ಮಧು ಬಂಗಾರಪ್ಪ  
ರಾಜ್ಯ

ತೃತೀಯ ಭಾಷೆ ಅಂಕ ವಿವಾದ: ಕಾನೂನು ಆಯ್ಕೆ ಕುರಿತು ಸಿಎಂ ಜೊತೆ ಚರ್ಚೆಗೆ ಸಚಿವ ಬಂಗಾರಪ್ಪ ಮುಂದು..!

ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅಗತ್ಯವಿದೆಯೇ ಎಂಬುದನ್ನೂ ಪರಿಶೀಲಿಸುತ್ತೇವೆ. ವಿದ್ಯಾರ್ಥಿಗಳು ಆತಂಕಪಡಬಾರದು.

ಬೆಂಗಳೂರು: ತೃತೀಯ ಭಾಷೆ ಅಂಕ ವಿವಾದ ತೀವ್ರವಾಗುತ್ತಿರುವ ಹಿನ್ನೆಲೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ.

ಹೈಕೋರ್ಟ್ ಮಂಗಳವಾರ ನೀಡಿದ ನಿರ್ದೇಶನದಂತೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷಾ ವಿಷಯಕ್ಕೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂದು ಸೂಚಿಸಿದೆ. ಈ ತೀರ್ಪಿನ ಹಿನ್ನೆಲೆ ಸರ್ಕಾರದ ಮುಂದಿನ ನಡೆ ಏನು ಎಂಬುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಬಂಗಾರಪ್ಪ ಅವರು, “ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅಗತ್ಯವಿದೆಯೇ ಎಂಬುದನ್ನೂ ಪರಿಶೀಲಿಸುತ್ತೇವೆ. ವಿದ್ಯಾರ್ಥಿಗಳು ಆತಂಕಪಡಬಾರದು, ಫಲಿತಾಂಶ ಪ್ರಕಟಣೆಯಲ್ಲಿ ಯಾವುದೇ ವಿಳಂಬವಾಗುವುದಿಲ್ಲ” ಎಂದು ಭರವಸೆ ನೀಡಿದರು.

ಇದಕ್ಕೂ ಮೊದಲು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಡಿಎಸ್‌ಇಎಲ್) ಮೌಲ್ಯಮಾಪನ ವಿಧಾನದಲ್ಲಿ ಬದಲಾವಣೆ ಕುರಿತಂತೆ ಕರಡು ಅಧಿಸೂಚನೆ ಪ್ರಕಟಿಸಿ ಸಾರ್ವಜನಿಕ ಅಭಿಪ್ರಾಯವನ್ನು ಆಹ್ವಾನಿಸಿತ್ತು.

ಇದರ ಬೆನ್ನಲ್ಲೇ ಕಲಬುರಗಿ ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ ನಮೋಶಿ ಅವರು, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ.

ಶೈಕ್ಷಣಿಕ ವರ್ಷ ಪೂರ್ಣಗೊಂಡ ನಂತರ ಮೌಲ್ಯಮಾಪನ ವಿಧಾನ ಬದಲಿಸುವುದು ವಿದ್ಯಾರ್ಥಿಗಳ ನ್ಯಾಯಸಮ್ಮತ ನಿರೀಕ್ಷೆಗೆ ಧಕ್ಕೆ ಉಂಟುಮಾಡುತ್ತದೆ. ಅಂಕಗಳನ್ನು ಗ್ರೇಡಿಂಗ್ ಆಗಿ ಬದಲಿಸುವುದು ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ನಂತರ, ಈಗ ಪಾಕ್ ಪ್ರಧಾನಿ, Pak ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಗೆ ನೊಬೆಲ್ ಶಾಂತಿ ಪ್ರಶಸ್ತಿಗೆ ನಿರ್ಣಯ ಮಂಡನೆ!

ಪೂರಂ ಹಬ್ಬಕ್ಕೂ ಮುನ್ನ ದೊಡ್ಡ ದುರಂತ: ತ್ರಿಶೂರ್‌ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 12 ಕಾರ್ಮಿಕರು ಸಾವು

IPL 2026: ಅಭಿಷೇಕ್ ಶರ್ಮಾ ಶತಕ, DC ವಿರುದ್ಧ SRH 47ರನ್ ಭರ್ಜರಿ ಜಯ

'ಎಲ್ಲ ಆರೋಪಿಗಳನ್ನೂ ಕಟಕಟೆಯಲ್ಲಿ ನಿಲ್ಲುಸುತ್ತೇನೆ': "Kaise Haraya" ಕಾರ್ಪೋರೇಟರ್ ಸಹರ್ ಶೇಖ್ ಸವಾಲು, ಟ್ರೋಲರ್ಸ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!

IPL 2026: DC ಬೌಲರ್ ಗಳ ಚೆಂಡಾಡಿದ SRH ಬ್ಯಾಟರ್ Abhishek Sharma, ಸಿಕ್ಸರ್, ಬೌಂಡರಿಗಳಿಂದಲೇ ಶತಕ, ಹಲವು ದಾಖಲೆಗಳು ಛಿದ್ರ!

SCROLL FOR NEXT