ಸಚಿವರ ಕಾರು ಅಡ್ಡಗಟ್ಟಿದ ಮಹಿಳೆಯರು 
ರಾಜ್ಯ

ನೀರಿಗೆ ಹಾಹಾಕಾರ: ಖಾಲಿ ಕೊಡ ಹಿಡಿದು, ಸಚಿವರ ಕಾರು ಅಡ್ಡಗಟ್ಟಿದ ಮಹಿಳೆಯರು; ತಂಗಡಗಿ ತಬ್ಬಿಬ್ಬು!

ಕೊಪ್ಪಳದಲ್ಲೂ ನೀರಿನ ತೀವ್ರ ಕೊರತೆ ಎದುರಾಗಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆಯರು ಬುಧವಾರ ಕೈಯಲ್ಲಿ ಖಾಲಿ ಕೊಡ ಹಿಡಿದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ.

ಕೊಪ್ಪಳ: ರಾಜ್ಯದಲ್ಲಿ ಬಿಸಿಲ ಬೇಗೆಯೊಂದಿಗೆ ಕುಡಿಯುವ ನೀರಿನ ಭೀಕರ ಬಿಕ್ಕಟ್ಟು ಎದುರಾಗಿದ್ದು, ಹಲವು ಜಿಲ್ಲೆಗಳಲ್ಲಿ ನೀರಿಗಾಗಿ ತೀವ್ರ ಹಾಹಾಕಾರ ಶುರುವಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರಿಗೆ ಒಂದೆಡೆ ಬಿಸಿಲು ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ನೀರು ಸಿಗುತ್ತಿಲ್ಲ. ಇದರಿಂದ ಜನ ಕಂಗಾಲಾಗಿದ್ದಾರೆ.

ಕೊಪ್ಪಳದಲ್ಲೂ ನೀರಿನ ತೀವ್ರ ಕೊರತೆ ಎದುರಾಗಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆಯರು ಬುಧವಾರ ಕೈಯಲ್ಲಿ ಖಾಲಿ ಕೊಡ ಹಿಡಿದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ.

ಇಂದು ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ಮಹಿಳೆಯರು ಖಾಲಿ ಕೊಡದೊಂದಿಗೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ತೆರಳುತ್ತಿದ್ದ ಸಚಿವ ಶಿವರಾಜ್ ತಂಗಡಗಿ ಅವರ ಕಾರಿಗೆ ದಿಢೀರ್ ಮುತ್ತಿಗೆ ಹಾಕಿದ್ದಾರೆ. ಇದರಿಂದ ತಬ್ಬಿಬ್ಬು ಆದ ಸಚಿವರು, ಮಹಿಳೆಯರನ್ನು ಸಮಾಧಾನ ಪಡಿಸಲು ಹರಸಾಹಸ ಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ