ ಕೊರತೆ ಕಾರಣ ರೋಗಿ ಗಂಭೀರ ಸ್ಥಿತಿಯಲ್ಲಿ ಇರುವಾಗಲೇ ಡಿಸ್ಚಾರ್ಜ್ ಆಗುವಂತೆ ಒತ್ತಡ ಹೇರಲಾಗಿದೆ. ಕೊನೆಗೆ ಕೊಯ್ದಿದ್ದ ಮರ್ಮಾಂಗಕ್ಕೆ ಹೊಲಿಗೆ ಕೂಡ ಮಾಡದೇ ಸಿಬ್ಬಂದಿಯೇ ರೋಗಿಯನ್ನ ಕಳುಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಶಾ ನವಾಜ್ ನ ಪತ್ನಿ 3 ದಿನ ಆಸ್ಪತ್ರೆಯ ಬಳಿ ಇರುವ ಫುಟ್ ಪಾತ್ ನಲ್ಲೇ ರೋಗಿಯನ್ನು ಇಟ್ಟುಕೊಂಡಿದ್ದರಂತೆ. ಎಷ್ಟೇ ಅಂಗಲಾಚಿದರೂ ಆಸ್ಪತ್ರೆ ಸಿಬ್ಬಂದಿ ಮತ್ತೆ ಆತನನ್ನು ದಾಖಲಿಸಿಕೊಂಡಿಲ್ಲ. ಮರ್ಮಾಂಗದಲ್ಲಿ ರಕ್ತ ಸುರಿಯುತ್ತಲೇ ಇದ್ದರೂ ವೈದ್ಯರು ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಪತ್ನಿ ಹಾಗೂ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ: ಹಡಗಿನ ಮೇಲೆ IRGC ಗುಂಡಿನ ದಾಳಿ, ಕದನ ವಿರಾಮ ಅನಿಶ್ಚಿತತೆ..?

'ಕದನ ವಿರಾಮ ವಿಸ್ತರಿಸುತ್ತೇವೆ, ಇರಾನ್‌ಗೆ ಮಾತುಕತೆಗೆ ಸಮಯ ನೀಡುತ್ತೇವೆ; ಹಾರ್ಮುಜ್ ಜಲಸಂಧಿ ನಿರ್ಬಂಧ ಮುಂದುವರಿಕೆ': ಡೊನಾಲ್ಡ್ ಟ್ರಂಪ್

ಪಹಲ್ಗಾಮ್ ಉಗ್ರರ ದಾಳಿಗೆ ಒಂದು ವರ್ಷ: ಯಾವುದೇ ರೀತಿಯ ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗಲ್ಲ; ಶತ್ರುಗಳಿಗೆ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್

ಏ.23ರಿಂದ CET ಪರೀಕ್ಷೆ: 3.3 ಲಕ್ಷ ಅಭ್ಯರ್ಥಿಗಳು ನೋಂದಣಿ; 745 ಕೇಂದ್ರಗಳಲ್ಲಿ ವಸ್ತ್ರಸಂಹಿತೆ ನಿರ್ವಹಣೆಗೆ ಅಧಿಕಾರಿಗಳ ನಿಯೋಜನೆ

ಬಿಟ್‌ಕಾಯಿನ್ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ: ಗೃಹ ಸಚಿವ ಡಾ ಜಿ ಪರಮೇಶ್ವರ್

SCROLL FOR NEXT