ಸಾಂದರ್ಭಿಕ ಚಿತ್ರ 
ರಾಜ್ಯ

ಸಂಕೇಶ್ವರ: ನದಿಯಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ಸಾವು; ಪುತ್ರನಿಗಾಗಿ ಶೋಧ

ಹಿರಣ್ಯಕೇಶಿ ನದಿ ತೀರದಲ್ಲಿರುವ ಶಂಕರಲಿಂಗ ದೇವಸ್ಥಾನಕ್ಕೆ ತಾಯಿ, ಮಗ ಬಂದಿದ್ದರು. ಬಳಿಕ ಸುಪ್ರೀತ್‌ ದೇವಸ್ಥಾನದ ಪಕ್ಕದಲ್ಲೇ ಇರುವ ಹಿರಣ್ಯಕೇಶಿ ನದಿಗೆ ಈಜಲು ಹೋಗಿದ್ದ.

ಸಂಕೇಶ್ವರ: ನದಿಯಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ಹೋಗಿದ್ದ ತಾಯಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದು, ಮಗನೂ ನಾಪತ್ತೆಯಾಗಿರುವ ಘಟನೆ ಸಂಕೇಶ್ವರ ಪಟ್ಟಣದ ಹೊರವಲಯದ ಹಿರಣ್ಯಕೇಶಿ ನದಿಯಲ್ಲಿ ಮಂಗಳವಾರ ನಡೆದಿದೆ.

ಸಂಕೇಶ್ವರ ಪಟ್ಟಣದ ನಿವಾಸಿ ಲಕ್ಷ್ಮೀ ಸುಧಾಕರ ಕುಟೋಳಿ (27) ಮೃತಪಟ್ಟಿದ್ದಾರೆ. ಮಗ ಸುಪ್ರೀತ ಸುಧಾಕರ ಕುಟೋಳಿ (9) ಸಹ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಇನ್ನೂ ಮೃತದೇಹ ಸಿಕ್ಕಿಲ್ಲ. ಅಗ್ನಿ ಶಾಮಕ ದಳದಿಂದ ಹುಡುಕಾಟ ಮುಂದುವರಿದಿದೆ.

ಹಿರಣ್ಯಕೇಶಿ ನದಿ ತೀರದಲ್ಲಿರುವ ಶಂಕರಲಿಂಗ ದೇವಸ್ಥಾನಕ್ಕೆ ತಾಯಿ, ಮಗ ಬಂದಿದ್ದರು. ಬಳಿಕ ಸುಪ್ರೀತ್‌ ದೇವಸ್ಥಾನದ ಪಕ್ಕದಲ್ಲೇ ಇರುವ ಹಿರಣ್ಯಕೇಶಿ ನದಿಗೆ ಈಜಲು ಹೋಗಿದ್ದ. ನದಿಯಲ್ಲಿ ಮುಳುಗುತ್ತಿದ್ದ ಮಗನನ್ನು ಕಂಡು ರಕ್ಷಿಸಲು ಹೋಗಿದ್ದ ತಾಯಿ ಈಜು ಬಾರದೇ ಮುಳುಗಿ ಮೃತಪಟ್ಟಿದ್ದಾರೆ.

ಶೋಧ ಕಾರ್ಯಾಚರಣೆ ವೇಳೆ ತಾಯಿ ಲಕ್ಷ್ಮೀ ಅವರ ಮೃತದೇಹ ಪತ್ತೆಯಾಗಿದೆ. ನದಿ ತೀರದಲ್ಲಿ ಬಾಲಕನ ಬಟ್ಟೆಗಳು ಪತ್ತೆಯಾಗಿರುವುದರಿಂದ, ಆತನು ಮುಳುಗಿರುವ ಶಂಕೆ ದೃಢಪಟ್ಟಿದೆ. ಮಗುವಿನ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamilnadu & West Bengal Election 2026 Live Updates | 11 ಗಂಟೆ ವೇಳೆಗೆ ತಮಿಳುನಾಡು ಶೇ. 37.56, ಪಶ್ಚಿಮ ಬಂಗಾಳದಲ್ಲಿ ಶೇ.41.11ರಷ್ಟು ಮತದಾನ

2025-26ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟ: ಶೇ.91.1 ರಷ್ಟು ತೇರ್ಗಡೆ; ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್- ಕಲಬುರಗಿ ಲಾಸ್ಟ್!

AI ಸೇವೆಗಳಲ್ಲಿ ಕೂಡ ಪ್ರೈಸ್ ವಾರ್ ಗೆ ಮುನ್ನುಡಿ ಬರೆಯುತ್ತಿದೆ ಚೀನಾ! (ಹಣಕ್ಲಾಸು)

US-Iran war:: ಅಮೆರಿಕಾ ನೌಕಾ ದಿಗ್ಭಂಧನ ಮುಂದುವರಿದರೆ ಹಾರ್ಮುಜ್ ಜಲಸಂಧಿ ತೆರೆಯಲ್ಲ; ಇರಾನ್ ಕಠಿಣ ನಿಲುವು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

ಇಂದು SSLC ರಿಸಲ್ಟ್: 8.6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ, ಹೈಕೋರ್ಟ್ ಆದೇಶ ಹಿನ್ನೆಲೆ ಹಿಂದಿ ಗ್ರೇಡ್'ಗೆ ಕೊಕ್..!

SCROLL FOR NEXT