ಸಚಿವರ ಕಾರು ಅಡ್ಡಗಟ್ಟಿದ ಮಹಿಳೆಯರು 
ರಾಜ್ಯ

ನೀರಿಗೆ ಹಾಹಾಕಾರ: ಖಾಲಿ ಕೊಡ ಹಿಡಿದು, ಸಚಿವರ ಕಾರು ಅಡ್ಡಗಟ್ಟಿದ ಮಹಿಳೆಯರು; ತಂಗಡಗಿ ತಬ್ಬಿಬ್ಬು!

ಕೊಪ್ಪಳದಲ್ಲೂ ನೀರಿನ ತೀವ್ರ ಕೊರತೆ ಎದುರಾಗಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆಯರು ಬುಧವಾರ ಕೈಯಲ್ಲಿ ಖಾಲಿ ಕೊಡ ಹಿಡಿದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ.

ಕೊಪ್ಪಳ: ರಾಜ್ಯದಲ್ಲಿ ಬಿಸಿಲ ಬೇಗೆಯೊಂದಿಗೆ ಕುಡಿಯುವ ನೀರಿನ ಭೀಕರ ಬಿಕ್ಕಟ್ಟು ಎದುರಾಗಿದ್ದು, ಹಲವು ಜಿಲ್ಲೆಗಳಲ್ಲಿ ನೀರಿಗಾಗಿ ತೀವ್ರ ಹಾಹಾಕಾರ ಶುರುವಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರಿಗೆ ಒಂದೆಡೆ ಬಿಸಿಲು ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ನೀರು ಸಿಗುತ್ತಿಲ್ಲ. ಇದರಿಂದ ಜನ ಕಂಗಾಲಾಗಿದ್ದಾರೆ.

ಕೊಪ್ಪಳದಲ್ಲೂ ನೀರಿನ ತೀವ್ರ ಕೊರತೆ ಎದುರಾಗಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆಯರು ಬುಧವಾರ ಕೈಯಲ್ಲಿ ಖಾಲಿ ಕೊಡ ಹಿಡಿದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ.

ಇಂದು ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ಮಹಿಳೆಯರು ಖಾಲಿ ಕೊಡದೊಂದಿಗೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ತೆರಳುತ್ತಿದ್ದ ಸಚಿವ ಶಿವರಾಜ್ ತಂಗಡಗಿ ಅವರ ಕಾರಿಗೆ ದಿಢೀರ್ ಮುತ್ತಿಗೆ ಹಾಕಿದ್ದಾರೆ. ಇದರಿಂದ ತಬ್ಬಿಬ್ಬು ಆದ ಸಚಿವರು, ಮಹಿಳೆಯರನ್ನು ಸಮಾಧಾನ ಪಡಿಸಲು ಹರಸಾಹಸ ಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ದಿಗ್ಬಂಧನ ಧಿಕ್ಕರಿಸಿ, ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಸಂಗ್ರಹ; ಟ್ರಂಪ್'ಗೆ ಟೆಹ್ರಾನ್ ಡಿಚ್ಚಿ

Tamilnadu & West Bengal Election 2026 Live Updates |ಸಂಜೆ 5 ಗಂಟೆ ವೇಳೆಗೆ ತಮಿಳುನಾಡು ಶೇ. 81, ಪಶ್ಚಿಮ ಬಂಗಾಳ ಹಂತ-I ಶೇ.90 ಮತದಾನ

ಪಾಕಿಸ್ತಾನ ಡಬಲ್ ಗೇಮ್ ಆಡುತ್ತಿದೆ: ಇರಾನ್ ಕೆಂಡಾಮಂಡಲ, ಮುಂದಿನ ನಡೆಯೇ ನಿಗೂಢ! ಏನಿದು ಹೊಸ ವಿವಾದ?

Indian Stock Market: ಇರಾನ್ ಸಂಘರ್ಷ, ತೈಲ ಬೆಲೆ ಏರಿಕೆ.. ಷೇರುಮಾರುಕಟ್ಟೆ ಕುಸಿತ, Sensex 852 ಅಂಕ ಇಳಿಕೆ

ಬೆಟ್ಟಿಂಗ್ ಪ್ರಕರಣಕ್ಕೆ ಹೈಕೋರ್ಟ್ ತಡೆ: ಗೃಹ ಸಚಿವ ಪರಮೇಶ್ವರ​​​ಗೆ ಬಿಗ್ ರಿಲೀಫ್!

SCROLL FOR NEXT