ಡಾ ಜಿ ಪರಮೇಶ್ವರ್  
ರಾಜ್ಯ

ಕಬ್ಬಡ್ಡಿ ಪಂದ್ಯದ ವೇಳೆ ಬೆಟ್ಟಿಂಗ್: ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಈಗ ತಮಾಷೆನೂ ಮಾಡುವಂತಿಲ್ಲ‌ ಎಂಬಂತಾಗಿದೆ; ಗೃಹ ಸಚಿವ ಪರಮೇಶ್ವರ್

ನಾನು ಹೇಳಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಕಬಡ್ಡಿ ಪಂದ್ಯಗಳ ವೇಳೆ ಸಾಮಾನ್ಯವಾಗಿ ಬಳಸುವ ರೀತಿಯ ಮಾತು. ಕಾನೂನು ದೃಷ್ಟಿಯಿಂದ ಅದು ತಪ್ಪಾಗಿರಬಹುದು, ಆದರೆ, ನಾನು ಯಾವ ರೀತಿ ಹೇಳಿದ್ದೇನೆ ಎನ್ನುವುದು ಮುಖ್ಯವಾಗುತ್ತದೆ.

ಬೆಂಗಳೂರು: ಕಬಡ್ಡಿ ಪಂದ್ಯದಲ್ಲಿ ಬೆಟ್ಟಿಂಗ್ ಆರೋಪದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ತಮ್ಮ ಹೇಳಿಕೆ ಸಂಬಂಧ ಬುಧವಾರ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

“ನಾನು ಹೇಳಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಕಬಡ್ಡಿ ಪಂದ್ಯಗಳ ವೇಳೆ ಸಾಮಾನ್ಯವಾಗಿ ಬಳಸುವ ರೀತಿಯ ಮಾತು. ಕಾನೂನು ದೃಷ್ಟಿಯಿಂದ ಅದು ತಪ್ಪಾಗಿರಬಹುದು, ಆದರೆ, ನಾನು ಯಾವ ರೀತಿ ಹೇಳಿದ್ದೇನೆ ಎನ್ನುವುದು ಮುಖ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

ನಾನೇನಾದರೂ ಬೆಟ್ಟಿಂಗ್ ಪ್ರಮೋಟ್ ಮಾಡಿ ಎಂದು ಹೇಳಿದ್ದರೆ ಸರಿಯಲ್ಲ.‌ ನಾನು ಒಬ್ಬ ಜವಾಬ್ದಾರಿ ಸ್ಥಾನದವನಾಗಿ, ಪ್ರಮೋಟ್ ಮಾಡ್ತೇನೆ ಎಂದರೆ ಶುದ್ದ ಸುಳ್ಳು.‌ ಅರ್ಥೈಸಿಕೊಳ್ಳುವುದರ ಮೇಲೆ ಹೋಗುತ್ತದೆ ಎಂದು ಹೇಳಿದ್ದಾರೆ.

ಈಗ ತಮಾಷೆನೂ ಮಾಡುವಂತಿಲ್ಲ‌ ಎಂಬಂತಾಗಿದೆ. ನಾನು ಕಾನೂನನ್ನು ಗೌರವಿಸುವವನು. ಕಾನೂನು ರಕ್ಷಣೆ ಮಾಡುವ ಖಾತೆ ನಿಭಾಯಿಸುತ್ತಿದ್ದೇನೆ. ನಾನು ಕಾನೂನಿಗೆ ಗೌರವ ಕೊಡಬೇಕಲ್ಲವೇ? ಕಾನೂನು ಏನು ಕ್ರಮ ತೆಗೆದುಕೊಳ್ಳುತ್ತದೆ, ಅದಕ್ಕೆ ಬಿಟ್ಟಿದ್ದೇನೆ ಎಂದರು.

ಕೋರ್ಟ್‌ನಿಂದ ನೋಟಿಸ್ ಕೊಟ್ಟಿರಲಿಲ್ಲ. ನೋಟಿಸ್ ಬಂದಿದ್ದರೆ ಅರ್ಥೈಸಲಾಗುತ್ತಿತ್ತು. ಗಂಭಿರವಾಗಿ ಪರಿಗಣಿಸಬೇಡಿ ಎಂದು ಮನವರಿಕೆ ಮಾಡಲಾಗುತ್ತಿತ್ತು. ನೋಟಿಸ್ ಬಂದಿಲ್ಲ. ಏಕಾಏಕಿಯಾಗಿ ಆದೇಶ ಮಾಡಿದ್ದಾರೆ. ಕಾನೂನಿಗೆ ಗೌರವ ಕೊಡಬೇಕು, ಗೌರವಿಸುತ್ತೇನೆ ಎಂದು ಹೇಳಿದರು.

Tamilnadu & West Bengal Election 2026 Live Updates | 9 ಗಂಟೆ ವೇಳೆಗೆ ತಮಿಳುನಾಡಿನಲ್ಲಿ ಶೇ. 17.69, ಪಶ್ಚಿಮ ಬಂಗಾಳದಲ್ಲಿ ಶೇ.18.76ರಷ್ಟು ಮತದಾನ

US-Iran war:: ಅಮೆರಿಕಾ ನೌಕಾ ದಿಗ್ಭಂಧನ ಮುಂದುವರಿದರೆ ಹಾರ್ಮುಜ್ ಜಲಸಂಧಿ ತೆರೆಯಲ್ಲ; ಇರಾನ್ ಕಠಿಣ ನಿಲುವು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

ಇಂದು SSLC ರಿಸಲ್ಟ್: 8.6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ, ಹೈಕೋರ್ಟ್ ಆದೇಶ ಹಿನ್ನೆಲೆ ಹಿಂದಿ ಗ್ರೇಡ್'ಗೆ ಕೊಕ್..!

ಕದನ ವಿರಾಮ ಒಪ್ಪಂದಕ್ಕೆ ಬೆಲೆ ಇಲ್ಲವೇ?: ಲೆಬನಾನ್‌ ಮೇಲೆ ಮುಂದುವರೆದ ಇಸ್ರೇಲ್ ದಾಳಿ, ಪತ್ರಕರ್ತೆ ಸೇರಿ ಐವರ ಸಾವು..!

ಎಚ್ಚೆತ್ತ ರಾಜ್ಯ ಸರ್ಕಾರ: ಮಣ್ಣಿನ ಕುಸಿತ ತಡೆಗೆ 99 ಕೋಟಿ ರೂ. ಅನುದಾನ, ಉತ್ತರ ಕನ್ನಡ ಜಿಲ್ಲೆಗೆ ವಿಶೇಷ ಪ್ಯಾಕೇಜ್..!

SCROLL FOR NEXT